ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗದ್ದಲ: ಕಾಂಗ್ರೆಸ್‌ ಸದಸ್ಯೆ ಅಸ್ವಸ್ಥ

ಹುಬ್ಬಳ್ಳಿ: ಬುಧವಾರ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಗದ್ದಲ ನಡೆದು ಸದಸ್ಯೆಯೊಬ್ಬರು ಅಸ್ವಸ್ಥಗೊಂಡಿದ್ದಾರೆ. ಸಭೆಗೆ ಅಗೌರವ ತೋರಲಾಗಿದೆ ಎಂದು ಪಾಲಿಕೆ ಮೇಯರ್ ಮೂವರು ಕಾಂಗ್ರೆಸ್ ಸದಸ್ಯರನ್ನು ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ. ಪಾಲಿಕೆಯ ಸಾಮಾನ್ಯ ಸಭೆಯ ವೇಳೆ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ತಾರಕಕ್ಕೆ ಹೋಗುತ್ತಿದ್ದಂತೆಯೇ ಅಲ್ಲಿದ್ದ ಸದಸ್ಯರನ್ನು … Continued

ಬೆಂಗಳೂರಿನ ಕಂಪನಿಯ ಸರ್ವರ್‌ ಹ್ಯಾಕ್‌ ಮಾಡಿ 378 ಕೋಟಿ ಕಳ್ಳತನ ; ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ

ಬೆಂಗಳೂರು : ಬೆಂಗಳೂರು ಮೂಲದ ಕ್ರಿಪ್ಟೋಕರೆನ್ಸಿ ವಿನಿಮಯ ಕೇಂದ್ರವಾದ ನೆಬ್ಲಿಯೊ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನಿಂದ 378 ಕೋಟಿ ರೂ.ಗಳಿಗೂ ಹೆಚ್ಚು ಹಣ ಕಳ್ಳತನವಾಗಿರುವ ಬೃಹತ್ ಸೈಬರ್ ಅಪರಾಧವನ್ನು ಬೆಂಗಳೂರು ಪೊಲೀಸರು ಬಯಲು ಮಾಡಿದ್ದಾರೆ. ಒಂದೇ ಪ್ರಕರಣದಲ್ಲಿ 378 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಕ್ರಿಪ್ಟೋ ಕರೆನ್ಸಿ ಕಳ್ಳತನ ಮಾಡಿರುವ ಘಟನೆ, ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ … Continued

ಶಿರಸಿಯಲ್ಲಿ ಬೃಹತ್ ಸೈಬರ್ ವಂಚನೆ : ಮುಂಬೈ ಪೊಲೀಸರ ಸೋಗಿನಲ್ಲಿ ವ್ಯಕ್ತಿಯಿಂದ 89.90 ಲಕ್ಷ ರೂ. ಲಪಟಾಯಿಸಿದ ವಂಚಕರು…!

ಶಿರಸಿ: ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬರು ಬರೋಬ್ಬರಿ 89.90 ಲಕ್ಷ ರೂ. ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಶಿರಸಿಯ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿರಸಿಯ ಪ್ರಗತಿ ನಗರದ ರವೀಂದ್ರ ಕೃಷ್ಣ ಹೆಗಡೆ ಎಂಬವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ಅವರಿಗೆ ಅಪರಿಚಿತ … Continued

‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ : ಇದರ ಅರ್ಥವೇನು..?

