ಕೇವಲ 23ನೇ ವಯಸ್ಸಿಗೆ 19 ಸರ್ಕಾರಿ ಪರೀಕ್ಷೆ ಪಾಸ್ ! ರಾಷ್ಟ್ರಪತಿಯಿಂದ ‘ಅಟ್-ಹೋಮ್’ ಗೌರವಕ್ಕೆ ಆಯ್ಕೆಯಾದ ಯುವತಿ

ನವದೆಹಲಿ: ಭಾರತದಲ್ಲಿ ಪ್ರತಿವರ್ಷ ಲಕ್ಷಾಂತರ ಯುವಕ-ಯುವತಿಯರು ಸರ್ಕಾರಿ ಉದ್ಯೋಗಗಳಿಗಾಗಿ ಪರೀಕ್ಷೆ ಬರೆಯುತ್ತಾರೆ. ಆದರೆ ಅತ್ಯಂತ ಕಠಿಣವಾದ ಈ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವವರ ಪ್ರಮಾಣ ಶೇಕಡಾ 0.5 ಕ್ಕಿಂತಲೂ ಕಡಿಮೆ. ಇಂತಹ ತೀವ್ರ ಪೈಪೋಟಿಯ ನಡುವೆ, ಛತ್ತೀಸ್‌ಗಢದ ರಾಯ್ಪುರದ 23 ವರ್ಷದ ಯುವತಿ ಚಾರು ಪಾಂಡೆ ಬರೋಬ್ಬರಿ 19 ಸರ್ಕಾರಿ ಉದ್ಯೋಗದ ನೇಮಕಾತಿ ಪರೀಕ್ಷೆಗಳನ್ನು ಪಾಸ್ … Continued

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ

ಫಿರೋಜಾಬಾದ್ (ಉತ್ತರ ಪ್ರದೇಶ): ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ ಭಾಗವತ್ ಅವರು ಪ್ರಯಾಣಿಸುತ್ತಿದ್ದ ದೆಹಲಿ ಮುಖಿ ‘ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್’ ರೈಲಿನ ಮೇಲೆ ಗುರುವಾರ ಸಂಜೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಚಲಿಸುತ್ತಿದ್ದ ರೈಲಿನ ಕೋಚ್ ಒಂದರ ಕಿಟಕಿ ಗಾಜು ಜಖಂಗೊಂಡಿದೆ. ಆದರೆ, ಘಟನೆಯಲ್ಲಿ ಮೋಹನ ಭಾಗವತ್ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಉತ್ತರ … Continued

ದೀದಿಗೆ ಶಾಕ್‌ ಮೇಲೆ ಶಾಕ್‌ ; ಹೊರಬಿತ್ತು ಎನ್‌ಡಿಎಗೆ ಬೆಂಬಲ ಸೂಚಿಸಿದ 19 ಟಿಎಂಸಿ ಸಂಸದರ ಪಟ್ಟಿ ; ಯಾರೆಲ್ಲ ಇದ್ದಾರೆ ಗೊತ್ತೆ ?

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಲೋಕಸಭೆಯಲ್ಲಿಯೂ ಪಕ್ಷವು ಇಬ್ಬಾಗವಾಗುವ ಹಂತಕ್ಕೆ ಬಂದು ತಲುಪಿದೆ. ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಬಹಿರಂಗವಾಗಿಯೇ ಬಂಡಾಯ ಎದ್ದಿರುವ 19 ಲೋಕಸಭಾ ಸಂಸದರ ಹೆಸರುಗಳು ಈಗ ಹೊರಬಿದ್ದಿದ್ದು, ಇವರೆಲ್ಲರೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಹಿ ಮಾಡಿದ ಪತ್ರವನ್ನು ರವಾನಿಸಿದ್ದಾರೆಎಂದು ಹೇಳಲಾಗಿದೆ. … Continued

ಮನೆ ಖಾಲಿ ಮಾಡುವಂತೆ ಕೋರ್ಟ್ ಆದೇಶ : ವೃದ್ಧ ತಂದೆಯನ್ನು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಮಗ !

