ನಾಲ್ಕು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದ ಚಿಲ್ಲರೆ ಹಣದುಬ್ಬರ

ನವದೆಹಲಿ : ಆಹಾರ ಬೆಲೆಯಲ್ಲಿ ಮತ್ತಷ್ಟು ಕುಸಿತದಿಂದಾಗಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ ನಾಲ್ಕು ತಿಂಗಳ ಕನಿಷ್ಠ 4.87%ಕ್ಕೆ ಇಳಿದಿದೆ ಎಂದು ಗುರುವಾರ ಬಿಡುಗಡೆಯಾದ ಸರ್ಕಾರಿ ಅಂಕಿಅಂಶಗಳು ತೋರಿಸಿವೆ. ಗ್ರಾಹಕ ಬೆಲೆ ಸೂಚ್ಯಂಕ (CPI) ಆಧಾರಿತ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ 5.02 ಶೇಕಡಾ ಮತ್ತು ಆಗಸ್ಟ್ 2023 ರಲ್ಲಿ 6.83% ಇತ್ತು. ಅಕ್ಟೋಬರ್ 2022 ರಲ್ಲಿ, ಚಿಲ್ಲರೆ ಹಣದುಬ್ಬರ … Continued

ಆಘಾತಕಾರಿ…: ಹೋಮ್‌ಸ್ಟೇ ಉದ್ಯೋಗಿಗೆ ಬಲವಂತವಾಗಿ ಸಾರಾಯಿ ಕುಡಿಸಿ, ಥಳಿಸಿ ಸಾಮೂಹಿಕ ಅತ್ಯಾಚಾರ : ಮಹಿಳೆ ಸೇರಿ ಐವರ ಬಂಧನ

ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಐವರು ದುಷ್ಕರ್ಮಿಗಳು ಮಹಿಳೆಯೊಬ್ಬರಿಗೆ ಬಲವಂತವಾಗಿ ಮದ್ಯಪಾನ ಮಾಡಿಸಿ, ಆಕೆಗೆ ಥಳಿಸಿ ಹೋಮ್‌ಸ್ಟೇನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಭಯಾನಕ ಘಟನೆ ವರದಿಯಾಗಿದೆ. ತನ್ನ ಸ್ನೇಹಿತ ಹಾಗೂ ಇತರೆ ಕೆಲವರು ಬಲವಂತವಾಗಿ ತನಗೆ ಮದ್ಯಪಾನ ಮಾಡಿಸಿದ್ದು, ಬಳಿಕ ಕೊಠಡಿಯೊಂದಕ್ಕೆ ಎಳೆದೊಯ್ದರು. ಅದಕ್ಕೆ ವಿರೋಧಿಸಲು ಪ್ರಯತ್ನಿಸಿದಾಗ ಕೆಲವರು ಥಳಿಸಿದರು ಎಂದು ಅತ್ಯಾಚಾರಕ್ಕೆ … Continued

ರಾಸಾಯನಿಕ ಗೋದಾಮಿನಲ್ಲಿ ಬೆಂಕಿ: ಬಹುಮಹಡಿ ಕಟ್ಟಡಕ್ಕೆ ವ್ಯಾಪಿಸಿ 9 ಸಾವು

ಹೈದರಾಬಾದ್‌ : ಹೈದರಾಬಾದ್ ನಾಂಪಲ್ಲಿ ವಸತಿ ಕಟ್ಟಡದಲ್ಲಿ ಸೋಮವಾರ ಸಂಭವಿಸಿದ ಭಾರೀ ಬೆಂಕಿಯಲ್ಲಿ ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ದುರಂತದ ನಂತರ ಒಟ್ಟು 16 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ರಕ್ಷಣಾ ಮತ್ತು ತಂಪಾಗಿಸುವ ಕಾರ್ಯಾಚರಣೆ ನಡೆಯುತ್ತಿದೆ. ಮೇಲಿನ ಮಹಡಿಗಳಲ್ಲಿ ವಾಸಿಸುವ … Continued

