ಹೊಸ ಕೃಷಿ ಕಾನುನು ಅಸ್ತವ್ಯಸ್ತತೆಗೆ ಕೇಂದ್ರದ ಮೊಂಡುತನದ ಧೋರಣೆ ಕಾರಣ

ಹೊಸ ಕೃಷಿ ಕಾನೂನುಗಳ ಅಸ್ತವ್ಯಸ್ತತೆಗೆ ಕೇಂದ್ರದ “ಮೊಂಡುತನದ ಮನೋಭಾವ” ಕಾರಣ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಮನ್ವಯ ಸಮಿತಿ ಸದಸ್ಯ ಶಿವ ಕುಮಾರ್ ಶರ್ಮಾ ಹೇಳಿದ್ದಾರೆ. ರೈತರೊಂದಿಗೆ ಮಾತುಕತೆ ನಡೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಭರವಸೆ ನೀಡಿದ್ದರೂ, ಮುಂದಿನ ಸುತ್ತಿನ ಮಾತುಕತೆಗಾಗಿ ಯಾವುದೇ ದಿನಾಂಕವನ್ನು ಸರ್ಕಾರ ತಿಳಿಸಿಲ್ಲ. 40 ರೈತ ಸಂಘಟನೆಗಳ ಮೈತ್ರಿ … Continued

ಫೆ.೧೫ರ ಮಧ್ಯರಾತ್ರಿಯಿಂದ ಫಾಸ್ಟ್ಯಾಗ್ ಬಳಕೆ ಕಡ್ಡಾಯ

ನವದೆಹಲಿ: ವಾಹನಗಳ ಚಾಲಕರು, ಮಾಲೀಕರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವಾಗ ಟೋಲ್‌ ಪ್ಲಾಜಾಗಳಲ್ಲಿ ಶುಲ್ಕ ಪಾವತಿಸಲು ಸೋಮವಾರ (ಫೆ.೧೫ರ ಮಧ್ಯರಾತ್ರಿ)ಮಧ್ಯರಾ‌ತ್ರಿಯಿಂದ ಜಾರಿಗೆ ಬರುವಂತೆ ಫಾಸ್ಟ್ಯಾಗ್ ಬಳಸುವುದು ಕಡ್ಡಾಯವಾಗಲಿದೆ. ಫಾಸ್ಟ್ಯಾಗ್ ಇಲ್ಲದಿದ್ದರೆ ಅಂಥ ವಾಹನಗಳ ಮಾಲೀಕರು, ಚಾಲಕರು ನಿಗದಿತ ಶುಲ್ಕದ ದುಪ್ಪಟ್ಟು ಮೊತ್ತವನ್ನು ಪಾವತಿಸಬೇಕಾಗುತ್ತದೆ ಎಂದು ಕೇಂದ್ರ ಭೂ ಸಾರಿಗೆ ಸಚಿವಾಲಯವು ತಿಳಿಸಿದೆ. ಶುಲ್ಕ ಸಂಗ್ರಹದ ವ್ಯಾಪ‍್ತಿಗೆ ಬರುವ … Continued

ರೈತರ ಬೇಡಿಕೆ ಈಡೇರುವ ವರೆಗೂ ಸರ್ಕಾರಕ್ಕೆ ಶಾಂತಿಯಿಂದಿರಲು ಬಿಡಲ್ಲ

ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಶಾಂತಿಯಿಂದ ಕುಳಿತುಕೊಳ್ಳಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಮುಂಚೂಣಿಯಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯಿತ್‌ ಹೇಳಿದ್ದಾರೆ. ರೈತರ “ಮಹಾಪಂಚಾಯತ್” ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಆಂದೋಲನಕ್ಕೆ ಮುಂದಾಗಿರುವ 40 ನಾಯಕರು ಇಡೀ ದೇಶದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರವು ನಮ್ಮ ಪರವಾಗಿ ತೀರ್ಮಾನಿಸುವ … Continued

