ಪ್ರಾಯೋಗಿಕ ಪರೀಕ್ಷೆ ವೇಳೆ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ…!

ದೆಹಲಿ: ಗುರುವಾರದಂದು ನಡೆಯುತ್ತಿದ್ದ ಪ್ರಾಯೋಗಿಕ ಪರೀಕ್ಷೆಯ ವೇಳೆ ಇನ್ವಿಜಿಲೇಟರ್ ಆಗಿ ನೇಮಕಗೊಂಡಿದ್ದ ದೆಹಲಿ ಸರ್ಕಾರಿ ಶಾಲೆಯ ಶಿಕ್ಷಕನಿಗೆ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದರ್‌ಪುರಿ ಪ್ರದೇಶದಲ್ಲಿನ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಭೂದೇವ್ ಎಂಬ ಶಿಕ್ಷಕನಿಗೆ ವಿದ್ಯಾರ್ಥಿ ಚಾಕು ಇರಿದಿದ್ದಾನೆ. ಹೊಟ್ಟೆಗೆ ಗಾಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರು ಬಿಎಲ್‌ಕೆ ಕಪೂರ್ ಆಸ್ಪತ್ರೆಯಲ್ಲಿ … Continued

ಅಮಾನತುಗೊಂಡ ಡಿಎಂಕೆ ನಾಯಕ ಕೃಷ್ಣಮೂರ್ತಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ರಾಜ್ಯಪಾಲ

ಚೆನ್ನೈ: ತಮ್ಮ ವಿರುದ್ಧ ನಿಂದನೀಯ ಮತ್ತು ಅವಹೇಳನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ತಮಿಳುನಾಡು (ಟಿಎನ್) ರಾಜ್ಯಪಾಲರಾದ ಆರ್.ಎನ್. ರವಿ ಅವರು ಈಗ ಅಮಾನತುಗೊಂಡಿರುವ ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ಗುರುವಾರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 199(2)ರ ಅಡಿಯಲ್ಲಿ ರಾಜ್ಯಪಾಲರ ಪರವಾಗಿ ಚೆನ್ನೈ ಸಿಟಿ ಪಬ್ಲಿಕ್ ಪ್ರಾಸಿಕ್ಯೂಟರ್ (ಸಿಪಿಪಿ) … Continued

ಕುಸ್ತಿಪಟುಗಳ ಪ್ರತಿಭಟನೆ…: ‘ರಾಜಕೀಯ ವಿಷಯ ಮಾಡಬೇಡಿ’; ಎಡಪಕ್ಷದ ನಾಯಕಿ ಬೃಂದಾ ಕಾರಟ್‌ಗೆ ವೇದಿಕೆ ತೊರೆಯುವಂತೆ ಮನವಿ | ವೀಕ್ಷಿಸಿ

ನವದೆಹಲಿ: ಫೆಡರೇಶನ್ ಮುಖ್ಯಸ್ಥರು ಮತ್ತು ಹಲವಾರು ತರಬೇತುದಾರರು ಅನೇಕ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸುಮಾರು 200 ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಜಂತರ್ ಮಂತರ್‌ ಪ್ರತಿಭಟನಾ ಸ್ಥಳಕ್ಕೆ ಇಂದು, ಗುರುವಾರ ಆಗಮಿಸಿದ್ದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕಿ ಬೃಂದಾ ಕಾರಟ್ ಆಗಮಿಸಿದರು. ಆದರೆ ಅವರಿಗೆ ವೇದಿಕೆಯಿಂದ ಹೊರಹೋಗುವಂತೆ ಕೈಮುಗಿದು … Continued

ನಾವು ವೋಟ್​ ಬ್ಯಾಂಕ್ ರಾಜಕಾರಣ ಮಾಡಲ್ಲ, ಮನೆಮನೆಗೆ ನೀರು ಕೊಡ್ತೇವೆ, ಅಭಿವೃದ್ಧಿ ರಾಜಕಾರಣ ಮಾಡ್ತೇವೆ : ಪ್ರಧಾನಿ ಮೋದಿ

