ಚಲಿಸುತ್ತಿದ್ದ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ನವದೆಹಲಿ: ಬಿಹಾರದ ಬೆಟ್ಟಿಯಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವರದಿಯ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಾಲಕಿಯು ಪಶ್ಚಿಮ ಚಂಪಾರಣ್‌ನ ಬೆಟ್ಟಿಯಾಗೆ ಹೋಗಲು ಬಸ್‌ಗಾಗಿ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಳು. ಬಸ್ ಚಾಲಕನು ಬೆಟ್ಟಿಯಾಗೆ ಹೋಗುವುದಾಗಿ ಹೇಳಿ … Continued

ಎಲ್ಲ ಪ್ರಕಾರದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ನವದೆಹಲಿ: ಭಾರತದ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ಮಹಿಳಾ ಏಕದಿನ ಪಂದ್ಯಗಳಲ್ಲಿ ಮಿಥಾಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿದ್ದಾರೆ. ಭಾರತದ ಅನುಭವಿ ಕ್ರಿಕೆಟಿಗರಾದ ಮಿಥಾಲಿ, 232 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ, 50.68 ಸರಾಸರಿಯಲ್ಲಿ 7,805 ರನ್ ಗಳಿಸಿದ್ದಾರೆ. ಮಿಥಾಲಿ ಟ್ವೀಟ್ ಮಾಡಿದ್ದು, … Continued

ಜ್ಞಾನವಾಪಿ ಸಮೀಕ್ಷೆಗೆ ಆದೇಶ ನೀಡಿದ ನ್ಯಾಯಾಧೀಶರಿಗೆ ಜೀವ ಬೆದರಿಕೆ

ವಾರಾಣಸಿ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀಕ್ಷೆಗಾಗಿ ಆಯೋಗವನ್ನು ರಚಿಸಲು ಆದೇಶಿಸಿದ್ದ ವಾರಣಾಸಿಯ ನ್ಯಾಯಾಧೀಶರಿಗೆ ಜೀವ ಬೆದರಿಕೆ ಪತ್ರಗಳು ಬಂದಿದೆ. ವಿವಾದಿತ ಕಟ್ಟಡದೊಳಗೆ ಶಿವಲಿಂಗ ಪತ್ತೆಯಾದ ಸ್ಥಳವನ್ನು ಸೀಲಿಂಗ್ ಮಾಡಲು ಆದೇಶಿಸಿದ ವಾರಾಣಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ನೋಂದಾಯಿತ ಅಂಚೆ ಮೂಲಕ ಬೆದರಿಕೆಗಳು ಬಂದಿವೆ. ಇಸ್ಲಾಮಿಕ್ ಆಘಾಜ್ ಮೂವ್‌ಮೆಂಟ್ ಈ ಪತ್ರವನ್ನು … Continued

ಪ್ರವಾದಿ ಮುಹಮ್ಮದ್ ಕುರಿತ ಹೇಳಿಕೆ: ನೂಪುರ್ ಶರ್ಮಾ ಬೆಂಬಲಕ್ಕೆ ನಿಂತ ಡಚ್ ಸಂಸದ

ನವದೆಹಲಿ: ಪ್ರವಾದಿ ಮುಹಮ್ಮದ್ ಅವರ ಹೇಳಿಕೆಗಳಿಗೆ ಇಸ್ಲಾಮಿಕ್ ರಾಷ್ಟ್ರಗಳಿಂದ ಭಾರೀ ಆಕ್ಷೇಪದ ನಡುವೆ, ಬಿಜೆಪಿಯ ಮಾಜಿ ವಕ್ತಾರಾದ ನೂಪುರ್ ಶರ್ಮಾ ಅವರಿಗೆ ಈಗ ನೆದರ್ಲ್ಯಾಂಡ್ಸ್‌ನ ಬಲಪಂಥೀಯ ನಾಯಕ ಗೀರ್ಟ್ ವೈಲ್ಡರ್ಸ್‌ನಲ್ಲಿ ಬೆಂಬಲ ನೀಡಿದ್ದಾರೆ. ಡಚ್ ನಾಯಕ ನೂಪುರ್ ಶರ್ಮಾ ಅವರು ಸತ್ಯವನ್ನು ಹೇಳುತ್ತಿದ್ದಾರೆ ಎಂದು ಹೇಳಿದರು ಮತ್ತು ಹಾಗೂ ಇಸ್ಲಾಮಿಕ್ ದೇಶಗಳ ಕೋಪವನ್ನು “ಹಾಸ್ಯಾಸ್ಪದ” ಎಂದು … Continued