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಶ್ರಾವಣ ಮಾಸದ ನಾಗರ ಪಂಚಮಿಯಂದು ನಡೆದ ಹನುಮಂತ ದೇವರ ಕಾರ್ಣಿಕೋತ್ಸವದಲ್ಲಿ “ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ, ಎಚ್ಚರ” ಎಂದು ಕಾರ್ಣಿಕ ನುಡಿಯಲಾಗಿದೆ. ಮಂಗಳವಾರ ಸಂಜೆ ಗೋಧೂಳಿ ಲಗ್ನದಲ್ಲಿ ಗಂಗೆ ಪೂಜೆ ನೆರವೇರಿಸಿದ ನಂತರ ಹನುಮಂತ ದೇವರನ್ನು ಮೈಮೇಲೆ ಆಹ್ವಾನ ಮಾಡಿಕೊಂಡ ಗಣಮಗ ಪಿಳ್ಳೆಮಟ್ಟಿ ಗುಡ್ಡದಲ್ಲಿ … Continued

ಬೆಂಗಳೂರು | ಅಲ್ ಖೈದಾ ಭಯೋತ್ಪಾದಕ ಮಾಡ್ಯೂಲ್‌ ನ ಪ್ರಮುಖ ಶಂಕಿತ ಮಹಿಳಾ ‘ಹ್ಯಾಂಡ್ಲರ್‌’ ಬಂಧನ

ಬೆಂಗಳೂರು : ಭಾರತೀಯ ಉಪಖಂಡದಲ್ಲಿ ಅಲ್-ಖೈದಾ (AQIS) ಜೊತೆ ಸಂಪರ್ಕ ಹೊಂದಿರುವ ಭಯೋತ್ಪಾದಕ ಘಟಕದ ಹಿಂದಿನ ಪ್ರಮುಖ ಸಂಚುಕೋರಳನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ. ಆರೋಪಿಯನ್ನು 30 ವರ್ಷದ ಶಮಾ ಪರ್ವೀನ್ ಎಂದು ಗುರುತಿಸಲಾಗಿದ್ದು, ಆಕೆಯನ್ನು ಮಂಗಳವಾರ ಕರ್ನಾಟಕದ ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ವರದಿಗಳ ಪ್ರಕಾರ, ಪರ್ವೀನ್ ಇಡೀ ಘಟಕವನ್ನು ನಡೆಸುತ್ತಿದ್ದಳು ಮತ್ತು ಕರ್ನಾಟಕದಿಂದ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ : ಮುನ್ನೆಚ್ಚರಿಕೆ

ಬೆಂಗಳೂರು: ಇನ್ನೂ ಒಂದೆರಡು ದಿನ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಬಲವಾದ ಗಾಳಿ ಬೀಸಲಿದೆ. ಮತ್ತು ಬಲವಾದ ಗಾಳಿಯೊಂದಿಗೆ ಮಧ್ಯಮ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಅದು … Continued

ಬೆಂಗಳೂರು | ಬೀದಿ ನಾಯಿಗಳ ದಾಳಿಗೆ ವೃದ್ಧ ಸಾವು

ಬೆಂಗಳೂರು : ಕೊಡಿಗೇಹಳ್ಳಿಯಲ್ಲಿ ಭಾನುವಾರ ಮುಂಜಾನೆ ಮನೆಯ ಹೊರಗೆ ಬೀದಿ ನಾಯಿಗಳ ಗುಂಪೊಂದು ಸೀತಪ್ಪ ಎಂಬ 70 ವರ್ಷದ ವ್ಯಕ್ತಿ ಮೇಲೆ ದಾಳಿ ನಡೆಸಿದ ನಂತರ ಅವರು ಸಾವಿಗೀಡಾಗಿದ್ದಾರೆ. ಅವರ ಕುಟುಂಬ ಸದಸ್ಯರ ಪ್ರಕಾರ, ವೃದ್ಧ ವ್ಯಕ್ತಿಗೆ ನಿದ್ರೆ ಬಾರದ ಕಾರಣ ಮಧ್ಯರಾತ್ರಿಯ ಸುಮಾರಿಗೆ ವಾಕಿಂಗ್‌ಗೆ ಹೋಗಿದ್ದಾಗ ಕನಿಷ್ಠ ಎಂಟು ಬೀದಿ ನಾಯಿಗಳ ಗುಂಪು ಅವರ … Continued

