ವೀಡಿಯೊ | ಅಹಮದಾಬಾದ್ ವಿಮಾನ ದುರಂತದ ಕೆಲದಿನಗಳ ನಂತರ ಕಚೇರಿಯಲ್ಲಿ ಪಾರ್ಟಿ ; ಏರ್ ಇಂಡಿಯಾ ವೆಂಚರಿನ 4 ಹಿರಿಯ ಸಿಬ್ಬಂದಿ ವಜಾ

ನವದೆಹಲಿ: ಏರ್ ಇಂಡಿಯಾದ ವಿಮಾನ ನಿಲ್ದಾಣದ ಗೇಟ್‌ವೇ ಸೇವೆಗಳನ್ನು ಒದಗಿಸುವ ಎಐಎಸ್‌ಎಟಿಎಸ್‌ (AISATS)ನ ನಾಲ್ವರು ಹಿರಿಯ ಉದ್ಯೋಗಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತದ ಕೆಲವೇ ದಿನಗಳ ನಂತರ ನೌಕರರು ಕಚೇರಿ ಸ್ಥಳದಲ್ಲಿ ಪಾರ್ಟಿ ಮಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಹಮದಾಬಾದ್‌ನಲ್ಲಿ 275ಕ್ಕೂ … Continued

42ನೇ ವಯಸ್ಸಿನಲ್ಲೇ ʼಕಾಂಟಾ ಲಗಾʼ ಖ್ಯಾತಿಯ ಶೆಫಾಲಿ ಜರಿವಾಲಾ ಸಾವು

ಮುಂಬೈ: ‘ಕಾಂಟಾ ಲಗಾ’ ಹಾಡಿನ ಖ್ಯಾತಿಯ ಶೆಫಾಲಿ ಜರಿವಾಲಾ ಶುಕ್ರವಾರ ತಡರಾತ್ರಿ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಅವರನ್ನು ಅವರ ಪತಿ ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಿದರು, ಆದರೆ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಾವಿಗೆ ಕಾರಣವನ್ನು ಅವರ ಕುಟುಂಬ ಸದಸ್ಯರು ಇನ್ನೂ ಬಹಿರಂಗಪಡಿಸಿಲ್ಲ. ಏತನ್ಮಧ್ಯೆ, ಮುಂಬೈ ಪೊಲೀಸರು ತನಿಖೆಗಾಗಿ ತಡರಾತ್ರಿ … Continued

ಮೈ ಜುಂ ಎನ್ನುವ ವೀಡಿಯೊ | ಕಾರು ಚಲಾಯಿಸುವಾಗ ನಿದ್ದೆಗೆ ಜಾರಿದ ಎಂಜಿನಿಯರ್‌ ; ರಸ್ತೆ ಬದಿ ನಿಂತಿದ್ದ ಇಬ್ಬರಿಗೆ ಡಿಕ್ಕಿ : ಒಬ್ಬ ಸಾವು

ವಾಹನ ಚಲಾಯಿಸುವಾಗ ಗುರುಗ್ರಾಮದ ಸಿವಿಲ್ ಎಂಜಿನಿಯರ್ ಒಬ್ಬರು ನಿದ್ದೆಗೆ ಜಾರಿದ್ದರಿಂದ ವಾಹನ ಇಬ್ಬರಿಗೆ ಡಿಕ್ಕಿ ಹೊಡೆದು, ಒಬ್ಬ ಕಾನೂನು ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ ಹಾಗೂ ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದು, ಸಿವಿಲ್ ಎಂಜಿನಿಯರ್ ನನ್ನು ಬಂಧಿಸಲಾಗಿದೆ. ಜೂನ್ 24 ರಂದು ಹರ್ಷ ಮತ್ತು ಮೋಕ್ಷ ಎಂದು ಗುರುತಿಸಲಾದ ವಿದ್ಯಾರ್ಥಿಗಳು ದೆಹಲಿ-ಜೈಪುರ ಹೆದ್ದಾರಿಯಲ್ಲಿರುವ ಚಂಚಲ್ ಧಾಬಾವನ್ನು ಬೆಳಗಿನ ಜಾವ 3 … Continued