ವಿಶ್ವಕಪ್ ಲೀಗ್‌ ಪಂದ್ಯದಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರು…: ಬ್ಯಾಟಿಂಗ್‌, ಬೌಲಿಂಗ್‌ ನಲ್ಲಿ ಇವರೇ ಟಾಪರ್‌…

ಬೆಂಗಳೂರು: ಈ ಬಾರಿಯ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿವೆ. ಭಾರತ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಸೆಮಿಫೈನಲ್‌ಗೆ ಪ್ರವೇಶಿವೆ. ಸೆಮಿಫೈನಲ್‌ ಪಂದ್ಯಗಳು ನವೆಂಬರ್‌ 15, 16ರಂದು ಕ್ರಮವಾಗಿ ಮುಂಬೈ ಮತ್ತು ಕೋಲ್ಕತ್ತದಲ್ಲಿ ನಡೆಯಲಿವೆ. ರೌಂಡ್‌ ರಾಬಿನ್‌ ಮಾದರಿಯ ಲೀಗ್‌ ಹಂತದಲ್ಲಿ ಎಲ್ಲ ತಂಡಗಳು ತಲಾ 9 ಪಂದ್ಯಗಳಲ್ಲಿ … Continued

ಜೈಪುರ: ದೀಪಾವಳಿಗಾಗಿ ಹಸುವಿನ ಸಗಣಿಯಿಂದ 3 ಲಕ್ಷಕ್ಕೂ ಹೆಚ್ಚು ದೀಪಗಳ ತಯಾರಿಕೆ

ಜೈಪುರ: ದೀಪಾವಳಿ ಪ್ರಯುಕ್ತ ‘ಶ್ರೀ ಕೃಷ್ಣ ಬಲರಾಮ ಗೋ ಸೇವಾ ಟ್ರಸ್ಟ್‌’ ಹಸುವಿನ ಸಗಣಿ ಬಳಸಿ ಸುಮಾರು 3 ಲಕ್ಷಕ್ಕೂ ಹೆಚ್ಚಿನ ದೀಪಗಳನ್ನು ತಯಾರಿಸಿದೆ ಎಂದು ಸಂಸ್ಥೆಯ ವಕ್ತಾರೊಬ್ಬರು ತಿಳಿಸಿದ್ದಾರೆ. ದೀಪಗಳನ್ನು ತಯಾರಿಸಲು ಬೇಕಾದ ಸಗಣಿಯನ್ನು ಹಿಂಗೋನಿಯಾ ಗೋಶಾಲೆಯಿಂದ ತರಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. 2016 ರಲ್ಲಿ ರಾಜಸ್ಥಾನ ಸರ್ಕಾರ ಮತ್ತು ಜೈಪುರ ಮಹಾನಗರ ಪಾಲಿಕೆಯು … Continued

ವಿಶ್ವಕಪ್‌ 2023 : ನೆದರ್ಲ್ಯಾಂಡ್‌ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ ರೋಹಿತ ಶರ್ಮಾ

ನವದೆಹಲಿ: ಭಾರತದ ನಾಯಕ ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ಆರಂಭಿಕ ಆಟಗಾರನಾಗಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. 36ರ ಹರೆಯದ ಶರ್ಮಾ ಅವರು ವಿಶ್ವಕಪ್ ನಲ್ಲಿ ನೆದರ್ಲೆಂಡ್ಸ್ ವಿರುದ್ಧದ ಪಂದ್ಯಾವಳಿಯ 9 ನೇ ಹಣಾಹಣಿಯಲ್ಲಿ ಈ ಮೈಲಿಗಲ್ಲನ್ನು ಸಾಧಿಸಿದರು. ಆರಂಭಿಕ ಆಟಗಾರನಾಗಿ ರೋಹಿತ ಶರ್ಮಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 14000 ರನ್ ಗಳಿಸಿದ … Continued

