ಕೊರೊನಾ ಹೆಚ್ಚಳ: ಯುಜಿಸಿ- ಎನ್ಇಟಿ ಪರೀಕ್ಷೆ ಮುಂದಕ್ಕೆ

ನವ ದೆಹಲಿ: ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಮೇ 2ರಿಂದ 17ಕ್ಕೆ ನಡೆಯಬೇಕಿದ್ದ ಯುಜಿಸಿ- ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಮಂಗಳವಾರ ಪ್ರಕಟಿಸಿದ್ದಾರೆ. ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ನಂತರದಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ, ಪರಿಷ್ಕೃತ ಪರೀಕ್ಷೆ ದಿನಾಂಕವನ್ನು ಪರೀಕ್ಷೆಗಿಂತ ಕನಿಷ್ಠ 15 ದಿನ ಮುಂಚಿತವಾಗಿ ವಿಷಯ … Continued

ಮೂರನೇ ಹಂತದ ಕೋವಿಡ್ ಲಸಿಕೆ ಪ್ರಯೋಗ,ಆಮದಿಗೆ ಜಾನ್ಸನ್ ಆ್ಯಂಡ್ ಜಾನ್ಸನ್ ಅರ್ಜಿ ಸಲ್ಲಿಕೆ

ನವ ದೆಹಲಿ: ಕೇಂದ್ರ ಸರ್ಕಾರ ವಿದೇಶಿ ಕೋವಿಡ್ ಲಸಿಕೆಗಳ ಮೇಲಿನ ಆಮದು ಸುಂಕ ರದ್ದು ಮಾಡುವ ಕುರಿತು ಆಲೋಚನೆಯಲ್ಲಿ ತೊಡಗಿರುವ ಬೆನ್ನಲ್ಲೇ ಅಮೆರಿಕ ಮೂಲದ ಔಷಧ ತಯಾರಿಕಾ ಸಂಸ್ಥೆ ಜಾನ್ಸನ್ ಮತ್ತು ಜಾನ್ಸನ್ ಸಂಸ್ಥೆ ತನ್ನ ಕೋವಿಡ್ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಹಾಗೂ ಆಮದು ಮಾಡಿಕೊಂಡು ಬಳಸುವ ಕುರಿತು ಅನುಮತಿ ಕೋರಿ ಔಷಧ … Continued

ಮಹಾರಾಷ್ಟ್ರದಲ್ಲಿ 10ನೇ ತರಗತಿ ಪರೀಕ್ಷೆ ರದ್ದತಿಗೆ ನಿರ್ಧಾರ

ಮುಂಬೈ: ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ ಮಹಾರಾಷ್ಟ್ರ ಸರ್ಕಾರ ಮಂಗಳವಾರ 10ನೇ ತರಗತಿ ಪರೀಕ್ಷೆ ರದ್ದುಗೊಳಿಸಲು ನಿರ್ಧರಿಸಿದೆ. “ಕೋವಿಡ್ -19 ಸಾಂಕ್ರಾಮಿಕದ ಹದಗೆಟ್ಟ ಪರಿಸ್ಥಿತಿ ಗಮನಿಸಿದರೆ, ಮಹಾರಾಷ್ಟ್ರ ಸರ್ಕಾರ ಈಗ 10 ನೇ ತರಗತಿಗೆ ರಾಜ್ಯ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ” ಎಂದು ಮಹಾರಾಷ್ಟ್ರ ಶಾಲಾ ಶಿಕ್ಷಣ ಸಚಿವ ವರ್ಷಾ ಗಾಯಕವಾಡ್ ಹೇಳಿದ್ದಾರೆ. … Continued