ಪುರಿ ಜಗನ್ನಾಥ ರಥಯಾತ್ರೆಯ ರಥ ಎಳೆಯಲು ಜನಸಮೂಹ ನುಗ್ಗಿ 500ಕ್ಕೂ ಹೆಚ್ಚು ಭಕ್ತರಿಗೆ ಗಾಯ

ಪುರಿ: ಒಡಿಶಾದ ಪುರಿಯಲ್ಲಿ ವಾರ್ಷಿಕ ಜಗನ್ನಾಥ ರಥಯಾತ್ರೆ ಉತ್ಸವದ ಸಂದರ್ಭದಲ್ಲಿ ರಥ ಎಳೆಯಲು ಭಾರಿ ಜನಸಮೂಹ ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಗಿ 500 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಪುರಿಯಲ್ಲಿ ರಥಗಳನ್ನು ಶಾಸ್ತ್ರೋಕ್ತವಾಗಿ ಎಳೆಯುವ ಸಂದರ್ಭದಲ್ಲಿ ಈ ಘಟನೆ ವರದಿಯಾಗಿದೆ. ಒಡಿಶಾ ಸರ್ಕಾರವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಜಗನ್ನಾಥ ರಥಯಾತ್ರೆಯ ಸಮಯದಲ್ಲಿ ಕೆಲವು ಭಕ್ತರು ಮೂರ್ಛೆ ಹೋದ … Continued

ವೀಡಿಯೊ..| ಭಾರತದ ರಕ್ಷಣಾ ವ್ಯವಸ್ಥೆಗಳ ಬಗ್ಗೆ ಚೀನಾ ಗುಪ್ತಚರ ಮಾಹಿತಿ ನೀಡಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನದ ರಕ್ಷಣಾ ಸಚಿವ

ಇಸ್ಲಾಮಾಬಾದ್: ಭಾರತದೊಂದಿಗಿನ ಮಿಲಿಟರಿ ಸಂಘರ್ಷದ ಸಮಯದಲ್ಲಿ ಚೀನಾವು ಪಾಕಿಸ್ತಾನಕ್ಕೆ ನಿರ್ಣಾಯಕ ಗುಪ್ತಚರ ಮಾಹಿತಿಯನ್ನು ನೀಡಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಒಪ್ಪಿಕೊಂಡಿದ್ದಾರೆ. ಈ ಮಾಹಿತಿಯು ಭಾರತದ ವಾಯು ರಕ್ಷಣಾ ವ್ಯವಸ್ಥೆಗಳ ಬಗ್ಗೆ ವಿವರಗಳನ್ನು ಒಳಗೊಂಡಿತ್ತು ಎಂದು ವರದಿಯಾಗಿದೆ. ಸಂದರ್ಶನವೊಂದರಲ್ಲಿ, ಪಾಕಿಸ್ತಾನದ ಖವಾಜಾ ಆಸಿಫ್, ಭಾರತದ ಜೊತೆ ಸಂಘರ್ಷದ ನಂತರ ಪಾಕಿಸ್ತಾನವು ಹೆಚ್ಚಿನ ಎಚ್ಚರಿಕೆಯಲ್ಲಿದೆ … Continued

ಪರಾರಿಯಾಗುತ್ತಿದ್ದ ಕೊಲೆ ಆರೋಪಿ ಹಿಡಿಯಲು ಕಾರಿನ ಬಾಗಿಲಿಗೆ ನೇತಾಡಿ ತಡೆಯಲು ಯತ್ನಿಸಿದ ಪೊಲೀಸ್‌ ಅಧಿಕಾರಿ; ವೀಡಿಯೊ ವೈರಲ್‌

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ತಿರುಪತಿ ಹೆದ್ದಾರಿಯಲ್ಲಿ ಪೊಲೀಸರಿಗೆ ಬೇಕಾಗಿದ್ದ ವ್ಯಕ್ತಿಯನ್ನು ಬಂಧಿಸಲು ಪೊಲೀಸ್‌ ಅಧಿಕಾರಿಯೊಬ್ಬರು ಚಲಿಸುತ್ತಿದ್ದ ಕಾರಿನ ಬಾಗಿಲೆಗೆ ಜೋತುಬಿದ್ದು ಆತನನ್ನು ಹಿಡಿಯಲು ಪ್ರಯತ್ನಿಸುತ್ತಿರುವ ಸಾಹಸದ ವೀಡಿಯೊ ವೈರಲ್‌ ಆಗಿದೆ. ವ್ಯಕ್ತಿಯೊಬ್ಬರು ಈ ವೀಡಿಯೊ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪೊಲೀಸರು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಆರೋಪಿ ವ್ಯಕ್ತಿ ಅಲಗುರಾಜ ಎಂಬಾತ … Continued

ರತನ್ ಟಾಟಾಗೆ ಹೆಮ್ಮೆ ತಂದ ತಮ್ಮ…! ಭಾರತದ ನಂ.1 ಮೌಲ್ಯಯುತ ಬ್ರ್ಯಾಂಡ್ ಆದ ಟಾಟಾ ಗ್ರುಪ್‌ ; ಬ್ರ್ಯಾಂಡ್ ಮೌಲ್ಯ ಎಷ್ಟು ಗೊತ್ತೆ…?