ಯಾದಗಿರಿ: ನಾವು ವೋಟ್​ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ. ನಾವು ಅಭಿವೃದ್ಧಿ ರಾಜಕಾರಣ ಮಾಡುತ್ತೇವೆ. ಯಾದರಿಗಿ ಸೇರಿದಂತೆ ದೇಶದ ಇಂಥ ಅನೇಕ ಜಿಲ್ಲೆಗಳಲ್ಲಿ ಆಕಾಂಕ್ಷಿ ಜಿಲ್ಲೆ ಎನ್ನುವ ಹೊಸ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಗುರುವಾರ ಜಲಜೀವನ್ ಮಿಷನ್ ಯೋಜನೆಯಡಿ ಯಾದಗಿರಿ ಜಿಲ್ಲೆಯ 710 ಗ್ರಾಮೀಣ ವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸೌಕರ್ಯ ನೀಡುವ … Continued

ಐಷಾರಾಮಿ ಜೀವನ ತೊರೆದು ಸನ್ಯಾಸತ್ವ ಸ್ವೀಕರಿಸಿದ ವಜ್ರದ ಉದ್ಯಮಿಯ 8 ವರ್ಷದ ಮಗಳು…!

ವಜ್ರದ ಉದ್ಯಮಿಯ 8 ವರ್ಷದ ಮಗಳು ಜೀವನದ ಎಲ್ಲ ಐಷಾರಾಮಿ ಜೀವನ ಹಾಗೂ ಐಹಿಕ ಸುಖಗಳನ್ನು ತ್ಯಜಿಸಿ ಸನ್ಯಾಸಿಯಾಗಲು ನಿರ್ಧರಿಸಿದ್ದಾರೆ. ಗುಜರಾತಿನ ಸೂರತ್ ಮೂಲದ ವಜ್ರದ ಉದ್ಯಮಿಯ ಧನೇಶ್ ಸಾಂಘ್ವಿ ಅವರ ಹಿರಿಯ ಪುತ್ರಿ 8 ವರ್ಷದ ದೇವಾಂಶಿ ಸಾಂಘ್ವಿ ಸನ್ಯಾಸಿನಿಯಾಗಿ ಮುಂದುವರಿಯಲಿದ್ದಾರೆ…! ಧನೇಶ್ ಸಾಂಘ್ವಿ ಅವರು ವಿಶ್ವದ ಅತ್ಯಂತ ಹಳೆಯ ವಜ್ರ ಕಂಪನಿಗಳಲ್ಲಿ ಒಂದಾದ … Continued

ಹಾಡಹಗಲೇ ಬ್ಯಾಂಕ್ ಲೂಟಿಗೆ ಯತ್ನಿಸಿದ ಶಸ್ತ್ರಸಜ್ಜಿತ ದರೋಡೆಕೋರರು: ಧೈರ್ಯದಿಂದ ಹೋರಾಡಿ ಯತ್ನ ವಿಫಲಗೊಳಿಸಿದ ಇಬ್ಬರು ಮಹಿಳಾ ಪೊಲೀಸ್ : ವೀಕ್ಷಿಸಿ

ಪಾಟ್ನಾ: ಬಿಹಾರದ ಹಾಜಿಪುರದ ಬ್ಯಾಂಕ್‌ನಲ್ಲಿ ಮೂವರು ಶಸ್ತ್ರಸಜ್ಜಿತ ದರೋಡೆಕೋರರು ಬುಧವಾರ ಬ್ಯಾಂಕ್‌ಗೆ ಬಲವಂತವಾಗಿ ನುಗ್ಗಲು ಪ್ರಯತ್ನಿಸಿದಾಗ ಕಾವಲು ಕಾಯುತ್ತಿದ್ದ ಇಬ್ಬರು ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳು ಧೈರ್ಯದಿಂದ ಹೋರಾಡಿ ಅವರನ್ನು ಹಿಮ್ಮೆಟ್ಟಿಸಿದ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂಹಿ ಕುಮಾರಿ ಮತ್ತು ಶಾಂತಿ ಕುಮಾರ ಎಂಬ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳು ಸದರ್ ಪೊಲೀಸ್ … Continued

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪ | 72 ಗಂಟೆಗಳ ಒಳಗೆ ವಿವರಣೆ ನೀಡಲು ಡಬ್ಲ್ಯುಎಫ್‌ಐಗೆ ಸೂಚಿಸಿದ ಕ್ರೀಡಾ ಸಚಿವಾಲಯ

