ಕ್ಷುದ್ರಗ್ರಹ ಪತ್ತೆ ಮಾಡಿದ ಕೈವಲ್ಯ ರೆಡ್ಡಿಗೆ ಆಂಧ್ರ ಸಿಎಂ ಅಭಿನಂದನೆ

ವಿಜಯವಾಡ: ಮಂಗಳವಾರ ಮತ್ತು ಗುರುಗಳ ನಡುವೆ ಕ್ಷುದ್ರಗ್ರಹವನ್ನು ಕಂಡುಹಿಡಿದಿದ್ದಕ್ಕಾಗಿ ಪಶ್ಚಿಮ ಗೋದಾವರಿಯ ಮಾಧ್ಯಮಿಕ ಶಾಲಾ ವಿದ್ಯಾರ್ಥಿನಿ ಕುಂಚಲ ಕೈವಲ್ಯ ರೆಡ್ಡಿಗೆ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅಭಿನಂದಿಸಿದ್ದಾರೆ. ಮಂಗಳ ಹಾಗೂ ಗುರು ಗ್ರಹಗಳ ಮಧ್ಯೆ ಕ್ಷುದ್ರಗ್ರಹ ಇರುವುದನ್ನು ಪತ್ತೆ ಮಾಡಿದ್ದಕ್ಕಾಗಿ ನಾಸಾದಿಂದ ಮಾನ್ಯತೆ ಪಡೆದ ಸಂಸ್ಥೆಯಾದ ಅಂತರರಾಷ್ಟ್ರೀಯ ಖಗೋಳ ಶೋಧ ಸಹಯೋಗ ಕುಂಚಲ ಕೈವಲ್ಯ ರೆಡ್ಡಿ … Continued

ಪಂಚ ರಾಜ್ಯಗಳಿಗೆ ಚುನಾವಣೆ ದಿನಾಂಕ ಪ್ರಕಟ: ಪಶ್ಚಿಮ ಬಂಗಾಳದಲ್ಲಿ ೮ಹಂತ, ಅಸ್ಸಾಂನಲ್ಲಿ 3ಹಂತ, ತಮಿಳುನಾಡು- ಕೇರಳ, ಪುದುಚೇರಿಯಲ್ಲಿ ಒಂದೇ ಹಂತದ ಚುನಾವಣೆ

ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತದ ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ. ಅಸ್ಸಾಂ ಚುನಾವಣೆ ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಮೂರು ಹಂತಗಳಲ್ಲಿ ನಡೆಯಲಿದ್ದು, ಕೇರಳ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಏ.೬ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಕೇರಳದ ಮಲಪ್ಪುರಂ … Continued

ಇದು ಕೇವಲ ಟ್ರೈಲರ್’ .. ಅಂಬಾನಿ ನಿವಾಸದ ಬಳಿ ನಿಲ್ಲಿಸಿದ್ದ ಎಸ್‌ಯುವಿ ಕಾರಿನ ಬ್ಯಾಗ್‌ನಲ್ಲಿ ಪತ್ತೆಯಾದ ಪತ್ರದಲ್ಲಿದ್ದ ಎಚ್ಚರಿಕೆ

ಮುಂಬೈ: ಮುಖೇಶ್ ಅಂಬಾನಿಯ ನಿವಾಸ ಆಂಟಿಲಿಯಾ ಬಳಿ ಎಸ್‌ಯುವಿಯಿಂದ ವಶಪಡಿಸಿಕೊಂಡ 20 ಜೆಲೆಟಿನ್ ಸ್ಟಿಕ್‌ಗಳ ಜೊತೆಗೆ, ರಿಲಯನ್ಸ್ ಇಂಡಸ್ಟ್ರಿಗಳ ಒಡೆತನದ ಫ್ರ್ಯಾಂಚೈಸ್ ಕ್ರಿಕೆಟ್ ತಂಡವಾದ ಮುಂಬೈ ಇಂಡಿಯನ್ಸ್‌ನ ಚೀಲವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮುಖೇಶ್ ಮತ್ತು ನೀತಾ ಅಂಬಾನಿ ಅವರನ್ನು ಉದ್ದೇಶಿಸಿ ಬೆದರಿಕೆ ಪತ್ರವನ್ನೂ ಪೊಲೀಸರು ಪತ್ತೆ ಮಾಡಿದ್ದಾರೆ. “ಇದು ಕೇವಲ ಟ್ರೈಲರ್ ಆಗಿದ್ದು, ಮುಂದಿನ ಬಾರಿ … Continued