ದೇಶಿ ನಿರ್ಮಿತ ಯುದ್ಧ ಟ್ಯಾಂಕರ್‌ ಅರ್ಜುನ ಲೋಕಾರ್ಪಣೆ

ಚೆನ್ನೈ: ಸ್ವದೇಶಿ ನಿರ್ಮಿತ ಅರ್ಜುನ ಯುದ್ಧ ಟ್ಯಾಂಕರ್ (ಎಂಕೆ-೧ಎ) ಅನ್ನು ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಹಸ್ತಾಂತರಿಸಿದರು. ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಸ್ವದೇಶಿ ನಿರ್ಮಿತ ಅರ್ಜುನ ಯುದ್ಧ ಟ್ಯಾಂಕರ್‌ನ ಭೂಸೇನೆಯ ಮುಖ್ಯಸ್ಥ ಜರ್ನಲ್ ಎಂ.ಎಂ ನರ್‌ವಾಣೆ ಅವರಿಗೆ ನೀಡಿದರು. ಈ ಅರ್ಜುನ ಯುದ್ಧ ಟ್ಯಾಂಕರ್‌ನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, ಸಿವಿಆರ್‌ಡಿಇ, ಡಿಆರ್‌ಡಿಓ … Continued

ಮತ್ತೆ ಏರಿದ ಪೆಟ್ರೋಲ್‌ ದರ

ಬೆಂಗಳೂರು: ಕಳೆದ ವಾರಪೂರ್ತಿ ದರ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರ ರವಿವಾರ ಕೂಡ ಏರಿಕೆ ಕಂಡಿದೆ. 6 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ 2.16 ರೂ. ಏರಿಕೆಯಾಗಿದೆ. ಭಾರತೀಯ ರೂಪಾಯಿ ಮೌಲ್ಯವು ಡಾಲರ್ ಎದುರು ಕುಸಿತ ಕಂಡಿರುವುದು ತೈಲ ಬೆಲೆಯನ್ನು ಮತ್ತಷ್ಟು ಏರಿಸುವ ಸೂಚನೆ ನೀಡಿದೆ. ಪ್ರಸ್ತುತ ರೂಪಾಯಿ ಮೌಲ್ಯವು ಡಾಲರ್ … Continued

ಜಮ್ಮು ಬಸ್‌ ನಿಲ್ದಾಣದಲ್ಲಿ ಸುಧಾರಿತ ಸ್ಫೋಟಕ ಸಾಧನ ಪತ್ತೆ: ತಪ್ಪಿದ ಅನಾಹುತ

ಜಮ್ಮು: ಜಮ್ಮು ಬಸ್‌ ನಿಲ್ದಾಣದಲ್ಲಿ ೭ಕೆಜಿ ಸುಧಾರಿತ ಸ್ಫೋಟಕ ಸಾಧನ ಪತ್ತೆಯಾಗಿದೆ. ಜನಸಂದಣಿ ಪ್ರದೇಶದಲ್ಲಿ ಸ್ಫೋಟಕ ಸಾಧನವನ್ನು ಪತ್ತೆ ಮಾಡಲಾಗಿದ್ದು, ಅನಾಹುತ ತಪ್ಪಿಸಿದಂತಾಗಿದೆ. ಪುಲ್ವಾಮಾ ದಾಳಿಯ ೨ನೇ ವರ್ಷಾಚರಣೆ ಸಂದರ್ಭದಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆಯನ್ನು ವಿಫಲಗೊಳಿಸಲಾಗಿದೆ. ನಿರ್ದಿಷ್ಟ ಮಾಹಿತಿಯನ್ನಾಧರಿಸಿ ನಡೆದ ಕಾರ್ಯಚರಣೆಯಲ್ಲಿ ಸ್ಫೋಟಕವನ್ನು ಪತ್ತೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ೨೦೧೯ರ ಫೆಬ್ರವರಿ ೧೪ರಂದು … Continued

