ಕಾಂಗ್ರೆಸ್‌ ಶಾಶ್ವತವಾಗಿ ಪ್ರತಿಪಕ್ಷದಲ್ಲಿರುವಂತೆ ಮಾಡ್ತೇನೆ: ಗುಡುಗಿದ ಯಡಿಯೂರಪ್ಪ

ಬೆಂಗಳೂರು: ಸವಾಲುಗಳನ್ನು ಎದುರಿಸಿ ಜನರ ವಿಶ್ವಾಸ ಗೆದ್ದು ೪ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ. ಸವಾಲುಗಳನ್ನು ಎದುರಿಸಲು ನನಗೆ ಎಲ್ಲಿಲ್ಲದ ಉತ್ಸಾಹ. ಸವಾಲುಗಳು ನನ್ನನ್ನು ಗಟ್ಟಿಗೊಳಿಸುತ್ತವೆ. ಮುಂದಿನ ಚುನಾವಣೆಯಲ್ಲೂ ಎಲ್ಲ ಸವಾಲುಗಳನ್ನು ಎದುರಿಸಿ ಬಿಜೆಪಿಯನ್ನು ೧೫೦ ಸ್ಥಾನಗಳಲ್ಲಿ ಗೆಲ್ಲಿಸಿ ಮತ್ತೆ ಬಿಜೆಪಿ ಸರ್ಕಾರವನ್ನೆ ಅಧಿಕಾರಕ್ಕೆ ತಂದು ಕಾಂಗ್ರೆಸ್‌ನ್ನು ಶಾಶ್ವತವಾಗಿ ಪ್ರತಿಪಕ್ಷದ ಸ್ಥಾನದಲ್ಲಿರುವಂತೆ ಮಾಡಿಯೇ ತೀರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ … Continued

ಎಸ್‌ಟಿ ಮೀಸಲಿಗಾಗಿ ಫೆ.೭ರಂದು ಕುರುಬರ ಬೃಹತ್‌ ಸಮಾವೇಶ

ಬೆಂಗಳೂರು: ಕರ್ನಾಟಕದ ಕುರುಬರನ್ನು ಎಸ್ಟಿ ಮೀಸಲಾತಿಗೆ ಒಳಪಡಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿ ನಡೆಸಿದ ಕುರುಬರ ಐತಿಹಾಸಿಕ ಪಾದಯಾತ್ರೆ ಅಭೂತಪೂರ್ವ ಯಶಸ್ವಿಯಾಗಿದ್ದು, ಫೆ,೭ರಂದು ಬೆಂಗಳೂರಿನ ಇಂಟರ್‌ನ್ಯಾಶನಲ್‌ ಎಕ್ಸಿಬಿಶನ್‌ ಮೈದಾನದಲ್ಲಿ ಕುರುಬರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟ … Continued

ನಿಮ್ಹಾನ್ಸ್‌ನಲ್ಲಿ ಮರೆವಿನ ಕಾಯಿಲೆ ಚಿಕಿತ್ಸಾ ಕೇಂದ್ರ

ಬೆಂಗಳೂರು: ಇಲ್ಲಿನ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ಮೆಂಟಲ್‌ ಹೆಲ್ತ್‌ ಆಂಡ್‌ ನ್ಯೂರೋ ಸಾಯನ್ಸ್‌ (ನಿಮ್ಹಾನ್ಸ್)‌ ನಲ್ಲಿ ಮೊದಲ ಮರೆವಿನ ಕಾಯಿಲೆ ಚಿಕಿತ್ಸಾ ಕೇಂದ್ರ ಆರಂಭವಾಗಲಿದೆ. ಇಲ್ಲಿನ ಸಮುದಾಯ ಮಾನಸಿಕ ಆರೋಗ್ಯ ಕೇಂದ್ರದ ಕ್ಯಾಂಪಸ್‌ನಲ್ಲಿ ನೂತನ ಕೇಂದ್ರ ಆರಂಭಗೊಳ್ಳುವುದು. ಕೇಂದ್ರ ನಿರ್ಮಾಣಗೊಳ್ಳಲು ಕನಿಷ್ಟ ೧೮ ತಿಂಗಳುಗಳ ಅವಶ್ಯಕತೆಯಿದೆ ಎಂದು ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಪಿ.ಟಿ.ಶಿವಕುಮಾರ ತಿಳಿಸಿದ್ದಾರೆ. ವಸತಿ … Continued

ಬೇರೆ ರಾಜ್ಯಗಳಿಂದ ವಿದ್ಯಾರ್ಥಿಗಳ ಸಮವಸ್ತ್ರ ಖರೀದಿಗೆ ಬ್ರೇಕ್

ಬೆಂಗಳೂರು: ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುವ ಸಮವಸ್ತ್ರವನ್ನು ಬೇರೆ ರಾಜ್ಯದಿಂದ ಖರೀದಿ ಮಾಡುವುದನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಹೇಳಿರುವ ಜವಳಿ ಸಚಿವ ಶ್ರೀಮಂತ ಪಾಟೀಲ್, ವಿದಾನ ಪರಿಷತ್‌ನಲ್ಲಿ ಶುಕ್ರವಾರ ತಿಳಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ ನೇಕಾರರಿಂದಲೇ ಸಮವಸ್ತ್ರ ಖರೀದಿಸಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಕೋವಿಡ್ ಸಮಯದಲ್ಲಿ ಜವಳಿ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಮಂದಿ ಉದ್ಯೋಗ … Continued