ನವದೆಹಲಿ; 2025ರ ಬ್ರಾಂಡ್ ಫೈನಾನ್ಸ್ ಇಂಡಿಯಾ 100 ವರದಿಯ ಪ್ರಕಾರ, ಟಾಟಾ ಗ್ರೂಪ್ ಬ್ರ್ಯಾಂಡ್ ಮೌಲ್ಯಮಾಪನದಲ್ಲಿ $30 ಬಿಲಿಯನ್ ಗಡಿಯನ್ನು ದಾಟಿದ ಮೊದಲ ಭಾರತೀಯ ಬ್ರ್ಯಾಂಡ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವರ್ಷದಿಂದ ವರ್ಷಕ್ಕೆ ಶೇ.10 ರಷ್ಟು ಏರಿಕೆಯೊಂದಿಗೆ, ಗುಂಪಿನ ಬ್ರಾಂಡ್ ಮೌಲ್ಯವು ಈಗ $31.60 ಬಿಲಿಯನ್ ಆಗಿದೆ. ಈ ಮೈಲಿಗಲ್ಲು ಭಾರತೀಯ ಬ್ರ್ಯಾಂಡ್‌ಗಳ ಬೆಳೆಯುತ್ತಿರುವ ಜಾಗತಿಕ … Continued

ಕಾರಿನಲ್ಲಿ ಕುಳಿತಿದ್ದ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಜಗ್ಗು ತಾಯಿ, ಮತ್ತೊಬ್ಬನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪಂಜಾಬ್‌ನ ಬಟಾಲಾದಲ್ಲಿ ಗುರುವಾರ ಸಂಜೆ ನಡೆದ ಘಟನೆಯಲ್ಲಿ, ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಜಗ್ಗು ಭಗವಾನಪುರಿಯಾ ಅವರ ತಾಯಿ ಹರ್ಜಿತ್ ಕೌರ್ ಮತ್ತು ಅವರ ಜೊತೆಗಿದ್ದ ವ್ಯಕ್ತಿಯನ್ನು ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬಟಾಲಾದ ಸಿವಿಲ್ ಲೈನ್ಸ್ ಪ್ರದೇಶದ ಅಡಿಯಲ್ಲಿ ಬರುವ ಖಾಡಿಯನ್ ರಸ್ತೆಯಲ್ಲಿ ಗುರುವಾರ ರಾತ್ರಿ 9:30 ರ … Continued

ವಿದ್ಯುತ್ ಇಲ್ಲ ಎಂದು ಹೇಳಲು ಹೋದ ವಸತಿ ಸಮುಚ್ಚಯದ ನಿವಾಸಿಗಳಿಗೆ ದೊಣ್ಣೆಯಿಂದ ಹೊಡೆದ ಕಾವಲುಗಾರರು, ಸಿಬ್ಬಂದಿ ; ವೀಡಿಯೊ ವೈರಲ್‌

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾದ ಬಹುಮಹಡಿ ವಸತಿ ಸಮುಚ್ಚಯದಲ್ಲಿ ವಾಸಿಸುವ ನಿವಾಸಿಗಳು ವಿದ್ಯುತ್ ಕಡಿತದ ಬಗ್ಗೆ ದೂರು ನೀಡಿದ ನಂತರ ಅವರನ್ನು ಒದ್ದು, ದೊಣ್ಣೆಯಿಂದ ಹೊಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಗುರುವಾರ ರಾತ್ರಿ ಇಕೋವಿಲೇಜ್-1 ಸೊಸೈಟಿಯಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ವಾಚ್‌ಮೆನ್‌ಗಳು ಮತ್ತು ಇತರ … Continued

ಕಾನೂನು ಕಾಲೇಜ್‌ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ; ತೃಣಮೂಲ ನಾಯಕ, ಇಬ್ಬರು ವಿದ್ಯಾರ್ಥಿಗಳ ಬಂಧನ

ಕೋಲ್ಕತಾ : ಕೋಲ್ಕತಾದ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನಲ್ಲಿ ಇದೇ ರೀತಿಯ ಅಪರಾಧವು ದೇಶಾದ್ಯಂತ ಪ್ರತಿಭಟನೆಗಳಿಗೆ ಕಾರಣವಾದ ಆರು ತಿಂಗಳ ನಂತರ ಈ ಘಟನೆ ನಡೆದಿದೆ. ಬಂಧಿತ ಮೂವರು … Continued