ಮಹಾರಾಷ್ಟ್ರದಲ್ಲಿ ಬೆಳಿಗ್ಗೆ 7ರಿಂದ 11ರ ವರೆಗೆ ಮಾತ್ರ ದಿನಸಿ ಅಂಗಡಿ ತೆರೆಯಲು ಅವಕಾಶ

ಮುಂಬೈ: ದೇಶದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಮಹಾರಾಷ್ಟ್ರದಲ್ಲಿ ಅತಿ ವೇಗವಾಗಿ ಸೋಂಕು ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಮಹಾರಾಷ್ಟ್ರ ಸರ್ಕಾರ ಈಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಂಗಳವಾರದಿಂದ ಅಗತ್ಯ ವಸ್ತುಗಳ ಮಾರಾಟ ಅಂಗಡಿಗಳಿಗೆ ಬೆಳಗ್ಗೆ 7ರಿಂದ 11 ಗಂಟೆ ವರೆಗೆ ಮಾತ್ರ ತೆರೆಯಲು ಅವಕಾಶ ನೀಡಿದೆ. ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು … Continued

ತಕ್ಷಣವೇ ಬಸ್‌ ಸೇವೆ ಆರಂಭ ಮಾಡಿ; ಮುಷ್ಕರ ನಿರತ ಸಾರಿಗೆ ಸಿಬ್ಬಂದಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕೋವಿಡ್‌ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ, ಅದರಿಂದ ಸಾರ್ವಜನಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೂಡಲೇ ಸೇವೆ ಆರಂಭಿಸುವಂತೆ ಮುಷ್ಕರ ನಿರತ ಸಾರಿಗೆ ನೌಕರರಿಗೆ ಸೂಚಿಸಿದೆ. ಸಾರಿಗೆ ನೌಕರರ ಮುಷ್ಕರ ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ … Continued

ಜಾರ್ಖಂಡ್‌ನಲ್ಲಿ ಒಂದು ವಾರ ಲಾಕ್‌ ಡೌನ್‌ ಘೋಷಣೆ

ರಾಯ್ಪುರ: ಜಾರ್ಖಂಡ್ ಸರ್ಕಾರ ಏಪ್ರಿಲ್ 22 ರಿಂದ ಏಪ್ರಿಲ್ 29ರ ವರೆಗೆ ಲಾಕ್ ಡೌನ್ ಘೋಷಿಸಿದ್ದು, ಕೆಲವು ವಿನಾಯಿತಿ ಘೋಷಿಸಿದೆ. ಧಾರ್ಮಿಕ ಸ್ಥಳಗಳು ಸಹ ತೆರೆದಿರುತ್ತದೆ. ಆದರೆ, ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ. ಗಣಿಗಾರಿಕೆ, ಕೃಷಿ ಮತ್ತು ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಇತ್ತೀಚಿನ ದತ್ತಾಂಶದ ಪ್ರಕಾರ, ಭಾರತವು ಮಂಗಳವಾರ 2.59 ಲಕ್ಷ … Continued

ರಾಹುಲ್‌ ಗಾಂಧಿಗೆ ಕೊರೊನಾ ಸೋಂಕು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದಾರೆ. ಈ ಕುರಿತು ಅವರೇ ಟ್ವೀಟ್‌ ಮಾಡಿದ್ದಾರೆ. ಮಂಗಳವಾರ ಟ್ವೀಟ್‌ ಮಾಡಿರುವ ಅವರು, ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಹೇಳಿದ್ದಾರೆ. ಸೌಮ್ಯ ರೋಗಲಕ್ಷಣಗಳನ್ನು ಅನುಭವಿಸಿದ ನಂತರ, ನಾನು ಕೋವಿಡ್‌ ಪರೀಕ್ಷೆ ಮಾಡಿದ್ದು, ಅದು ಪಾಸಿಟಿವ್‌ ಬಂದಿದೆ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ. ಇತ್ತೀಚೆಗೆ … Continued

