ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪ | 72 ಗಂಟೆಗಳ ಒಳಗೆ ವಿವರಣೆ ನೀಡಲು ಡಬ್ಲ್ಯುಎಫ್‌ಐಗೆ ಸೂಚಿಸಿದ ಕ್ರೀಡಾ ಸಚಿವಾಲಯ

ನವದೆಹಲಿ : ವಿನೇಶ್ ಫೋಗಟ್ ಸೇರಿದಂತೆ ಒಲಿಂಪಿಕ್ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಕಾರ್ಯನಿರ್ವಹಣೆಯ ವಿರುದ್ಧ ಪ್ರತಿಭಟಿಸಿದ ನಂತರ ಕ್ರೀಡಾ ಸಚಿವಾಲಯವು ಜನವರಿ 18 ಬುಧವಾರದಂದು ಭಾರತದ ಕುಸ್ತಿ ಫೆಡರೇಶನ್‌ನಿಂದ ವಿವರಣೆ ಕೇಳಿದೆ. ಮಹಿಳಾ ಕುಸ್ತಿಪಟುಗಳು ದೆಹಲಿಯಲ್ಲಿ ನಡೆಸಿದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು, ಮಹಿಳಾ ಕುಸ್ತಿಪಟುಗಳು ಭಾರತೀಯ ರೆಸ್ಲಿಂಗ್ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷರು ಮತ್ತು ತರಬೇತುದಾರರಿಂದ ಲೈಂಗಿಕ ಕಿರುಕುಳ ಮತ್ತು … Continued

ಕಾರು-ಟ್ರಕ್ ಮುಖಾಮುಖಿ ಡಿಕ್ಕಿಯಲ್ಲಿ ಮಗು ಸೇರಿ 9 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ರೆಪೋಲಿ ಪ್ರದೇಶದಲ್ಲಿ ಗೋವಾ-ಮುಂಬೈ ಹೆದ್ದಾರಿಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತೊಂದು ಮಗು ಗಾಯಗೊಂಡಿದೆ. ಮೃತರಲ್ಲಿ ಐವರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ರಾಯಗಢ ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಬೈನಿಂದ 130 ಕಿ.ಮೀ ದೂರದಲ್ಲಿರುವ … Continued

ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ 6 ತಿಂಗಳ ಬಳಿಕ ಅದೇ ಪ್ರೇಮಿಗಳಿಗೆ ಮದುವೆ ಮಾಡಿದ ಕುಟುಂಬಸ್ಥರು..!

ತಾಪಿ: ಗುಜರಾತಿನ ತಾಪಿ ಜಿಲ್ಲೆಯಲ್ಲಿ ವಿಚಿತ್ರ ವಿದ್ಯಮಾನವೊಂದು ಬೆಳಕಿಗೆ ಬಂದಿದೆ. ಕಳೆದ ವರ್ಷ ಜಿಲ್ಲೆಯ ನಿಜರ ತಾಲೂಕಿನ ನೇವಾಳ ಗ್ರಾಮದಲ್ಲಿ ತಮ್ಮ ಮದುವೆಗೆ ಮನೆಯವರು ವಿರೋಧ ಮಾಡಿದ್ದರಿಂದ ನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಕುತೂಹಲಕಾರಿಯಾಗಿ, ಈಗ ಎರಡು ಕುಟುಂಬಗಳು ಈಗ ತಮ್ಮ ತಪ್ಪನ್ನು ಅರಿತುಕೊಂಡು ಸತ್ತ ನಂತರ ಅವರಿಬ್ಬರ ಮದುವೆ ಮಾಡಿದ್ದಾರೆ…! ಆದರೆ ಸತ್ತ ನಂತರ … Continued

ನನ್ನ ಮೇಲಿನ ಆರೋಪ ನಿಜವಾಗಿದ್ದರೆ ನೇಣು ಹಾಕಿಕೊಳ್ತೇನೆ : ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪ ನಿರಾಕರಿಸಿದ ಡಬ್ಲ್ಯುಎಫ್‌ಐ ಮುಖ್ಯಸ್ಥ

