ಧರ್ಮಸ್ಥಳ | ಶವಗಳ ಹೂತಿಟ್ಟ ಪ್ರಕರಣ : 13 ಜಾಗ ತೋರಿಸಿದ ದೂರುದಾರ

ಮಂಗಳೂರು : ಧರ್ಮಸ್ಥಳ ಪೊಲೀಸ್‌ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎಂದು ಆರೋಪಿಸಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಮೃತದೇಹಗಳನ್ನುಹೂತುಹಾಕಿದ ಸಾಕ್ಷಿ ದೂರುದಾರ ವ್ಯಕ್ತಿಯು 13 ಸ್ಥಳಗಳನ್ನು ವಿಶೇಷ ತನಿಖಾ ತಂಡ(SIT)ದ ಅಧಿಕಾರಿಗಳಿಗೆ ತೋರಿಸಿದ್ದಾರೆ. ವಿಶೇಷ ತನಿಖಾ ತಂಡ (SIT) ಮಂಗಳೂರಿನಲ್ಲಿ ಎರಡು ದಿನಗಳ ವಿಚಾರಣೆಯ ನಂತರ ಈ ಬೆಳವಣಿಗೆ ನಡೆದಿದೆ. ಮಾಹಿತಿ ಬಹಿರಂಗಪಡಿಸುವ ವ್ಯಕ್ತಿ, 1998 … Continued

ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ರಸಗೊಬ್ಬರ ಪೂರೈಕೆ ; ಕೇಂದ್ರ ಸಚಿವ ನಡ್ಡಾಗೆ ಜೋಶಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರಿಂದ ಮನವಿ

ನವದೆಹಲಿ: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಬಿರುಸುಗೊಂಡಿದ್ದು, ಅಧಿಕ ರಸಗೊಬ್ಬರ ಪೂರೈಕೆ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರೆಲ್ಲ ಒಟ್ಟಾಗಿ ಸೇರಿ ಕೇಂದ್ರ … Continued

ಬೆಂಗಳೂರು | ದುಃಸ್ವಪ್ನವಾಗಿ ಮಾರ್ಪಟ್ಟ ಬೆಂಗಳೂರಿನ ಟೆಕ್ಕಿಯ ಬಂಬಲ್ ಡೇಟ್ ; ಫೇಕ್‌ ಡ್ರಗ್ಸ್‌ ದಾಳಿ, ಟೆಕ್ಕಿಯಿಂದ 2 ಲಕ್ಷ ರೂ. ಸುಲಿಗೆ…!

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿಯೊಬ್ಬರು ಬಂಬಲ್‌ನಲ್ಲಿ ಒಬ್ಬ ಮಹಿಳೆಯೊಂದಿಗೆ ಸಂಪರ್ಕಕ್ಕೆ ಬಂದರು. ವಾರಗಳ ಕಾಲ ಸಾಂದರ್ಭಿಕ ಸಂದೇಶ ಮತ್ತು ವೀಡಿಯೊ ಕರೆಗಳ ನಂತರ ಇಬ್ಬರೂ ಒಂದು ತಿಂಗಳ ನಂತರ ಡೇಟ್‌ಗೆ ಹೋಗಲು ನಿರ್ಧರಿಸಿದರು. ಅವರು ಕಾಫಿ ಅಂಗಡಿಯಲ್ಲಿ ಭೇಟಿಯಾದರು, ಎಲ್ಲವೂ ಸಾಮಾನ್ಯವಾಗಿತ್ತು. ನಂತರ, ಅವಳು ಒಂದು ಕೋಣೆಗೆ ಹೋಗಿ ಕೆಲವು ಪಾನೀಯಗಳನ್ನು ಇಬ್ಬರು ಸೇವಿಸುವಂತೆ ಹೇಳಿದಳು, ಆದರೆ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ ; ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ (stampede) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿಅಮಾನತು ಮಾಡಲಾಗಿದ್ದ ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ವಿಕಾಸ್‌ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು  ಪೊಲೀಸ್ ಕಮಿಷನರ್ … Continued

ಅಮೆರಿಕ ವೇದಿಕ್ ವೆಲ್ನೆಸ್ ವಿವಿ ವೈಬ್ರನ್ಸ್ 2025 ಟ್ಯಾಲೆಂಟ್‌ ಸ್ಪರ್ಧೆ : ಕುಮಟಾದ ಅದಿತಿ ಶಾನಭಾಗ ಕರ್ನಾಟಕಕ್ಕೆ ದ್ವಿತೀಯ

ಕುಮಟಾ : ಅಮೆರಿಕದ ಫ್ಲೋರಿಡಾದ ವೇದಿಕ್ ವೆಲ್ನೆಸ್ ವಿಶ್ವವಿದ್ಯಾಲಯ (ವಿಡಬ್ಲ್ಯೂಯು) ಆಯೋಜಿಸಿದ್ದ ಭಾರತೀಯ ಕಲೆ, ಸಂಗೀತದ ಟ್ಯಾಲೆಂಟ್‌ ಶೋ‌ ಸ್ಪರ್ಧೆ ವೈಬ್ರನ್ಸ್ 2025 ಸ್ಪರ್ಧೆಯಲ್ಲಿ ಕುಮಟಾದ ಅದಿತಿ ಶಾನಭಾಗ ಕರ್ನಾಟಕಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಫ್ಲೋರಿಡಾದ ವೇದಿಕ್ ವೆಲ್ನೆಸ್ ವಿಶ್ವವಿದ್ಯಾಲಯ ಆಯೋಜಿಸುವ ವೈಬ್ರನ್ಸ್ ಹೆಸರಿನ ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ … Continued

ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಕುಸಿದು ಬಿದ್ದು 25 ವರ್ಷದ ವ್ಯಕ್ತಿ ಸಾವು ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೈದರಾಬಾದ್ : ಭಾನುವಾರ ಸಂಜೆ ಹೈದರಾಬಾದ್‌ನ ನಾಗೋಲ್ ಕ್ರೀಡಾಂಗಣದಲ್ಲಿ ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ 25 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವಿಗೀಡಾದ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಗುಂಡ್ಲಾ ರಾಕೇಶ ಎಂದು ಗುರುತಿಸಲಾಗಿದ್ದು, ಅವರು ನಗರದ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಅವರು ಖಮ್ಮಮ್ ಜಿಲ್ಲೆಯ ತಲ್ಲಡಾದ ಮಾಜಿ ಉಪ ಸರಪಂಚ ಗುಂಡ್ಲಾ ವೆಂಕಟೇಶ್ವರಲು ಅವರ … Continued

ಡಿಸಿಎಂ ಡಿಕೆ ಶಿವಕುಮಾರ ಕಚೇರಿ, ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಕಚೇರಿ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ​ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 11 ಗಂಟೆಗೆ ಬಾಂಬ್‌ ಸ್ಪೋಟ ಮತ್ತು ಡಿಕೆಶಿ ಕಚೇರಿಯಲ್ಲಿ ಬಾಂಬ್ ಸ್ಫೋಟವಾಗಲಿದೆ ಎಂದು ಇ-ಮೇಲ್‌ ಬಂದಿತ್ತು. ತಕ್ಷಣ ಪೊಲೀಸರು, … Continued

ಇಂದು ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಏಳು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜುಲೈ 27ರಂದು ಆರೆಂಜ್‌ ಅಲರ್ಟ್‌ ನೀಡಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ. ಜುಲೈ 27ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. … Continued

ಗೃಹರಕ್ಷಕ ದಳ ದೈಹಿಕ ಪರೀಕ್ಷೆ ವೇಳೆ ಪ್ರಜ್ಞೆ ತಪ್ಪಿದ ಯುವತಿ ; ಆಸ್ಪತ್ರೆಗೆ ಒಯ್ಯುವಾಗ ಆಂಬುಲೆನ್ಸ್‌ನಲ್ಲಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ

ಪಾಟ್ನಾ: ಬಿಹಾರದ ಗಯಾ ಜಿಲ್ಲೆಯಲ್ಲಿ ಗೃಹರಕ್ಷಕ ದಳದ ನೇಮಕಾತಿ ಅಭಿಯಾನದಲ್ಲಿ ಭಾಗವಹಿಸಿದ್ದ 26 ವರ್ಷದ ಯುವತಿ ದೈಹಿಕ ಪರೀಕ್ಷೆಯ ಸಮಯದಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ಚಲಿಸುವ ಆಂಬ್ಯುಲೆನ್ಸ್‌ನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಜುಲೈ 24 ರಂದು ಬೋಧಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ನಡೆಯುತ್ತಿದ್ದ ಗೃಹರಕ್ಷಕ ದಳದ ನೇಮಕಾತಿ … Continued

ಬೆಂಗಳೂರು | ಅಂಗಡಿ ಮುಚ್ಚುವ ವೇಳೆ ಸಿನಿಮೀಯ ರೀತಿಯಲ್ಲಿ ಚಿನ್ನಾಭರಣದ ಅಂಗಡಿಗೆ ನುಗ್ಗಿ ದರೋಡೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಸಿನೆಮಾದ ದೃಶ್ಯದಂತೆ ಕಾಣುವ ಈ ದೃಶ್ಯದಲ್ಲಿ, ಬೆಂಗಳೂರಿನಲ್ಲಿ ಆಭರಣ ಅಂಗಡಿ ಮುಚ್ಚುವುದಕ್ಕಿಂತ ಸ್ವಲ್ಪ ಮೊದಲಿಗೆ ಅಂಗಡಿಗೆ ನುಗ್ಗಿದ ಮುಸುಕುಧಾರಿ ದರೋಡೆಕೋರರು ಅಪಾರ ಪ್ರಮಾಣದ ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ. ಕೆಲವೇ ನಿಮಿಷಗಳಲ್ಲಿ ಚಿನ್ನಾಭರಣ ನಡೆಸಿ ಪರಾರಿಯಾಗಿರುವ ದರೋಡೆಕೋರರ ಕೃತ್ಯ ಅಂಗಡಿಯೊಳಗೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಮಾಚೋಹಳ್ಳಿ ಗೇಟ್​ ಬಳಿ ಇರುವ ಭೈರವೇಶ್ವರ … Continued