ಉತ್ತರ ಪ್ರದೇಶದ ಐದು ನಗರಗಳಲ್ಲಿ ಲಾಕ್ ಡೌನ್: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವ ದೆಹಲಿ: ಕೋವಿಡ್ -19 ಪ್ರಕರಣಗಳಲ್ಲಿ ತೀವ್ರ ಏರಿಕೆ ವರದಿಯಾಗುತ್ತಿರುವ ಐದು ಉತ್ತರ ಪ್ರದೇಶ ಜಿಲ್ಲೆಗಳಾದ ಪ್ರಯಾಗ್ರಾಜ್, ಲಕ್ನೋ, ವಾರಾಣಸಿ, ಕಾನ್ಪುರ ನಗರ ಮತ್ತು ಗೋರಖ್‌ಪುರ ಜಿಲ್ಲೆಗಳಲ್ಲಿ ಏಪ್ರಿಲ್ 26ರ ವರೆಗೆ ಒಂದು ವಾರದ ಲಾಕ್‌ಡೌನ್ ಮಾಡಲು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಡೆಹಿಡಿದಿದೆ. ಸೋಮವಾರ ಜಾರಿಗೆ ಬಂದ ಹೈಕೋರ್ಟ್ ಆದೇಶವನ್ನು … Continued

ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಕ್ರಮ: ಉತ್ಪಾದಕರಿಗೆ ಕೇಂದ್ರದಿಂದ 4,500 ಕೋಟಿ ರೂ. ಮುಂಗಡ ಹಣ

ನವದೆಹಲಿ: ಕೊರೋನಾ ಲಸಿಕೆಯನ್ನು ಮೇ 1 ರಿಂದ 18 ವರ್ಷದ ಮೇಲ್ಪಟ್ಟವರೆಲ್ಲರಿಗೂ ನೀಡಲು ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದ್ದು, ಲಸಿಕೆ ತಯಾರಿಕೆ ಹೆಚ್ಚಳಕ್ಕೆ ಕ್ರಮ ಕೈಗೊಂಡಿದೆ. ಇದರ ಅಂಗವಾಗಿ ಲಸಿಕೆ ತಯಾರಿಕೆ ಮಾಡುವ ಸಂಸ್ಥೆಗಳಿಗೆ ಆರ್ಥಿಕ ನೆರವು ಪ್ರಕಟಿಸಿರುವಕೇಂದ್ರ ಸರ್ಕಾರ ಒಟ್ಟು 4,500 ಕೋಟಿ ರೂ.ಗಳ ಬಿಡುಗಡೆಗೆ ಅನುಮೋದನೆ ನೀಡಿದೆ. ಈ ಮೊತ್ತವನ್ನು ಸೆರಮ್ ಇನ್ಸ್ಟಿಟ್ಯೂಟ್ ಆಫ್ … Continued

ಏಪ್ರಿಲ್-ಮೇ ತಿಂಗಳಲ್ಲಿ ಭಾರತದಲ್ಲಿ ಕೋವಿಡ್‌-19 ಎರಡನೇ ಅಲೆ ಕೆಟ್ಟ ಪರಿಣಾಮ..: ಡೇಟಾ ತಜ್ಞರು ಏನು ಊಹಿಸಿದ್ದಾರೆ..?

ಕೋವಿಡ್‌-19 ರ ಎರಡನೇ ಅಲೆ ಹೆಚ್ಚಳ ಮಾಡುತ್ತರುವುದು ಯಾವುದು ಎಂಬ ಪ್ರಶ್ನೆಗೆ ವಿಜ್ಞಾನಿಗಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಸಾರ್ವಜನಿಕರು ಕೋವಿಡ್‌-19 ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿಲ್ಲ ಎಂಬುದು ಕಾರಣವೇ (ಮುಖವಾಡಗಳನ್ನು ಧರಿಸುವುದು ಮತ್ತು ಸುರಕ್ಷಿತ ದೂರವನ್ನು ಕಾಪಾಡಿಕೊಳ್ಳುವುದು) ಅಥವಾ ಕೋವಿಡ್‌-19 ವೈರಸ್‌ನ ಹೊಸ ರೂಪಾಂತರಿಗಳು ಅಥವಾ ಎರಡರ ಸಂಯೋಜನೆಯಿಂದಾಗಿ ಹೆಚ್ಚಳವಾಗುತ್ತಿದೆಯೇ ಎಂಬ … Continued