ಕೇಂದ್ರ ಬಜೆಟ್‌ 2023 : ರೈಲ್ವೆಗೆ ಬಜೆಟ್‌ನಲ್ಲಿ ಸಾರ್ವಕಾಲಿಕ ದಾಖಲೆ ಹಣ ಮೀಸಲು, ಒಂದು ಜಿಲ್ಲೆ, ಒಂದು ಉತ್ಪನ್ನ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ ದೊಡ್ಡ ಮಟ್ಟದ ಹಣವನ್ನು ಮೀಸಲಿಟ್ಟಿದೆ. ಈ ಬಾರಿಯ ಬಜೆಟ್‌ನಲ್ಲಿ ಒಟ್ಟಾರೆ 2.40 ಲಕ್ಷ ಕೋಟಿ ರೂಪಾಯಿ ಹಣವನ್ನು ರೈಲ್ವೆ ಅಭಿವೃದ್ಧಿಗಾಗಿ ಮೀಸಲಿಡಲಾಗುವುದು ಎಂದು ವಿತ್ತ ಸಚಿನೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. 2013 ಹಾಗೂ 14ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಘೋಷಣೆ ಮಾಡಿದ ಹಣಕ್ಕಿಂತ 9 ಪಟ್ಟು ಹೆಚ್ಚು … Continued

ಕೇಂದ್ರದ 2023 ಬಜೆಟ್‌: ಮಧ್ಯಮವರ್ಗಕ್ಕೆ ಕೇಂದ್ರ ಬಜೆಟ್ ಬಂಪರ್ ಕೊಡುಗೆ-ಆದಾಯ ತೆರಿಗೆ ಮಿತಿ 5 ಲಕ್ಷದಿಂದ 7 ಲಕ್ಷಕ್ಕೆ ಏರಿಕೆ, ಹಿರಿಯ ನಾಗರಿಕರಿಗೆ ಠೇವಣಿ ಮೊತ್ತ ಮಿತಿ ಏರಿಕೆ

 ನವದೆಹಲಿ: ಕೇಂದ್ರದ 2023 ಬಜೆಟ್‌ 7 ಅಂಶಗಳನ್ನು ಬಜೆಟ್ ಒಳಗೊಳ್ಳಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.ಬಜೆಟ್‌ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಅಂಚಿನಲ್ಲಿರುವವರಿಗೆ ಸವಲತ್ತು, ಮೂಲಸೌಕರ್ಯ, ಸಾಮರ್ಥ್ಯದ ಸದ್ಬಳಕೆ, ಪರಿಸರ ಸ್ನೇಹಿ ಅಭಿವೃದ್ಧಿ, ಯುವಶಕ್ತಿಗೆ ಉತ್ತೇಜನ ಹಾಗೂ ಆರ್ಥಿಕ ಸುಧಾರಣೆಯ ಏಳು ಅಂಶಗಳನ್ನು ಒಳಗೊಂಡಿರುತ್ತದೆ ಹೇಳಿದ್ದಾರೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 2 ಲಕ್ಷ … Continued

ಕೇಂದ್ರ ಬಜೆಟ್‌ 2023 : ದೇಶದ ಅಭಿವೃದ್ಧಿಗೆ ನಿರ್ಮಲಾ ಸೀತಾರಾಮನ್‌ “ಸಪ್ತ ಸೂತ್ರ”; ಕರ್ನಾಟಕಕ್ಕೆ ಬಂಪರ್‌, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಘೋಷಣೆ

ನವದೆಹಲಿ: ಕೇಂದ್ರದ 2023 ಬಜೆಟ್‌ 7 ಅಂಶಗಳನ್ನು ಬಜೆಟ್ ಒಳಗೊಳ್ಳಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಜೆಟ್‌ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಅಂಚಿನಲ್ಲಿರುವವರಿಗೆ ಸವಲತ್ತು, ಮೂಲಸೌಕರ್ಯ, ಸಾಮರ್ಥ್ಯದ ಸದ್ಬಳಕೆ, ಪರಿಸರ ಸ್ನೇಹಿ ಅಭಿವೃದ್ಧಿ, ಯುವಶಕ್ತಿಗೆ ಉತ್ತೇಜನ ಹಾಗೂ ಆರ್ಥಿಕ ಸುಧಾರಣೆಯ ಏಳು ಅಂಶಗಳನ್ನು ಒಳಗೊಂಡಿರುತ್ತದೆ ಹೇಳಿದ್ದಾರೆ. ಬಜೆಟ್‌ 2023 ರ 7 ಪ್ರಮುಖಾಂಶಗಳು … Continued