ನವದೆಹಲಿ: ಕುಸ್ತಿಪಟುಗಳು ತಮ್ಮ ಮತ್ತು ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಅವರು ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಡಬ್ಲ್ಯುಎಫ್‌ಐ ಅಧ್ಯಕ್ಷರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಆರೋಪಿಸಿದ್ದರು. ಫೋಗಟ್, ಬಜರಂಗ್ ಪುನಿಯಾ ಮತ್ತು ಹಲವಾರು ಕುಸ್ತಿಪಟುಗಳು … Continued

ಭಾರತ vs ನ್ಯೂಜಿಲೆಂಡ್: ಏಕದಿನ ಪಂದ್ಯದಲ್ಲಿ ದ್ವಿಶತಕ ಬಾರಿಸಿದ ಶುಭಮನ್ ಗಿಲ್ : ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಬ್ಯಾಟರ್

ಹೈದರಾಬಾದ್‌ : ಬುಧವಾರ ಹೈದರಾಬಾದ್‌ನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಆರಮಭಿಕ ಆಟಗಾರ ಶುಭಮನ್ ಗಿಲ್ ಅವರು ಕೇವಲ 145 ಎಸೆತಗಳಲ್ಲಿ ತಮ್ಮ ಚೊಚ್ಚಲ ದ್ವಿಶತಕವನ್ನು ಸಿಡಿಸಿದ್ದಾರೆ. ಈ ಮೂಲಕ ಶುಭಮನ್ ಗಿಲ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡರು. ಸಚಿನ್ ತೆಂಡೂಲ್ಕರ್, … Continued

ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಸ್ಟಾರ್ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್; ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ನವದೆಹಲಿ : ಭಾರತದ ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸ್ಟಾರ್ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಬುಧವಾರ, ಜನವರಿ 18 ರಂದು ಆರೋಪಿಸಿದ್ದಾರೆ. ‌ ಬಜರಂಗ್ ಪುನಿಯಾ, ಸಂಗೀತಾ ಫೋಗಟ್, ಸೋನಮ್ ಮಲಿಕ್, ಅಂಶು ಮಲಿಕ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟು … Continued

ಭಾರತ ಜೋಡೋ ಯಾತ್ರೆ ಜಮ್ಮು-ಕಾಶ್ಮೀರ ಪ್ರವೇಶಿಸುವ ಮೊದಲೇ ಪಕ್ಷಕ್ಕೆ ಕಾಂಗ್ರೆಸ್ ವಕ್ತಾರೆ ರಾಜೀನಾಮೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಯ ಪ್ರವೇಶಕ್ಕೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದು, ಪಕ್ಷದ ಜಮ್ಮು ಮತ್ತು ಕಾಶ್ಮೀರದ ವಕ್ತಾರೆ ದೀಪಿಕಾ ಪುಷ್ಕರ್ ನಾಥ ಅವರು ರಾಜೀನಾಮೆ ನೀಡಿದ್ದಾರೆ. ಭಾರತ ಜೋಡೋ ಯಾತ್ರೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಚೌಧರಿ ಲಾಲ್ ಸಿಂಗ್ … Continued