ನವದೆಹಲಿ : ವಿನೇಶ್ ಫೋಗಟ್ ಸೇರಿದಂತೆ ಒಲಿಂಪಿಕ್ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಕಾರ್ಯನಿರ್ವಹಣೆಯ ವಿರುದ್ಧ ಪ್ರತಿಭಟಿಸಿದ ನಂತರ ಕ್ರೀಡಾ ಸಚಿವಾಲಯವು ಜನವರಿ 18 ಬುಧವಾರದಂದು ಭಾರತದ ಕುಸ್ತಿ ಫೆಡರೇಶನ್‌ನಿಂದ ವಿವರಣೆ ಕೇಳಿದೆ. ಮಹಿಳಾ ಕುಸ್ತಿಪಟುಗಳು ದೆಹಲಿಯಲ್ಲಿ ನಡೆಸಿದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು, ಮಹಿಳಾ ಕುಸ್ತಿಪಟುಗಳು ಭಾರತೀಯ ರೆಸ್ಲಿಂಗ್ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷರು ಮತ್ತು ತರಬೇತುದಾರರಿಂದ ಲೈಂಗಿಕ ಕಿರುಕುಳ ಮತ್ತು … Continued

ಕಾರು-ಟ್ರಕ್ ಮುಖಾಮುಖಿ ಡಿಕ್ಕಿಯಲ್ಲಿ ಮಗು ಸೇರಿ 9 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ರೆಪೋಲಿ ಪ್ರದೇಶದಲ್ಲಿ ಗೋವಾ-ಮುಂಬೈ ಹೆದ್ದಾರಿಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತೊಂದು ಮಗು ಗಾಯಗೊಂಡಿದೆ. ಮೃತರಲ್ಲಿ ಐವರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ರಾಯಗಢ ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಬೈನಿಂದ 130 ಕಿ.ಮೀ ದೂರದಲ್ಲಿರುವ … Continued

ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ 6 ತಿಂಗಳ ಬಳಿಕ ಅದೇ ಪ್ರೇಮಿಗಳಿಗೆ ಮದುವೆ ಮಾಡಿದ ಕುಟುಂಬಸ್ಥರು..!

ತಾಪಿ: ಗುಜರಾತಿನ ತಾಪಿ ಜಿಲ್ಲೆಯಲ್ಲಿ ವಿಚಿತ್ರ ವಿದ್ಯಮಾನವೊಂದು ಬೆಳಕಿಗೆ ಬಂದಿದೆ. ಕಳೆದ ವರ್ಷ ಜಿಲ್ಲೆಯ ನಿಜರ ತಾಲೂಕಿನ ನೇವಾಳ ಗ್ರಾಮದಲ್ಲಿ ತಮ್ಮ ಮದುವೆಗೆ ಮನೆಯವರು ವಿರೋಧ ಮಾಡಿದ್ದರಿಂದ ನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಕುತೂಹಲಕಾರಿಯಾಗಿ, ಈಗ ಎರಡು ಕುಟುಂಬಗಳು ಈಗ ತಮ್ಮ ತಪ್ಪನ್ನು ಅರಿತುಕೊಂಡು ಸತ್ತ ನಂತರ ಅವರಿಬ್ಬರ ಮದುವೆ ಮಾಡಿದ್ದಾರೆ…! ಆದರೆ ಸತ್ತ ನಂತರ … Continued

ನನ್ನ ಮೇಲಿನ ಆರೋಪ ನಿಜವಾಗಿದ್ದರೆ ನೇಣು ಹಾಕಿಕೊಳ್ತೇನೆ : ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪ ನಿರಾಕರಿಸಿದ ಡಬ್ಲ್ಯುಎಫ್‌ಐ ಮುಖ್ಯಸ್ಥ

ನವದೆಹಲಿ: ಕುಸ್ತಿಪಟುಗಳು ತಮ್ಮ ಮತ್ತು ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಅವರು ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಡಬ್ಲ್ಯುಎಫ್‌ಐ ಅಧ್ಯಕ್ಷರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಆರೋಪಿಸಿದ್ದರು. ಫೋಗಟ್, ಬಜರಂಗ್ ಪುನಿಯಾ ಮತ್ತು ಹಲವಾರು ಕುಸ್ತಿಪಟುಗಳು … Continued