ಮುಂಬೈ ಲೋಕಲ್‌ ಟ್ರೇನ್‌ ಆರಂಭದ ನಂತರ ಹೆಚ್ಚಿದ ಕೊರೋನಾ

ಮುಂಬೈ: ಸ್ಥಳೀಯ ರೈಲು ಸೇವೆ ಆರಂಭಗೊಂಡ ನಂತರ ಮೂಂಬೈನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಇತ್ತೀಚಿಗೆ ನಗರದಲ್ಲಿ ಧಿಡೀರನೇ ಕೊವಿಡ್‌-೧೯ ಪ್ರಕರಣಗಳ ಸಂಖ್ಯೆ ಹೆಚ್ಚಳಗೊಂಡಿರುವುದಕ್ಕೆ ಸ್ಥಳಿಯ ರೈಲು ಸೇವೆ ಆರಂಭಿಸಿರುವುದೇ ಕಾರಣ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆ.೧೦ರಂದು ನಗರದಲ್ಲಿ ೫೫೮ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ೫೩೬೯ಕ್ಕೇರಿದೆ. … Continued

ಮಹಾರಾಷ್ಟ್ರಕ್ಕೆ ತೆರಳುವ ಕೇರಳದವರಿಗೆ ಕೊರೋನಾ ಪರೀಕ್ಷೆ ಕಡ್ಡಾಯ

ಮುಂಬೈ: ಕೇರಳದಿಂದ ಮಹಾರಾಷ್ಟ್ರಕ್ಕೆ ಬರುವ ಎಲ್ಲ ಪ್ರಯಾಣಿಕರು ಕೊರೊನಾ ಪರೀಕ್ಷೆ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯ ಎಂದು ಮಹಾರಾಷ್ಟ್ರ ಸರಕಾರ ಸೂಚನೆ ನೀಡಿದೆ. ಸರಕಾರ ಹೊರಡಿಸಿದ ನೂತನ ಸ್ಟಾಂಡರ್ಡ್‌ ಆಪರೇಟಿಂಗ್‌ ಪ್ರಾಸಿಜರ್ಸ್‌ ಪ್ರಕಾರ ಕೇರಳದಿಂದ ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್‌-೧೯ ಪರೀಕ್ಷೆಯ ನೆಗೆಟಿವ್‌ ವರದಿ ಹೊಂದಿರಬೇಕು. ಇದಕ್ಕೂ ಮೊದಲು ಮಹಾರಾಷ್ಟ್ರ ಸರ್ಕಾರ ದೆಹಲಿ, ರಾಜಸ್ಥಾನ, ಗುಜರಾತ್ … Continued

ತಪೋವನ ಸರಂಗ ರಕ್ಷಣಾ ಕಾರ್ಯ ತಾತ್ಕಾಲಿಕ ಸ್ಥಗಿತ

ಋಷಿಗಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದರಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ ಮತ್ತು ಹತ್ತಿರದ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಎಚ್ಚರಿಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಚಮೋಲಿಯ ತಪೋವನ್ ಸುರಂಗದೊಳಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಐಟಿಬಿಪಿಯ ಪಡೆಗಳು ಚಮೋಲಿಯಲ್ಲಿ ಸಂಪರ್ಕ ಕಡಿತಗೊಂಡ ಹಳ್ಳಿಗಳಿಗೆ ಸೇತುವೆಯನ್ನು … Continued

ಚುನಾವಣೆ ನಂತರ ಮಮತಾರಿಂದ ರಾಮ ಜಪ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮುಗಿದಾಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಜೈ ಶ್ರೀರಾಮ ಎಂದು ಜಪ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ಅವರು ಕೂಚ್‌ಬೆಹಾರ್‌ನಲ್ಲಿ ಪರಿವರ್ತನ್‌ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಜೈ ಶ್ರೀರಾಮ ಪಠಣವು ಮಮತಾಗೆ ಮಾಡಿದ ಅವಮಾನವೇ ಎಂದು ಪ್ರಶ್ನಿಸಿದ ಶಾ, ಅನೇಕರು ರಾಮ ಜಪದಿಂದ … Continued