ನಟಿ ಅಮಲಾ ಪೌಲ್‌ ಗೆ ಕೇರಳದ ದೇವಾಲಯದೊಳಕ್ಕೆ ಹೋಗಲು ಪ್ರವೇಶ ನಿರಾಕರಣೆ

ಕೊಚ್ಚಿ: ಕೇರಳದ ಎರ್ನಾಕುಲಂನಲ್ಲಿರುವ ತಿರುವೈರಾನಿಕುಲಂ ಮಹಾದೇವ ದೇವಸ್ಥಾನಕ್ಕೆ ಪ್ರವೇಶಿಸಲು ಅಧಿಕಾರಿಗಳು “ಧಾರ್ಮಿಕ ತಾರತಮ್ಯ” ದಿಂದ ಅನುಮತಿ ನಿರಾಕರಿಸಿದ್ದಾರೆ ಎಂದು ನಟಿ ಅಮಲಾ ಪೌಲ್ ಆರೋಪಿಸಿದ್ದಾರೆ. ಸೋಮವಾರ ದೇವಸ್ಥಾನಕ್ಕೆ ಭೇಟಿ ನೀಡಿದಾಗ, ಆವರಣದೊಳಗೆ ಹಿಂದೂಗಳನ್ನು ಮಾತ್ರ ಅನುಮತಿಸುವ ಸಂಪ್ರದಾಯಗಳನ್ನು ಉಲ್ಲೇಖಿಸಿ ದೇವಸ್ಥಾನದ ಅಧಿಕಾರಿಗಳು ದರ್ಶನವನ್ನು ನಿರಾಕರಿಸಿದರು. ದೇವಸ್ಥಾನದ ಮುಂಭಾಗದ ರಸ್ತೆಯಿಂದ ದೇವಿಯ ದರ್ಶನಕ್ಕೆ ಒತ್ತಾಯಿಸಿ ದರ್ಶನ ನಿರಾಕರಿಸಲಾಗಿದೆ … Continued

‘ಪ್ರತಿಪಕ್ಷಗಳು ಕಡಿಮೆ ಎಂದು ಪರಿಗಣಿಸಬೇಡಿ, ಕಡೆಗಣಿಸಲ್ಪಟ್ಟ ಸಮಾಜದವರನ್ನು ತಲುಪಿ’: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಾರೋಪದಲ್ಲಿ ಮೋದಿ ಕರೆ

ನವದೆಹಲಿ : ತಳಮಟ್ಟದಲ್ಲಿ ಮತದಾರರಿಗೆ ಸೇವೆ ಸಲ್ಲಿಸಿ, ಪ್ರತಿಪಕ್ಷಗಳನ್ನು ಕಡಿಮೆ ಎಂದು ಪರಿಗಣಿಸಬೇಡಿ ಮತ್ತು ಮತಗಳ ಬಗ್ಗೆ ಚಿಂತಿಸದೆ ಕಡೆಗಣಿಸಲ್ಪಟ್ಟ ವರ್ಗಗಳನ್ನು ತಲುಪಿ-ಸಾರ್ವತ್ರಿಕ ಚುನಾವಣೆಗೆ ಕೇವಲ 400 ದಿನಗಳು ಬಾಕಿ ಉಳಿದಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಕೊನೆಯ ದಿನದಂದು ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರಿಗೆ ನೀಡಿದ ಸಲಹೆ ಇದು. … Continued

ಭೇಟಿ ಮಾಡಬಹುದು, ತಬ್ಬಿಕೊಳ್ಳಬಹುದು, ಆದರೆ ಆತನ ಸಿದ್ಧಾಂತ ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ : ವರುಣ್ ಗಾಂಧಿ ಬಗ್ಗೆ ರಾಹುಲ್ ಗಾಂಧಿ

ಹೋಶಿಯಾರಪುರ (ಪಂಜಾಬ್): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಮ್ಮ ಸೋದರ ಸಂಬಂಧಿ ಮತ್ತು ಬಿಜೆಪಿ ಸಂಸದ ವರುಣ್ ಗಾಂಧಿ ಅವರನ್ನು ತಾನು ಭೇಟಿಯಾಗಬಹುದು ಮತ್ತು ಅಪ್ಪಿಕೊಳ್ಳಬಹುದು ಆದರೆ ಅವರ ಸಿದ್ಧಾಂತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ನನ್ನ ಸಿದ್ಧಾಂತವು ಅವರ ಸಿದ್ಧಾಂತಕ್ಕೆ ಹೊಂದಿಕೆಯಾಗುವುದಿಲ್ಲ. ನಾನು ಆರ್‌ಎಸ್‌ಎಸ್ ಕಚೇರಿಗೆ ಹೋಗಲಾರೆ. ನೀವು ನನ್ನ ಕತ್ತು … Continued