ಮಹಿಳಾ ಐಪಿಎಸ್‌ ಅಧಿಕಾರಿಗೆ ಲೈಂಗಿಕ ಕಿರುಕುಳ ಆರೋಪ: ತಮಿಳುನಾಡು ಡಿಜಿಪಿ ಅಮಾನತು

ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಡಿಜಿಪಿ ಮಟ್ಟದ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ತಮಿಳುನಾಡಿನ ವಿಶೇಷ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅಮಾನತುಗೊಂಡ ಅಧಿಕಾರಿ. ಮುಖ್ಯಮಂತ್ರಿ ಪಳನಿಸ್ವಾಮಿ ಅವರ ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮಹಿಳಾ ಐಪಿಎಸ್ ಅಧಿಕಾರಿಯನ್ನು ವಿಶೇಷ ಡಿಜಿಪಿ ರಾಜೇಶ್‍ದಾಸ್ ಅವರು ತಮ್ಮ ಕಾರಿನಲ್ಲಿ ಕೂರಿಸಿಕೊಂಡು … Continued

ಇಂಥ ಪಿಚ್‌ಗಳಲ್ಲಿ ಬೌಲಿಂಗ್‌ ಮಾಡಿದ್ದರೆ ಕುಂಬ್ಳೆ-ಹರಭಜನ್‌ ೧೦೦೦, ೮೦೦ವಿಕೆಟ್‌ ಪಡೆಯುತ್ತಿದ್ದರು: ಚರ್ಚೆಗೆ ಗ್ರಾಸವಾದ ಯುವರಾಜ್‌ ಟ್ವೀಟ್‌

ಭಾರತ- ಇಂಗ್ಲೆಂಡ್ ಕ್ರಿಕೆಟ್‌ ಸರಣಿಯಲ್ಲಿ ಪಿಚ್‌ಗಳ ಸುತ್ತ ಚರ್ಚೆಯು ಸಾಯುವಂತೆ ಕಾಣುತ್ತಿಲ್ಲ. ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಕೆಲವು ಮಾಜಿ ಇಂಗ್ಲೆಂಡ್ ಕ್ರಿಕೆಟಿಗರು ಚೆನ್ನೈ ಪಿಚ್ ಮೇಲೆ ಟೀಕೆ-ಟಪ್ಪಣಿ ಮಾಡಿದ ನಂತರ ಈಗ ಭಾರತ ತಂಡದ ನಿವೃತ್ತ ಆಟಗಾರ ಯುವರಾಜ್ ಸಿಂಗ್ ಅವರಂತಹ ಕೆಲವು ಪ್ರಸಿದ್ಧ ಮಾಜಿ ಕ್ರಿಕೆಟಿಗರು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಗಲು-ರಾತ್ರಿ … Continued

ರೈತ ಹೋರಾಟಗಾರ್ತಿ ನವ್‌ದೀಪ‌ ಕೌರ್‌ಗೆ ಜಾಮೀನು

ರೈತ ಹೋರಾಟಗಾರ್ತಿ ನವ್ದೀಪ್‌ ಕೌರ್‌ಗೆ ಪಂಜಾಬ್‌ ಮತ್ತು ಹರಿಯಾಣ ಉಚ್ಚ ನ್ಯಾಯಾಲಯ ಜಾಮೀನು ನೀಡಿದೆ. ಈ ವರ್ಷದ ಆರಂಭದಲ್ಲಿ ದೆಹಲಿಯ ಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ೨೩ರ ಹರೆಯದ ನವದೀಪ್‌ ಕೌರ್‌ ಅವರನ್ನು ಬಂಧಿಸಲಾಗಿತ್ತು. ನದೀಪ್‌ ಕೊಲೆ ಯತ್ನ ಹಾಗೂ ಸುಲಿಗೆಯ ಆರೋಪ ಎದುರಿಸುತ್ತಿದ್ದಾರೆ. ಸೋನಿಪತ್‌ನ ಕೈಗಾರಿಕಾ ಘಟಕಕ್ಕೆ ಮುತ್ತಿಗೆ ಹಾಕಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ … Continued

ಆನ್‌ಲೈನ್‌ ವೆಬಿನಾರಿಗೆ ನಿರ್ಬಂಧ: ಮಮತಾ ಆಕ್ಷೇಪ

ಕೇಂದ್ರ ಶಿಕ್ಷಣ ಸಚಿವಾಲಯ ರಾಜ್ಯ ಸರಕಾರಗಳೊಂದಿಗೆ ಸಮಾಲೋಚನೆ ನಡೆಸದೇ ಆನ್‌ಲೈನ್‌ ಅಂತಾರಾಷ್ಟ್ರೀಯ ಸಮ್ಮೇಳನಗಳ ಮೇಲೆ ಹಲವು ನಿರ್ಬಂಧಗಳನ್ನು ಹಾಕಿರುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಂಡಿಸಿದ್ದಾರೆ. ಅವರು ಪ್ರಧಾನಿಗೆ ಪತ್ರ ಬರೆದು, ಕೇಂದ್ರ ಸರಕಾರ ಯಾವುದೇ ಸಮಾಲೋಚನೆ ನಡೆಸದೇ ರಾಜ್ಯ ಸರಕಾರಗಳಿಗೆ ಯಾವುದೇ ಸೂಚನೆ ನೀಡದೇ ವಿಶ್ವವಿದ್ಯಾಲಯಗಳು ತರಬೇತಿ ನೀಡುವ ವರ್ಚುವಲ್‌ ಅಂತಾರಾಷ್ಟ್ರೀಯ ಸಮ್ಮೇಳನಗಳ … Continued