ಸ್ಥೂಲಕಾಯ, ವಯಸ್ಸು, ಕೊರೊನಾ ಸೋಂಕಿನ ಪ್ರಮಾಣ ವೈರಸ್‌ ಹರಡುವಿಕೆ ಮೇಲೆ ಪ್ರಭಾವ

ವ್ಯಕ್ತಿಯ ಸ್ಥೂಲಕಾಯ, ವಯಸ್ಸು ಹಾಗೂ ಕೊರೊನಾ ಸೋಂಕಿನ ಪ್ರಮಾಣ ಉಸಿರಾಡುವ ವೈರಸ್‌ ಕಣಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ೧೯೪ ವ್ಯಕ್ತಿಗಳ ಅಧ್ಯಯನ ನಡೆಸಿದ ಪಿಎನ್‌ಎಎಸ್‌ ಸಂಶೋಧನಾ ನಿಯತಕಾಲಿಕೆ ವರದಿ ಮಾಡಿದೆ. ಸಂಶೋಧನೆಯನ್ವಯ ಏರೋಸಾಲ್‌ ಕಣಗಳು ವ್ಯಕ್ತಿಯ ವಯಸ್ಸು, ವೈರಸ್‌ ಸ್ಥಿತಿ, ದೇಹದ ಸ್ಥೂಲತೆಯನ್ನು ಆಧರಿಸಿ ಬದಲಾವಣೆಯಾಗುತ್ತಿರುತ್ತದೆ. ಇತರ ಸಾಂಕ್ರಾಮಿಕ ರೋಗಗಳಲ್ಲಿ … Continued

ಗಣರಾಜ್ಯೋತ್ಸವದಂದು ರೈತನ ಸಾವು:ಎಸ್‌ಐಟಿ ತನಿಖೆಗೆ ಒತ್ತಾಯಿಸಿ ಕುಟುಂಬಸ್ಥರಿಂದ ಹೈಕೋರ್ಟಿಗೆ ಮೊರೆ

ಜನವರಿ ೨೬ರಂದು ನಡೆದ ರೈತರ ಟ್ರಾಕ್ಟರ್‌ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂದವರು ವಿಶೇಷ ತನಿಖಾ ತಂಡದಿಂದ ತನಿಖೆಯಾಗಬೇಕೆಂದು ದೆಹಲಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ೨೫ ವರ್ಷದ ನವೀತ್‌ ಸಿಂಗ್‌ ರ್ಯಾಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟಿದ್ದಾರೆ. ದೆಹಲಿ ಪೊಲೀಸರ ಪ್ರಕಾರ ನವೀತ್‌ ಸಿಂಗ್‌ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆದರೆ ಕಟುಂಬದ ಸದಸ್ಯರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಪೊಲೀಸರು … Continued

ಪಾಂಗೋಂಗ್‌ ಲೇಕ್‌ನಿಂದ ಹಂಹಂತವಾಗಿ ಸೈನ್ಯ ಹಿಂತೆಗೆತ: ರಾಜನಾಥ್‌

ನವದೆಹಲಿ: ಭಾರತ ಹಾಗೂ ಚೀನಾ ದೇಶಗಳ ಮಾತುಕತೆಯಿಂದಾಗಿ ಪಾಂಗೋಂಗ್‌ ಸರೋವರದ ಉತ್ತರ ಹಾಗೂ ದಕ್ಷಿಣ ತೀರದಿಂದ ಸೈನ್ಯ ಹಿಂತೆಗೆಯುವ ಒಪ್ಪಂದಕ್ಕೆ ಕಾರಣವಾಗಿದ್ದು, ಉಭಯ ದೇಶಗಳು ಸಮನ್ವಯತೆಯಿಂದ ಹಂತ ಹಂತವಾಗಿ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳಲಿವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹೇಳಿದರು. ಪೂರ್ವ ಲಡಾಕ್‌ನ ಪಂಗೊಂಗ್ ಸರೋವರದ ದಕ್ಷಿಣ ಮತ್ತು ಉತ್ತರದ ದಡಗಳಲ್ಲಿ ಭಾರತೀಯ ಮತ್ತು … Continued

