ಶಾಸಕ ವೀರೇಂದ್ರ ಪಪ್ಪಿ ಮನೆಯಲ್ಲಿ 21.43 ಕೆಜಿ ಚಿನ್ನದ ಬಿಸ್ಕೆಟ್‌, 10.98 ಕೆಜಿ ಚಿನ್ನಲೇಪಿತ ಬೆಳ್ಳಿ ಗಟ್ಟಿ ಜಪ್ತಿ…!

ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆಯ ಮೇಲೆ ಸೆ.6ರಂದು ನಡೆಸಿದ್ದ ದಾಳಿ ವೇಳೆ ಬರೋಬ್ಬರಿ 21.43 ಕೆಜಿ ಚಿನ್ನದ ಬಿಸ್ಕೆಟ್‌ಗಳು, 10.98 ಕೆಜಿ ಚಿನ್ನಲೇಪಿತ ಬೆಳ್ಳಿ ಗಟ್ಟಿಗಳು, 24 ಕೋಟಿ ಮೌಲ್ಯದ 1 ಕೆಜಿ ಚಿನ್ನಾಭರಣಗಳನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ED) ತಿಳಿಸಿದೆ. … Continued

ಕಾರವಾರ ಶಾಸಕ ಸತೀಶ ಸೈಲ್ ಬಂಧಿಸಿದ ಇ.ಡಿ.

ಕಾರವಾರ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನಲ್ಲಿ ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಚಾರಣೆಗಾಗಿ ಇ.ಡಿ. ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಶಾಸಕ ಸತೀಶ್ ಸೈಲ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ಇ.ಡಿ. ಅಧಿಕಾರಿಗಳು … Continued

ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದ ಯುವಕ…!

ಬೆಳಗಾವಿ: ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕೆ ಆತ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಾಕು ಇರಿದ ಆರೋಪಿಯನ್ನು ದರ್ಶನ್ ಎಂದು ಗುರುತಿಸಲಾಗಿದೆ. ಮಡಿವಾಳಪ್ಪ ಎಂಬವರು ಗಂಭೀರವಾಗಿ ಹಲ್ಲೆಗೊಳಗಾದ ವ್ಯಕ್ತಿ ಎಂದು ಹೇಳಲಾಗಿದೆ. ದರ್ಶನ್ ಯುವತಿಯೊಂದಿಗೆ ದೇವಸ್ಥಾನಕ್ಕೆ ಹೋಗಿದ್ದ. ಇದಕ್ಕೆ ಮಡಿವಾಳಪ್ಪ ಎಂಬವರು ಯುವತಿಯ ಕುಟುಂಬದವರ … Continued

ಸಚಿವರ ಎದುರೇ ಗಂಡನಿಗೆ ಕಪಾಳ ಮೋಕ್ಷ ಮಾಡಿದ ಪತ್ನಿ…!

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಫೈಟ್‌ ಹುಕ್ಕೇರಿ ತಾಲೂಕಿನಲ್ಲಿ ತಾರಕ್ಕೇರಿದೆ. ಸಚಿವ ಸತೀಶ ಜಾರಕಿಹೊಳಿ ಎದುರೇ ಮಹಿಳೆಯೊಬ್ಬರು ತನ್ನ ಗಂಡನ ಕಪಾಳಕ್ಕೆ ಬಾರಿಸಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿ ಅವರ ಕಾಲರ್ ಹಿಡಿದು ಎಳೆದಾಡಿದ ಪತ್ನಿ ಕಪಾಳಕ್ಕೆ ಹೊಡೆದಿದ್ದಾಳೆ. ಜಾರಕಿಹೊಳಿಗೆ ಬೆಂಬಲ ನೀಡಿದ್ದಕ್ಕಾಗಿ ಪತಿಯನ್ನು … Continued

ಯಲ್ಲಾಪುರ : ಕಿರವತ್ತಿ ಬಳಿ ಮರಬಿದ್ದು ಗರ್ಭಿಣಿ ಮಹಿಳೆ ಸಾವು, ನಾಲ್ವರು ಮಕ್ಕಳಿಗೆ ಗಾಯ

ಯಲ್ಲಾಪುರ : ಅಂಗನವಾಡಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಬೃಹತ್ ಮರವೊಂದು ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಡೋಮಗೆರೆಯಲ್ಲಿ ಸೋಮವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮಹಿಳೆ … Continued