ಮಂಗಳೂರು | ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ

ಮಂಗಳೂರು : ಮಂಗಳೂರಿನ ಸೇಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಬಿಎ ವಿದ್ಯಾರ್ಥಿನಿ ರೆಮೋನಾ ಎವೆಟ್ ಪಿರೇರಾ, 170 ಗಂಟೆಗಳ ಭರತನಾಟ್ಯದ ನೃತ್ಯ ಪ್ರದರ್ಶಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್​ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ. ಇದು ವಿಶ್ವದಲ್ಲೇ ಮೊದಲನೆಯದು. ಈ ದಾಖಲೆಯ ಪ್ರಯಾಣವು ಜುಲೈ 21 ರಂದು ಆರಂಭವಾಯಿತು. ಜುಲೈ 21 ರಂದು … Continued

ಬೆಂಗಳೂರು : ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ ; ಮೂವರ ಬಂಧನ

ಬೆಂಗಳೂರು : ಬೆಂಗಳೂರಿನ ಕಲಾಸಿಪಾಳ್ಯ ಬಸ್‌ ನಿಲ್ದಾಣದಲ್ಲಿ ಜಿಲೆಟಿನ್‌ ಹಾಗೂ ಡಿಟೊನೇಟರ್‌ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಗಣೇಶ, ಶಿವ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳು. ಜುಲೈ 23ರಂದು ಮಧ್ಯಾಹ್ನ ಕಲಾಸಿಪಾಳ್ಯದ ಶೌಚಾಲಯದ ಬಳಿ ಜಿಲೆಟಿನ್‌, ಡಿಟೊನೇಟರ್‌ ಪತ್ತೆಯಾಗಿದ್ದವು. ನಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ 6 (ಆರ್.ಇ.ಎಕ್ಸ್ – … Continued

ಚೀನಾದ ಅಲಿಎಕ್ಸ್‌ಪ್ರೆಸ್ ಆ್ಯಪ್ ಮಾರಾಟ ಮಾಡುವ ಕಾಲು ಒರೆಸುವ ಮ್ಯಾಟ್‌ ಮೇಲೆ ಪುರಿ ಜಗನ್ನಾಥ ದೇವರ ಚಿತ್ರ ; ಭುಗಿಲೆದ್ದ ಆಕ್ರೋಶ

ಭುವನೇಶ್ವರ: ಅಂತಾರಾಷ್ಟ್ರೀಯ ಇ-ಕಾಮರ್ಸ್ ವೇದಿಕೆಯಾದ ಚೀನಾದ ಅಲಿಎಕ್ಸ್‌ಪ್ರೆಸ್ ಅಪ್ಲಿಕೇಶನ್, ಪುರಿ ಜಗನ್ನಾಥ ದೇವರ ಚಿತ್ರವನ್ನು ಹೊಂದಿರುವ ಡೋರ್‌ಮ್ಯಾಟ್‌ಗಳನ್ನು ಮಾರಾಟ ಮಾಡುವುದರ ಬಗ್ಗೆ ದೊಡ್ಡ ವಿವಾದ ಭುಗಿಲೆದ್ದಿದೆ. ಈ ಆಕ್ಷೇಪಾರ್ಹ ಡೋರ್‌ಮ್ಯಾಟ್‌ ಪಾದಗಳನ್ನು ಒರೆಸಲು ಉದ್ದೇಶಿಸಲಾದ ಚಾಪೆಯ ಮೇಲೆ ಮುದ್ರಿತವಾದ ಜಗನ್ನಾಥ ದೇವರ ಮುಖವನ್ನು ಪ್ರದರ್ಶಿಸುತ್ತದೆ. ಜಾಹೀರಾತಿನಲ್ಲಿ ಚಾಪೆಯ ಮೇಲೆ ನಿಂತಿರುವ ವ್ಯಕ್ತಿಯನ್ನು ಸಹ ಚಿತ್ರಿಸಲಾಗಿದೆ, ಇದು … Continued