ಮಹೇಶ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿ.ಎಲ್. ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದ್ದು, ಉಡುಪಿ … Continued

ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಮಾಸ್ಕ್‌ ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಆಗುತ್ತಿದೆ. ನೇತ್ರಾವತಿ ನದಿ ದಡದಲ್ಲಿ ನೂರಾರು ಮಹಿಳೆಯರು, ಯುವತಿಯರ ಶವಗಳನ್ನು ಹೂತು ಹಾಕಿದ್ದೇನೆ ಎಂಬ ಅನಾಮಿಕನ ಹೇಳಿಕೆ ಕುರಿತು ಆತನ ಜೊತೆಗೆ ಕೆಲಸ ಮಾಡಿದ್ದ ಸ್ನೇಹಿತ ಎಂದು ಹೇಳಿಕೊಂಡಿರುವ ವ್ಯಕ್ತಿ ನೀಡಿರುವ ಹೇಳಿಕೆ ಪ್ರಕರಣದ ಬಗ್ಗೆ ಮತ್ತೊಂದು ಟ್ವಿಸ್ಟ್‌ ನೀಡಿದೆ. ಮಾಸ್ಕ್ ಮ್ಯಾನ್ ಹೇಳಿದಂತೆ … Continued

ಮಹಾರಾಷ್ಟ್ರದಲ್ಲಿ ಮಳೆ | ಉಕ್ಕಿ ಹರಿದ ಘಟಪ್ರಭಾ ; ಗೋಕಾಕದಲ್ಲಿ ಪ್ರವಾಹ : ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಗೋಕಾಕ ಪಟ್ಟಣದಲ್ಲಿ ಪ್ರವಾಹ ಉಂಟಾಗಿದೆ, ನೂರಕ್ಕೂ ಹೆಚ್ಚು ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿವೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಕೃಷ್ಣೆ ತುಂಬಿ ಹರಿಯುತ್ತಿದೆ. ಘಟಪ್ರಭೆ ಕೂಡ ಅಬ್ಬರಿಸುತ್ತಿದ್ದು, ೬೦ ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಘಟಪ್ರಭಾ ನದಿಗೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡ್ಮೂರು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ವಾಯುಭಾರ ಕುಸಿತದಿಂದ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಇನ್ನೂ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು (ಆಗಸ್ಟ್ 20) ಉತ್ತರ ಕನ್ನಡ , ಹಾವೇರಿ,ಬೆಳಗಾವಿ, ಧಾರವಾಡ, ಬಾಗಲಕೋಟೆ ಸೇರಿದಂತೆ ಒಟ್ಟು 5 ಜಿಲ್ಲೆಗಳ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ … Continued

ಗೋಕಾಕ | ಮಳೆಗೆ ಮನೆ ಕುಸಿದುಬಿದ್ದು ಮಹಿಳೆ ಸಾವು, ಇಬ್ಬರಿಗೆ ಗಾಯ

ಬೆಳಗಾವಿ : ಭಾರಿ ಮಳೆಯಿಂದಾಗಿ ಮನೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಮೃತೊಟ್ಟ ಘಟನೆ ಜಿಲ್ಲೆಯ ಗೋಕಾಕದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಗೋಕಾಕದ ಸಂಗಮ ನಗರದ ಫರೀದಾಬಾನು ಶಕೀಲ್ ಅಹ್ಮದ್ ಕನವಾಡ (50) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರ ಪುತ್ರ  ಮತ್ತು ಪುತ್ರಿ  ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. … Continued

ಭಾರಿ ಮಳೆ ಮುನ್ಸೂಚನೆ; ಉತ್ತರ ಕನ್ನಡ ಜಿಲ್ಲೆ 6 ತಾಲೂಕುಗಳ ಶಾಲೆಗಳಿಗೆ ಬುಧವಾರ (ಆ.20) ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಆರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಬುಧವಾರ (ಆಗಸ್ಟ್ 20) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ (IMD), ಬೆಂಗಳೂರು ಭಾರಿ ಮಳೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ದಾಂಡೇಲಿ ಮತ್ತು ಜೊಯಿಡಾ ತಾಲೂಕುಗಳ ಅಂಗನವಾಡಿಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ … Continued