ಶುದ್ಧ ಕುಡಿಯುವ ನೀರಿನ ಘಟಕ ಅವ್ಯವಹಾರ ತನಿಖೆಗೆ ಜಂಟಿ ಸದನ ಸಮಿತಿ

ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಯೋಜನೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆಗೆ ಜಂಟಿ ಸದನ ಸಮಿತಿ ರಚಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ವಿಧಾನ ಪರಿಷತ್‍ನಲ್ಲಿ ಸದಸ್ಯ ರಘುನಾಥ್ ಮಲ್ಕಾಪುರೆ, ಶಶಿಲ್ ಜಿ.ನಮೋಷಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಾಕಷ್ಟು ಮಾಹಿತಿ ನೀಡಬೇಕಿದೆ. ಹಾಗಾಗಿ … Continued

ರಾಜ್ಯದಲ್ಲಿ ೪೭೪ ಜನರಿಗೆ ಕೊರೋನಾ, ೪೭೦ ಜನ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ ಕೊರೊನಾದಿಂದ ಇಬ್ಬರು ಸೋಂಕಿತರು ಮೃತಪಟ್ಟಿದ್ದು, 474 ಜನರಿಗೆ ಸೋಂಕು ದೃಢಪಟ್ಟಿದೆ ಬೆಂಗಳೂರು ನಗರದಲ್ಲಿ ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದಾರೆ. 470 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ 5917 ಸಕ್ರಿಯ ಪ್ರಕರಣಗಳಿವೆ ,146 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

ಬೆಂಗಳೂರು;ವಿಧಾನ ಪರಿಷತ್ತಿನ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಉಪಸಭಾಪತಿ ಎಂ.ಕೆ ಪ್ರಾಣೇಶ್ ಅವರಿಗೆ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಪ್ರತಾಪಚಂದ್ರ ಶೆಟ್ಟಿ ಅವರನ್ನು ಅಭಿನಂದಿಸಿದರು ಬಿಜೆಪಿ-ಜೆಡಿಎಸ್ ಮೈತ್ರಿ: ವಿಧಾನಪರಿಷತ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಸಭಾಪತಿ ಪ್ರತಾಪಚಂದ್ರ … Continued

ತಾಪಂ ವ್ಯವಸ್ಥೆ ರದ್ದತಿಗೆ ರಾಜ್ಯ ಸರ್ಕಾರ ಚಿಂತನೆ: ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ೩ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಬದಲಾಯಿಸಿ ೨ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಂಡು ಸಂವಿಧಾನ ತಿದ್ದುಪಡಿಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್   ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ವಿಧಾನಸಭೆಗೆ ತಿಳಿಸಿದರು. ಶೂನ್ಯ ವೇಳೆಯಲ್ಲಿ … Continued

ಮಳೆ ನೀರು ಸಂಗ್ರಹಕ್ಕೆ ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪ ಬದಲಾವಣೆ

ಬೆಂಗಳೂರು: ಮಳೆ ನೀರು ಸಂಗ್ರಹಿಸಲು ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪ ಬದಲಾವಣೆ ಮಾಡಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಹರತಾಳ್ ಹಾಲಪ್ಪ ಮಲೆನಾಡಿನ ಭಾಗಗಳಲ್ಲಿ ಮಳೆಗಾಲ ಬಂದರೆ ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳು ಸೋರುತ್ತವೆ. ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ … Continued

ಬೇರೆ ಪಕ್ಷದಿಂದ ಬಂದು ಸಿಎಂ ಆಗಬಹುದು, ನಾವು ಮಂತ್ರಿಯಾಗೋದು ತಪ್ಪಾ..?

ಬೆಂಗಳೂರು: ಬೇರೆ ಬೇರೆ ಪಕ್ಷದಿಂದ ಬಂದು ಮುಖ್ಯಮಂತ್ರಿಗಳೇ ಆಗಿರುವಾಗ, ನಾವು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದು ಮಂತ್ರಿ ಆದರೆ ತಪ್ಪೇನು ಎಂದು ಗುರುವಾರ ಸಚಿವ ಎಂಟಿಬಿ ನಾಗರಾಜು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಸಂದರ್ಭದಲ್ಲಿ ಜೆಡಿಎಸ್‌ನ ಬಂಡೆಪ್ಪಕಾಶಂಪುರ ಮಾತನಾಡುತ್ತ ಕಾಂಗ್ರೆಸ್-ಜೆಡಿಎಸ್‌ನಿಂದ ಬಂದವರಿಂದ ಈ ಸರ್ಕಾರ ಆಗಿದೆ ಎಂದು ತಿವಿದರು. … Continued