ಆರ್ಥಿಕ ಸಮೀಕ್ಷೆ 2023: ಆರು ವರ್ಷಗಳಲ್ಲಿ ನಗರ ಪ್ರದೇಶಗಳನ್ನೂ ಮೀರಿಸಿದ ಗ್ರಾಮೀಣ ಭಾರತದ ಇಂಟರ್ನೆಟ್ ಚಂದಾದಾರಿಕೆ…!

ನವದೆಹಲಿ: 2023ರ ಬಜೆಟ್ ಅಧಿವೇಶನದ ಆರಂಭದ ದಿನವಾದ ಮಂಗಳವಾರ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆ (2022-23) ವರದಿ ಮಂಡಿಸಿದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಹಣದುಬ್ಬರವು ಶೇಕಡಾ 6.8 ರಷ್ಟಿದ್ದರೆ, GDP ಬೆಳವಣಿಗೆಯು ಮೂರು ವರ್ಷಗಳಲ್ಲಿ ಕನಿಷ್ಠ 6-6.8 ಶೇಕಡಾ ಎಂದು ಸಮೀಕ್ಷೆ ಮುನ್ಸೂಚಿಸಿದೆ. ಅಲ್ಲದೆ, ಸಮೀಕ್ಷೆಯು ದೇಶದ ಡಿಜಿಟಲ್ ಸಾರ್ವಜನಿಕ … Continued

ಇಸ್ರೇಲ್ ಹೈಫಾ ಬಂದರು ಅದಾನಿ ಗ್ರೂಪ್ ತೆಕ್ಕೆಗೆ

ಅದಾನಿ ಗ್ರೂಪ್ ಹೈಫಾ ಬಂದರನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಇಸ್ರೇಲ್‌ಗೆ ತನ್ನ ಪ್ರವೇಶ ಮಾಡಿದೆ. ಈ ಒಪ್ಪಂದವನ್ನು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು “ಅಗಾಧ ಮೈಲಿಗಲ್ಲು” ಎಂದು ಬಣ್ಣಿಸಿದ್ದಾರೆ. ಹಡಗು ಕಂಟೈನರ್‌ಗಳ ವಿಷಯದಲ್ಲಿ ಹೈಫಾ ಬಂದರು ಇಸ್ರೇಲ್‌ನಲ್ಲಿ ಎರಡನೇ ಅತಿದೊಡ್ಡ ಬಂದರು ಮತ್ತು ಪ್ರವಾಸಿ ಕ್ರೂಸ್ ಹಡಗುಗಳನ್ನು ಸಾಗಿಸುವಲ್ಲಿ ದೊಡ್ಡದಾಗಿದೆ. ಅದಾನಿ ಬಂದರುಗಳು ಮತ್ತು ವಿಶೇಷ … Continued

ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ :14 ಮಂದಿ ಸಜೀವ ದಹನ, 12 ಮಂದಿಗೆ ಗಾಯ

ಧನಬಾದ್:ಜಾರ್ಖಂಡ್‌ನ ಧನಬಾದ್ ಜಿಲ್ಲೆಯ ಬಹುಮಹಡಿ ಕಟ್ಟಡದಲ್ಲಿ ಮಂಗಳವಾರ ಸಂಭವಿಸಿದ ದೊಡ್ಡ ಬೆಂಕಿಯ ಅನಾಹುತದಲ್ಲಿ ಕನಿಷ್ಠ 14 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಧಾನಿ ರಾಂಚಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ಧನ್‌ಬಾದ್‌ನ ಜೋರಾಫಟಕ್ ಪ್ರದೇಶದ ಆಶೀರ್ವಾದ ಟವರ್‌ನಲ್ಲಿ ಸಂಜೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡದಲ್ಲಿ ಹಲವರು … Continued

ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಶಂಕರ ಮಿಶ್ರಾಗೆ ಜಾಮೀನು

ನವದೆಹಲಿ: ಕಳೆದ ನವೆಂಬರ್‌ನಲ್ಲಿ ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಶಂಕರ ಮಿಶ್ರಾ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. ಸೋಮವಾರದಂದು ತೀರ್ಪು ಕಾಯ್ದಿರಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಹರ್‌ಜ್ಯೋತ್‌ ಸಿಂಗ್ ಭಲ್ಲಾ ಇಂದು, ಮಂಗಳವಾರ ಆದೇಶ ಪ್ರಕಟಿಸಿದರು. ಶಂಕರ … Continued

ಕೇಂದ್ರದ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ನಿಧನ

ನವದೆಹಲಿ: ಹಿರಿಯ ವಕೀಲ ಮತ್ತು ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ಅವರು ಮಂಗಳವಾರ 97 ನೇ ವಯಸ್ಸಿನಲ್ಲಿ ನಿಧನರಾದರು. ಶಾಂತಿ ಭೂಷಣ್ ಅವರು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಕರಣವೊಂದರಲ್ಲಿ ರಾಜ್ ನಾರಾಯಣ್ ಅವರನ್ನು ಪ್ರತಿನಿಧಿಸಿದ್ದರು, ಇದು ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಪದಚ್ಯುತಿಗೆ ಕಾರಣವಾಯಿತು. ರಾಮ್ ಮನೋಹರ್ ಲೋಹಿಯಾ ಅವರ ಎಸ್‌ಎಸ್‌ಪಿಯ ನಾಯಕ ರಾಜ್ ನಾರಾಯಣ್ … Continued

ಜಾತಿ ವಿವಾದದ ನಡುವೆ ಕೇರಳ ಚಲನಚಿತ್ರ ಸಂಸ್ಥೆಯ ಮುಖ್ಯಸ್ಥ ಸ್ಥಾನಕ್ಕೆ ಅಡೂರ್ ಗೋಪಾಲಕೃಷ್ಣನ್ ರಾಜೀನಾಮೆ

ತಿರುವನಂತಪುರಂ : ಕೇರಳ ಸರ್ಕಾರ ನಡೆಸುತ್ತಿರುವ ಚಲನಚಿತ್ರ ಸಂಸ್ಥೆಯಲ್ಲಿನ ಜಾತಿ ಗದ್ದಲವು ಹಿರಿಯ ಚಲನಚಿತ್ರ ನಿರ್ಮಾಪಕ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಅಡೂರು ಗೋಪಾಲಕೃಷ್ಣನ್ ಅವರನ್ನು ಮಂಗಳವಾರ ಅದರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸುವಂತೆ ಒತ್ತಾಯಿಸಿತು. ಕೆ.ಆರ್. ನಾರಾಯಣನ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವಿಷುಯಲ್ ಸೈನ್ಸ್ ಅಂಡ್ ಆರ್ಟ್ಸ್‌ನ ನಿರ್ದೇಶಕ ಶಂಕರ ಮೋಹನ … Continued

ಮೊರ್ಬಿ ಸೇತುವೆ ಕುಸಿತ ಪ್ರಕರಣ: ಒರೆವಾ ಗ್ರೂಪ್ ಎಂಡಿ ಜಯಸುಖ್ ಪಟೇಲ್ ಶರಣಾಗತಿ, 7 ಆರೋಪಿಗಳಿಂದ ಜಾಮೀನಿಗೆ ಅರ್ಜಿ

ಅಹಮದಾಬಾದ್‌: ಮೊರ್ಬಿ ತೂಗುಸೇತುವೆ ಕುಸಿತ ಪ್ರಕರಣದ ಆರೋಪಪಟ್ಟಿಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎಂದು ದಾಖಲಾಗಿರುವ ಒರೆವಾ ಗ್ರೂಪ್‌ನ ಅಜಂತಾ ಮ್ಯಾನುಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್ (AMPL) ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಮಂಗಳವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. 10 ಮಂದಿ ಆರೋಪಿಗಳಲ್ಲಿ ಪಟೇಲ್ ಕೂಡ ಸೇರಿದ್ದು, ಕೊಲೆಯಲ್ಲದ ಅಪರಾಧಿ ನರಹತ್ಯೆಯ ಆರೋಪ ಎದುರಿಸುತ್ತಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜನವರಿ … Continued