ಉತ್ತರಾಖಂಡ; ಸುರಂಗ ಕುಸಿತ, 40 ಕಾರ್ಮಿಕರು ಒಳಗೆ ಸಿಲುಕಿರುವ ಶಂಕೆ

ಉತ್ತರಕಾಶಿ : ಉತ್ತರಾಖಂಡ ರಾಜ್ಯದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತಗೊಂಡಿದೆ. ಸುರಂಗ ಮಾರ್ಗ ಕಾಮಗಾರಿಯಲ್ಲಿ ತೊಡಗಿದ್ದ ಸುಮಾರು 40 ಕಾರ್ಮಿಕರು ಅದರ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಾರ್ಮಿಕರನ್ನು ರಕ್ಷಣೆ ಮಾಡಲು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಉತ್ತರಕಾಶಿಯಲ್ಲಿ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತಿತ್ತು. ಭಾನುವಾರ ಮುಂಜಾನೆ ಈ ಸುರಂಗ ಮಾರ್ಗದ ಒಂದು … Continued

ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲಿ ವಸಾಹತು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಮತ ಚಲಾಯಿಸಿದ ಭಾರತ

ನವದೆಹಲಿ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ವಸಾಹತುಗಳನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ. “ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಮತ್ತು ಆಕ್ರಮಿತ ಸಿರಿಯನ್ ಗೋಲನ್‌ನಲ್ಲಿ” ವಸಾಹತು ಚಟುವಟಿಕೆಗಳನ್ನು ಖಂಡಿಸುವ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿದ ಏಳು ದೇಶಗಳಲ್ಲಿ ಅಮೆರಿಕ ಮತ್ತು ಕೆನಡಾ ಸೇರಿವೆ. ಹದಿನೆಂಟು ದೇಶಗಳು ಮತದಾನದಿಂದ ದೂರ ಉಳಿದವು. … Continued

ಐಸಿಸ್ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ಆರೋಪದಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದೊಂದಿಗೆ ನಂಟು ಹೊಂದಿರುವ 4 ಮಂದಿ ಬಂಧನ

ನವದೆಹಲಿ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಆರು ಶಂಕಿತ ಐಸಿಸ್ ಕಾರ್ಯಕರ್ತರನ್ನು ಬಂಧಿಸಿದೆ. ಆರು ಮಂದಿಯಲ್ಲಿ ನಾಲ್ವರನ್ನು ರಕೀಬ್ ಇನಾಮ್, ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್ ಮತ್ತು ಮೊಹಮ್ಮದ್ ನಾಜಿಮ್ ಎಂದು ಗುರುತಿಸಲಾಗಿದೆ. ಎಲ್ಲಾ ಬಂಧಿತ ಆರೋಪಿಗಳು ಅಲಿಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆ(SAMU)ಯೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಅಲಿಗಢ … Continued

ವೀಡಿಯೊ.: ತೆಲಂಗಾಣದಲ್ಲಿ ಪ್ರಧಾನಿ ರ‍್ಯಾಲಿಯಲ್ಲಿ ಲೈಟ್‌ ಟವರ್ ಏರಿದ ಮಹಿಳೆ ; ಭಾಷಣದ ಮಧ್ಯೆ ಗಮನಿಸಿ ʼಮಗಳೇ ಕೆಳಗೆ ಇಳಿʼ ಎಂದು ಪದೇ ಪದೇ ಮನವಿ ಮಾಡಿದ ಮೋದಿ | ವೀಕ್ಷಿಸಿ

ಹೈದರಾಬಾದ್‌ : ಶನಿವಾರ ತೆಲಂಗಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಯಲ್ಲಿ, ಮಹಿಳೆಯೊಬ್ಬರು ಅವರ ಗಮನ ಸೆಳೆಯಲು ಮತ್ತು ತನ್ನ ಸಮಸ್ಯೆಗಳ ಬಗ್ಗೆ ಮಾತನಾಡಲು ಲೈಟ್ ಟವರ್ ಅನ್ನು ಏರಿದ್ದರು. ಭಾಷಣ ಮಾಡುತ್ತಿರುವಾಗ ಟವರ್‌ ಏರಿದ ಮಹಿಳೆಯನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಟವರ್‌ನಿಂದ ಕೆಳಗೆ ಬರುವಂತೆ ಮನವಿ ಮಾಡಿದರು. ವೀಡಿಯೊದಲ್ಲಿ ಮಹಿಳೆ ಎತ್ತರದ … Continued