ಟೂಲ್‌ಕಿಟ್‌ ಸಂಪಾದನೆ ಆರೋಪ: ದಿಶಾ ರವಿ ೫ ದಿನ ಪೊಲೀಸ್‌ ವಶಕ್ಕೆ

ದೆಹಲಿ: ರೈತರ ಪ್ರತಿಭಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟೂಲ್‌ಕಿಟ್‌ ಹಂಚಿಕೆ ಹಾಗೂ ಸಂಪಾದನೆ ಆರೋಪಕ್ಕಾಗಿ ಬಂಧಿತ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ದೆಹಲಿ ನ್ಯಾಯಾಲಯ ೫ ದಿನಗಳ ಪೊಲೀಸ್‌ ವಶಕ್ಕೆ ನೀಡಿದೆ. ಬೆಂಗಳೂರಿನಿಂದ ದೆಹಲಿ ಪೊಲೀಸರ ಸೈಬರ್ ಸೆಲ್ ತಂಡವು ೨೧ರ ಹರೆಯದ ದಿಶಾ ರವಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತು. ಕೇಂದ್ರ ಸರ್ಕಾರದ ವಿರುದ್ಧ … Continued

ಪುಲ್ವಾಮಾ ಘಟನೆಗೆ ೨ ವರ್ಷ: ಹುತಾತ್ಮರಿಗೆ ಪ್ರಧಾನಿ ಗೌರವ

ನವದೆಹಲಿ: ಪುಲ್ವಾಮಾ ಭಯೋತ್ಪಾದಕರ ದಾಳಿಯ ೨ನೇ ವಾರ್ಷಿಕೋತ್ಸವದಂದು ಪ್ರಧಾನಿ ಮೋದಿ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. ಯಾವುದೇ ಭಾರತೀಯನು ಈ ಕರಾಳ ದಿನವನ್ನು ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ, ಪುಲ್ವಾಮಾ ದಾಳಿ ಸಂಭವಿಸಿದೆ. ಆ ದಾಳಿಯಲ್ಲಿ ನಾವು ಕಳೆದುಕೊಂಡ ಎಲ್ಲ ಹುತಾತ್ಮರಿಗೆ ನಾವು ಗೌರವ ಸಲ್ಲಿಸುತ್ತೇವೆ. ನಮ್ಮ ಭದ್ರತಾ … Continued

ತಮಿಳುನಾಡು ರೈತರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಚೆನ್ನೈ: ಸಮರ್ಪಕವಾಗಿ ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ದಾಖಲೆ ಪ್ರಮಾಣದ ಆಹಾರಧಾನ್ಯ ಉತ್ಪಾದನೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ರೈತರನ್ನು ಶ್ಲಾಘಿಸಿದ್ದಾರೆ. ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದ ರೈತರು ದಾಖಲೆ ಪ್ರಮಾಣದಲ್ಲಿ ಆಹಾರಧಾನ್ಯ ಬೆಳೆದಿರುವುದು ಶ್ಲಾಘನೀಯ. ರೈತರು ಸಮರ್ಪಕವಾಗಿ ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ಸಾಧನೆ ಮಾಡಿದ್ದಾರೆ ಎಂದರು. ಹೊಸ ಕೃಷಿ … Continued

ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ ಪ್ರಧಾನಿ: ಶಿವಸೇನೆ ಆರೋಪ

ಮುಂಬೈ: ಕೃಷಿ ಕಾನೂನುಗಳನ್ನು ಖಂಡಿಸಿ ಹೋರಾಟ ನಡೆಸುತ್ತಿರುವ ರೈತರಿಗೆ ಪ್ರಧಾನಿ “ಆಂದೋಲನಜೀವಿಗಳುʼ ಎಂದು ಕರೆದಿರುವುವುದು ದೇಶದ ಸ್ವಾತಂತ್ರ್ಯ ಹೋರಾಟ ಮಾಡಿದವರಿಗೂ ಮಾಡಿದ ಅವಮಾನ ಎಂದು ಶಿವಸೇನೆ ಆರೋಪ ಮಾಡಿದೆ. ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ, ಪ್ರಧಾನಿ ಮೋದಿ ಅವರು ದೇಶದ ಆಂದೋಲನಗಳನ್ನು ಗೇಲಿ ಮಾಡಿದ್ದಾರೆ. ಬಿಜೆಪಿ ತುರ್ತು ಪರಿಸ್ಥಿತಿಯಿಂದ ಅಯೋಧ್ಯೆ ಚಳುವಳಿಯವರೆಗೆ, ಹಣದುಬ್ಬರದಿಂದ ಕಾಶ್ಮೀರದಿಂದ ಆರ್ಟಿಕಲ್-370 … Continued