ಸೋಶಿಯಲ್‌ ಮೀಡಿಯಾ ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಅವಕಾಶವಿಲ್ಲ: ಟ್ವಿಟ್ಟರ್‌ಗೆ ಸಚಿವರ ಖಡಕ್‌ ಸಂದೇಶ

ನವ ದೆಹಲಿ; ಸಾಮಾಜಿಕ ಮಾಧ್ಯಮ (ಸೋಶಿಯಲ್‌ ಮೀಡಿಯಾ)ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಭಾರತದಲ್ಲಿ ಅವಕಾಶವಿಲ್ಲ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಸಂಸತ್ತಿನಲ್ಲಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹಾಗೂ ದ್ವೇಷದ ಸುದ್ದಿ ಹರಡುವುದನ್ನು ಸರಕಾರ ಸಹಿಸುವುದಿಲ್ಲ ಸಾಮಾಜಿಕ ಜಾಲತಾಣಗಳ ದೈತ್ಯರಾದ ಟ್ವಿಟರ್‌, ಫೇಸ್‌ಬುಕ್‌ ಹಾಗೂ ವ್ಯಾಟ್ಸಪ್‌ ನಮ್ಮ ನೆಲದ ನಿಯಮವನ್ನು ಪಾಲನೆ ಮಾಡಬೇಕು … Continued

ತೆಂಡುಲ್ಕರ್‌, ಲತಾ ಮಂಗೇಶ್ಕರ್‌ ವಿರುದ್ಧ ತನಿಖೆಗೆ ಆದೇಶ:ರಾಜ್ಯಸಭೆಯಲ್ಲಿ ಚರ್ಚೆಗೆ ನೋಟಿಸ್‌

ನವ ದೆಹಲಿ: ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ವಿರುದ್ಧ ಮಹಾರಾಷ್ಟ್ರ ಸರ್ಕಾರ ಆದೇಶಿಸಿರುವ ತನಿಖೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಬಿಜೆಪಿ ಸಂಸದ ಭಗವತ್ ಕರದ್ ಗುರುವಾರ ರಾಜ್ಯಸಭೆಯಲ್ಲಿ ಶೂನ್ಯ ವೇಳೆ ನೋಟಿಸ್ ನೀಡಿದ್ದಾರೆ. ಶೂನ್ಯವೇಳೆಯಲ್ಲಿ ಸಂಸದರು ತುರ್ತು ಸಾರ್ವಜನಿಕ ಪ್ರಾಮುಖ್ಯತೆಯ ಸಮಸ್ಯೆಗಳನ್ನು ಎತ್ತಬಹುದಾಗಿದ್ದು, ರೈತರ ಪ್ರತಿಭಟನೆ ಕುರಿತು ಸಚಿನ್ ತೆಂಡೂಲ್ಕರ್, ಅಕ್ಷಯ್ ಕುಮಾರ್, ಲತಾ … Continued

ಎಲ್‌ಎಸಿ: ಭಾರತ-ಚೀನಾ ಮಾತುಕತೆ ಮುಂದುವರಿಕೆ

ನವ ದೆಹಲಿ; ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಎಲ್ಲಾ ಘರ್ಷಣೆ ಹಂತಗಳಲ್ಲಿ ಶಾಂತಿ ಪುನಃಸ್ಥಾಪಿಸಲು ಭಾರತವು ಚೀನಾದೊಂದಿಗೆ ಮಾತುಕತೆ ಮುಂದುವರಿಸಲಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಲೀಧರನ್ ಬುಧವಾರ ಸಂಸತ್ತಿನಲ್ಲಿ ತಿಳಿಸಿದರು. ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಪ್ರಶ್ನೆಗೆ ಉತ್ತರಿಸಿದ ಮುರಲೀಧರನ್, ಕಳೆದ ವರ್ಷದ ಏಪ್ರಿಲ್-ಮೇಯಿಂದ ಎಲ್‌ಎಸಿಯ ಪಶ್ಚಿಮ ವಲಯದಲ್ಲಿ … Continued