ಕುಂದಾಪುರ : ಗೋಪಾಡಿ ಬೀಚಿನಲ್ಲಿ ಸಮುದ್ರ ಪಾಲಾದ ಬೆಂಗಳೂರಿನ ಮೂವರು ಯುವಕರು

ಉಡುಪಿ : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್ ನಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ 9 ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, … Continued

ಜೈಲಿನೊಳಗೆ ಗ್ರಂಥಾಲಯ ಗುಮಾಸ್ತರಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೆಲಸ ; ದಿನಕ್ಕೆ ಸಂಬಳ…

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಗ್ರಂಥಾಲಯ ಗುಮಾಸ್ತರಾಗಿ ಕೆಲಸ ಮಾಡಲು ನಿಯೋಜಿಸಲಾಗಿದೆ, ಅಲ್ಲಿ ಅವರು ದಿನಕ್ಕೆ 522 ರೂ. ಗಳಿಸುತ್ತಾರೆ. ಅವರ ಪ್ರಮುಖ ಜವಾಬ್ದಾರಿಗಳಲ್ಲಿ ಇತರ ಕೈದಿಗಳಿಗೆ ಪುಸ್ತಕಗಳನ್ನು ನೀಡುವುದು ಮತ್ತು … Continued

ಶಿರಸಿ : ಬೆಣ್ಣೆಹೊಳೆ ಜಲಪಾತಕ್ಕೆ ಹೋಗಿದ್ದ ಓರ್ವ ನಾಪತ್ತೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಸಮೀಪದ ಬೆಣ್ಣೆಹೊಳೆ ಜಲಪಾತ ನೋಡಲು ಭಾನುವಾರ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ನಾಪತ್ತೆಯಾಗಿದ್ದಿನ್ನೋರ್ವ ವಿದ್ಯಾರ್ಥಿಯನ್ನು ಶೋಧ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಲಾಗಿದೆ ಎಂದು ಹೇಳಲಾಗಿದೆ. ನಗರದ ಅರಣ್ಯ ಪದವಿ ಕಾಲೇಜಿನ ರಾಹುಲ್ ಎಂಬಾತ ನೀರಿನಲ್ಲಿ ಕಣ್ಮರೆಯಾದ ವಿದ್ಯಾರ್ಥಿ. ಎನ್ನಲಾಗಿದೆ. … Continued

ರಮೇಶಬಾಬು, ಜಕ್ಕಪ್ಪನವರ ಸೇರಿ ವಿಧಾನ ಪರಿಷತ್ತಿಗೆ ನಾಲ್ವರ ನೇಮಕ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸುಮಾರು ಆರೇಳು ತಿಂಗಳಿಂದ ಖಾಲಿಯಿದ್ದ ನಾಲ್ಕು ವಿಧಾನ ಪರಿಷತ್‌ ಸ್ಥಾನಗಳಿಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು ಸೇರಿದಂತೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು, ಕರ್ನಾಟಕ … Continued

ಬಂಡೀಪುರ | ಸಫಾರಿ ವಾಹನ ಅಟ್ಟಾಡಿಸಿಕೊಂಡು ಬಂದ ಕಾಡಾನೆ ; ವೀಡಿಯೋ ವೈರಲ್…

ಚಾಮರಾಜನಗರ : ಸಫಾರಿ ವಾಹನದ ಮೇಲೆ ಕಾಡಾನೆ (Wild Elephant) ದಾಳಿಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಸಫಾರಿಯಲ್ಲಿ ನಡೆದಿದೆ. ಈಗ ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸಫಾರಿ (Safari) ವಾಹನ ಹೋಗುತ್ತಿದ್ದಾಗ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆ ಸಫಾರಿ ಜೀಪ್ ಕಂಡ ಕೂಡಲೇ ಕೋಪಗೊಂಡು ಅಟ್ಟಾಡಿಸಿಕೊಂಡು … Continued