ಅಂತಾರಾಷ್ಟ್ರೀಯ ವೆಬಿನಾರ್ ಸಮ್ಮೇಳನಕ್ಕೆ ಕಡ್ಡಾಯ ಅನುಮತಿ: ನಿರ್ದೇಶನ ಹಿಂಪಡೆದ ಕೇಂದ್ರ

ವ್ಯಾಪಕ ಟೀಕೆಗಳ ಬಳಿಕೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಂತಾರಾಷ್ಟ್ರೀಯ ಆನ್‌ಲೈನ್‌ ಸೆಮಿನಾರ್‌ಗಳಿಗೆ ಕಡ್ಡಾಯ ಅನುಮತಿಯ ನಿರ್ದೇಶನವನ್ನು ಹಿಂತೆಗೆದುಕೊಂಡಿದೆ. ಆದರೂ ಅಂಥ ವೆಬಿನಾರ್‌ಗಳನ್ನು ಗೃಹ ಸಚಿವಾಲಯದ ಕಾಯ್ದೆಗಳಿಂದ ನಿಯಂತ್ರಿಸಲಾಗುವುದು ಎಂದು ಹೇಳಿದೆ. ಗೃಹ ಸಚಿವಾಲಯದ ಮಾರ್ಗಸೂಚಿಗಳು ಕೇವಲ ಆಫ್‌ಲೈನ್‌ ಮುಖಾಮುಖಿ ಸಮಾವೇಶಗಳಿಗೆ ಮಾತ್ರ ಸೀಮಿತಗೊಳಿಸುತ್ತವೆ. ಆನ್‌ಲೈನ್ ಸಮಾವೇಶಗಳಿಗಲ್ಲ. ವೆಬ್‌ನಾರ್‌ಗಳ ಸಂದರ್ಭದಲ್ಲಿ ಇದು ಅಪ್ರಸ್ತುತವಾಗುತ್ತದೆ ಎಂದು ತಿಳಿಸಿದೆಯಾದರೂ ಆನ್‌ಲೈನ್ … Continued

ಭಾರತದ ಆರೋಗ್ಯ ಪರಿಸರ ವ್ಯವಸ್ಥೆಯನ್ನು ಜಗತ್ತು ಹೊಸ ದೃಷ್ಟಿಕೋನದಿಂದ ನೋಡುತ್ತಿದೆ: ಪ್ರಧಾನಿ ಮೋದಿ

ಭಾರತೀಯ ಆರೋಗ್ಯ ಪರಿಸರ ವ್ಯವಸ್ಥೆಯನ್ನು ಹೊಸ ದೃಷ್ಟಿಕೋನ, ಗೌರವ ಮತ್ತು ಹೊಸ ವಿಶ್ವಾಸಾರ್ಹತೆಯಿಂದ ನೋಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅ ಅವರು ಎಂಜಿಆರ್‌ ವೈದ್ಯಕೀಯ ವಿಶ್ವವಿದ್ಯಾಲಯದ ೩೩ನೇ ಘಟಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಕೊರೊನಾ ರೋಗದ ವಿರುದ್ಧದ ಹೋರಾಟದಲ್ಲಿ ನೆರೆಯ ರಾಷ್ಟ್ರಗಳಿಗೆ ನೆರವು ನೀಡುವಲ್ಲಿ ಭಾರತದ ಪ್ರಯತ್ನ ಶ್ಲಾಘನೀಯವಾಗಿದೆ ಎಂದರು. ಭಾರತವು ಕೇವಲ ಹೊಸ … Continued

ಕೋಝಿಕೋಡ್ ರೈಲ್ವೆ ನಿಲ್ದಾಣದಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶ:ಮಹಿಳೆ ಬಂಧನ

ರೈಲಿನಲ್ಲಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ತಮಿಳುನಾಡಿನ ಮಹಿಳೆಯನ್ನು ಪೊಲೀಸರು ಬಂದಿಸಿದ್ದಾರೆ. ತಮಿಳುನಾಡು ಮೂಲದ ರಮಣಿ ಬಂಧಿತಳಾಗಿದ್ದು, ಅವಳ ಬಳಿ 100 ಜಿಲೆಟಿನ್ ಕಡ್ಡಿ ಹಾಗೂ 350 ಡಿಟೋನೇಟರ್‌ಗಳನ್ನು ಆರ್‌ಪಿಎಫ್ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಮಹಿಳೆ ಚೆನ್ನೈ-ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು ಕೋಜಿಕ್ಕೋಡ್‌ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್, ಆರ್‌ಪಿಎಫ್ ಪೊಲೀಸರು ಮಹಿಳೆಯಿಂದ ಭಾರೀ ಪ್ರಮಾಣದ … Continued