ಸಿದ್ದಾಪುರ | ಮದ್ದಳೆ ವಾದಕ ಶಂಕರ ಭಾಗವತರಿಗೆ ಅನಂತ ಶ್ರೀ ಪ್ರಶಸ್ತಿ ಪ್ರದಾನ ; ʼಕೊಳಗಿ ಅನಂತಣ್ಣʼ ಕೃತಿ ಬಿಡುಗಡೆ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆ ವಿವಿಧ ಕಲೆಗಳಿಗೆ ಹೆಸರುವಾಸಿಯಾಗಿದೆ. ಈಗ ಭಾಗದ ಎಲ್ಲೆಡೆಗಳಲ್ಲಿ ಹಿಂದೂಸ್ತಾನೀ ಸಂಗೀತಗಾರರು ಸಿಗುತ್ತಾರೆ. ಆದರೆ ಯಕ್ಷಗಾನ ಕಲಾವಿದರ ಕೊರತೆ ಎದ್ದು ಕಾಣುತ್ತಿದೆ. ಇಲ್ಲಿನ ಅಧಿಕಾರಿಗಳು ಮತ್ತು ರಾಜಕಾರಣಿಗಳು ಯಕ್ಷಗಾನ ಕಲೆಗೆ ಸಲ್ಲಿಸಬೇಕಾದ ಸೇವೆ, ಗೌರವವನ್ನು ಸಲ್ಲಿಸುವಲ್ಲಿ ವಿಫಲರಾದಂತಿದೆ ಎಂದು ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಐನಕೈ ಹೇಳಿದರು. ಉತ್ತರ … Continued

ವೀಡಿಯೊ…| ಹೊನ್ನಾವರ : ಲಿಂಗನಮಕ್ಕಿ ಅಣೆಕಟ್ಟಿನಿಂದ ಶರಾವತಿ ನದಿಗೆ 15000 ಕ್ಯೂಸೆಕ್ ನೀರು ಬಿಡುಗಡೆ

ಕಾರವಾರ : ಶರಾವತಿಯ ಲಿಂಗನಮಕ್ಕಿ ಜಲಾಶಯದಿಂದ ಇಂದು ಮಂಗಳವಾರ (ಆಗಸ್ಟ್‌ 19) ನೀರನ್ನು ಹೊರಕ್ಕೆ ಬಿಡಲಾಗಿದೆ. ಲಿಂಗನಮಕ್ಕಿ ಜಲಾಶಯದಿಂದ ಒಟ್ಟು 15000 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಮೊದಲು ಮೂರು ಗೇಟಗಗಳನ್ನು ತೆಗೆದು ನೀರನ್ನು ಹೊರಕ್ಕೆ ಕಳುಹಿಸಲಾಗಿತ್ತು. ನಂತರ 11 ಗೇಟ್‌ಗಳನ್ನು ತೆರೆದು ಒಟ್ಟು 15000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹೀಗಾಗಿ … Continued

ಉದ್ಯಮಿ, ರಾಜಕೀಯ ಧುರೀಣ ಯಶೋಧರ ನಾಯ್ಕ ನಿಧನ

ಕಾರವಾರ: ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಯಶೋಧರ ನಾಯ್ಕ (69)  ಇಂದು, ಮಂಗಳವಾರ (ಆಗಸ್ಟ್‌ 19) ಮುಂಬೈನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳ್ಕೋಡು ಮೂಲದವರಾದ ಯಶೋಧರ ನಾಯ್ಕ ಅವರು ನಾಲ್ಕು ದಶಕಗಳಿಗೂ … Continued

ಕೇರಳ ಲಾಟರಿಯಲ್ಲಿ 1 ಕೋಟಿ ರೂ. ಗೆದ್ದ ಸುಳ್ಯದ ನಿವಾಸಿ…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಿವಾಸಿಯೊಬ್ಬರಿಗೆ ಕೇರಳ ಕೇರಳ ರಾಜ್ಯ ಲಾಟರಿಯಲ್ಲಿ 1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ. ಶನಿವಾರ ನಡೆದ ಡ್ರಾದಲ್ಲಿ, OG 445643 ಸಂಖ್ಯೆಯ ಟಿಕೆಟ್ ಸುಳ್ಯ ತಾಲೂಕಿನ ಉಬರಡ್ಕದ ವಿನಯ ಕ್ಯಾಟರರ್ಸ್ ಮಾಲೀಕ ವಿನಯ ಯಾವಟೆ ಅವರಿಗೆ ಅದೃಷ್ಟ ತಂದುಕೊಟ್ಟಿತು. ವಿನಯ ಯಾವಟೆ ಕೇರಳ ಲಾಟರಿಯ 1 … Continued