ಮುಂಬೈ : ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತನಗೆ ಸೋಲಾದ ಕೆಲವೇ ಹೊತ್ತಿನಲ್ಲಿ ಮಗನೊಬ್ಬ ತನ್ನ 82 ವರ್ಷದ ವೃದ್ಧ ತಂದೆಯನ್ನೇ ಸಾರ್ವಜನಿಕ ರಸ್ತೆಯಲ್ಲಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಜಲಸಂಪನ್ಮೂಲ ಇಲಾಖೆಯ ನಿವೃತ್ತ ಉದ್ಯೋಗಿಯಾಗಿದ್ದ ಜಾಫರ್ ಕಮರುದ್ದೀನ್ ಸಯ್ಯದ್ ಪಟೇಲ್ ಎಂಬಾತ … Continued

ಭಾರತದ ಶೂಟಿಂಗ್ ದಂತಕಥೆ ಜಸ್ಪಾಲ್ ರಾಣಾ 49ನೇ ವಯಸ್ಸಿನಲ್ಲೇ ನಿಧನ

ನವದೆಹಲಿ: ಭಾರತದ ಖ್ಯಾತ ಶೂಟರ್ ಹಾಗೂ ಹೈ-ಪರ್ಫಾರ್ಮೆನ್ಸ್ ಪಿಸ್ತೂಲ್ ತರಬೇತುದಾರರಾದ ಜಸ್ಪಾಲ್ ರಾಣಾ (49) ಅವರು ಇಂದು ಶುಕ್ರವಾರ (ಜೂನ್‌ 12) ಬೆಳಗಿನ ಜಾವ ನವದೆಹಲಿಯಲ್ಲಿ ನಿಧನರಾಗಿದ್ದಾರೆ. ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ (NRAI) ಅಧ್ಯಕ್ಷರಾದ ಕಲಿಕೇಶ ನಾರಾಯಣ್ ಸಿಂಗ್ ದಿಯೋ ಅವರು ಈ ದುಃಖದ ಸಂಗತಿಯನ್ನು ದೃಢಪಡಿಸಿದ್ದಾರೆ. ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ಐಎಸ್‌ಎಸ್‌ಎಫ್‌ … Continued

ಮೀನಾಕ್ಷಿ ನಟರಾಜನ್ ನಾಮಪತ್ರ ವಿವಾದ ನಡುವೆಯೇ ಬಿಜೆಪಿಯ ಮೂರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.  ಬಿಜೆಪಿಯ ರಜನೀಶ್ ಅಗರ್ವಾಲ್, ತರುಣ ಚುಗ್ ಮತ್ತು ಮಹೇಶ ಕೇವತ್ ಅವರ ಅವಿರೋಧ ಆಯ್ಕೆಯನ್ನು ದೃಢೀಕರಿಸಿ ಚುನಾವಣಾ ಆಯೋಗವು (EC) ಪ್ರಮಾಣಪತ್ರಗಳನ್ನು ವಿತರಿಸಿದೆ. ಕಾಂಗ್ರೆಸ್ ಪಕ್ಷವು ಈ ಚುನಾವಣಾ ಫಲಿತಾಂಶವನ್ನು ತಡೆಯಲು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ತೀವ್ರ ಪ್ರಯತ್ನಗಳನ್ನು ನಡೆಸಿತಾದರೂ ಅಂತಿಮವಾಗಿ … Continued

ಅಮೆರಿಕ ಪಡೆಗಳಿಂದ 4 ದಿನದಲ್ಲಿ ಭಾರತೀಯ ಸಿಬ್ಬಂದಿ ಇದ್ದ ಮೂರನೇ ಹಡಗಿನ ಮೇಲೆ ಕ್ಷಿಪಣಿ ದಾಳಿ

ನವದೆಹಲಿ/ವಾಷಿಂಗ್ಟನ್ : ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಅಮೆರಿಕ ಪಡೆಗಳು ಒಮಾನ್ ಕೊಲ್ಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಬಾರಿಗೆ ಭಾರತೀಯ ಸಿಬ್ಬಂದಿಯನ್ನು ಹೊಂದಿದ್ದ ತೈಲ ಹಡಗಿನ ಮೇಲೆ ದಾಳಿ ನಡೆಸಿವೆ. ಗಿನಿ-ಬಿಸೌ ಧ್ವಜ ಹೊತ್ತ ‘ಎಂಟಿ ಜಲವೀರ್’ (M/T Jalveer) ಹಡಗಿನ ಮೇಲೆ ಅಮೆರಿಕದ ಯುದ್ಧವಿಮಾನವು ಎರಡು ‘ಹೆಲ್‌ಫೈರ್’ (Hellfire) ಕ್ಷಿಪಣಿಗಳನ್ನು ಉಡಾಯಿಸಿದೆ. ನೌಕೆಯಲ್ಲಿದ್ದ 20 … Continued

ಕ್ರಿಕೆಟ್‌ | ಭಾರತದ ತಂಡಕ್ಕೆ ಮತ್ತೊಬ್ಬ ದ್ರಾವಿಡ್‌ ಎಂಟ್ರಿ : ಭಾರತದ ಅಂಡರ್-19 ತಂಡಕ್ಕೆ ರಾಹುಲ್‌ ದ್ರಾವಿಡ್‌ ಕಿರಿಯ ಪುತ್ರ ಆಯ್ಕೆ

ಭಾರತೀಯ ಕ್ರಿಕೆಟ್‌ನ ದಿಗ್ಗಜ ಹಾಗೂ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ, ವಿಕೆಟ್‌ಕೀಪರ್-ಬ್ಯಾಟರ್ ಅನ್ವಯ ದ್ರಾವಿಡ್ ಮುಂದಿನ ತಿಂಗಳು ಶ್ರೀಲಂಕಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಪ್ರಕಟಿಸಲಾದ ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದಾರೆ. ಎಸ್‌. ಶ್ರೀಧರನ್ ನೇತೃತ್ವದ ಜೂನಿಯರ್ ಕ್ರಿಕೆಟ್ ಆಯ್ಕೆ ಸಮಿತಿಯು ಗುರುವಾರ ಈ ಸರಣಿಗಾಗಿ ಏಕದಿನ ಮತ್ತು ಟೆಸ್ಟ್ (ಮಲ್ಟಿ-ಡೇ) … Continued

ಅಭಿಷೇಕ ಬೇಕೋ ಅಥವಾ ನಾವು ಬೇಕೋ ಆಯ್ಕೆ ಮಾಡಿ’ ; ಮಮತಾಗೆ ಗಡುವು ನೀಡಿದ ಆಪ್ತ ಕಲ್ಯಾಣ ಬ್ಯಾನರ್ಜಿ

 ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಭಿನ್ನಮತ ಈಗ ಸಾರ್ವಜನಿಕವಾಗಿ ಸ್ಫೋಟಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಹಲವು ನಾಯಕರು ಮತ್ತು ಸಂಸದರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದರೂ, ಪಕ್ಷ ಹಾಗೂ ಮಮತಾ ಬ್ಯಾನರ್ಜಿಗೆ ನಿಷ್ಠರಾಗಿ ಉಳಿದಿದ್ದ ಹಿರಿಯ ಸಂಸದ ಕಲ್ಯಾಣ ಬ್ಯಾನರ್ಜಿ ಅವರು ಗುರುವಾರ ಮಮತಾ ಬ್ಯಾನರ್ಜಿ ಮತ್ತು … Continued

ಎಐ(AI) ಬಳಕೆ ಹೆಚ್ಚಳ ; ಭಾರತದಲ್ಲಿನ ಎಲ್ಲ ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆರಿಕದ ‘ಓಪನ್‌ಡೋರ್’ ಕಂಪನಿ !

ನವದೆಹಲಿ: ಕೃತಕ ಬುದ್ಧಿಮತ್ತೆ ಜಾಗತಿಕ ಕಾರ್ಯಾಚರಣೆಗಳನ್ನು ಹೇಗೆ ಮರುರೂಪಿಸುತ್ತಿದೆ ಎಂಬುದನ್ನು ಎತ್ತಿ ತೋರಿಸುವ ಒಂದು ಕ್ರಮದಲ್ಲಿ, ಅಮೆರಿಕದ ರಿಯಲ್ ಎಸ್ಟೇಟ್ ತಂತ್ರಜ್ಞಾನ ಕಂಪನಿ ಓಪನ್‌ಡೋರ್ ಭಾರತ ಮೂಲದ ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ, ಇದು ಸುಮಾರು 250 ಉದ್ಯೋಗಿಗಳ ಮೇಲೆ ಪರಿಣಾಮ ಬೀರುತ್ತದೆ. ತನ್ನ ವ್ಯವಹಾರದ ಸ್ಥಿತ್ಯಂತರ ಕಾರ್ಯತಂತ್ರದ (business transformation strategy) ಭಾಗವಾಗಿ, ಕಂಪನಿಯ … Continued