ಭಾರತದಿಂದ 75 ಕಿಮೀ ಉದ್ದದ ಬಿಟುಮಿನಸ್ ಕಾಂಕ್ರೀಟ್ ರಸ್ತೆ ನಿರ್ಮಾಣ ಈಗ ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ, ಭಾರತವು ನಿರಂತರವಾಗಿ ಹಾಕಲಾದ ಬಿಟುಮಿನಸ್ ಕಾಂಕ್ರೀಟ್ ರಸ್ತೆ ನಿರ್ಮಾಣದಲ್ಲಿ ಗಿನ್ನೆಸ್ ವಿಶ್ವ ದಾಖಲೆ ಮಾಡಿದೆ ಎಂದು ಪ್ರಕಟಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಸಲಹೆಗಾರರಾದ ರಾಜ್‌ಪಥ್ ಇನ್‌ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ಮತ್ತು ಜಗದೀಶ್ ಕದಮ್ ಅವರು ರಾಷ್ಟ್ರೀಯ ಹೆದ್ದಾರಿ 53 ರಲ್ಲಿ ಒಂದೇ … Continued

ರೆಪೊ ದರ ಮತ್ತೆ ಏರಿಕೆ ಮಾಡಿದ ಆರ್‌ಬಿಐ : ಇಎಂಐಗಳು, ಸಾಲದ ಮೇಲಿನ ಬಡ್ಡಿ ದರಗಳು ಹೆಚ್ಚಾಗಬಹುದು

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ರೆಪೋ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 4.90 ಕ್ಕೆ ಹೆಚ್ಚಿಸುವುದಾಗಿ ಪ್ರಕಟಿಸಿದೆ. 2022-23 ರ ಹಣಕಾಸು ವರ್ಷದಲ್ಲಿ ಹಣದುಬ್ಬರ ದರವು ಶೇಕಡಾ 6.7 ರಷ್ಟಿದೆ ಎಂದು ಅಂದಾಜಿಸಲಾಗಿದ್ದರೂ, ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕತೆಯು ಶೇಕಡಾ 7.2 ರಷ್ಟು ಬೆಳವಣಿಗೆಯಾಗಲಿದೆ ಎಂದು ಆರ್‌ಬಿಐ ಭರವಸೆ ನೀಡಿದೆ. ವಿತ್ತೀಯ ನೀತಿ … Continued

ಭಾರತದಲ್ಲಿ ಕೊರೊನಾ ಪ್ರಕರಣಗಳಲ್ಲಿ ಶೇ.41ರಷ್ಟು ಏರಿಕೆ

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹೊಸ ಅಲೆ ಸೃಷ್ಟಿಯಾಗುತ್ತಿದೆಯಾ ಎಂಬ ಆತಂಕ ಮತ್ತೆ ಎದುರಾಗಿದೆ. ಮೂರು ತಿಂಗಳ ನಂತರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಶೇ.41ರಷ್ಟು ಏರಿಕೆಯಾಗಿರುವುದೇ ಈ ಆತಂಕಕ್ಕೆ ಕಾರಣ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ (ಬುಧವಾರ) 5233 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ 7 ಮಂದಿ … Continued

ಪ್ರವಾದಿ ಮುಹಮ್ಮದ್ ವಿವಾದಿತ ಹೇಳಿಕೆಗಳ ನಂತರ ಪಕ್ಷದ ವಕ್ತಾರರಿಗೆ-ನಾಯಕರಿಗೆ ಲಕ್ಷ್ಮಣ ರೇಖೆ ಎಳೆದ ಬಿಜೆಪಿ

ನವದೆಹಲಿ: ಪ್ರವಾದಿ ಮುಹಮ್ಮದ್ ಕುರಿತು ಪಕ್ಷದ ನಾಯಕಿ ನೂಪುರ್ ಶರ್ಮಾ ಅವರ ಹೇಳಿಕೆಗೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಹಿನ್ನಡೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ತನ್ನ ವಕ್ತಾರರು ಮತ್ತು ಟಿವಿ ಚರ್ಚೆಗಳಲ್ಲಿ ಭಾಗವಹಿಸುವ ನಾಯಕರಿಗೆ ಬಿಜೆಪಿ ಹೊಸ ಮಿತಿಗಳನ್ನು ನಿಗದಿಪಡಿಸಿದೆ. ಅಧಿಕೃತ ವಕ್ತಾರರು ಮತ್ತು ಪ್ಯಾನೆಲಿಸ್ಟ್‌ಗಳು ಮಾತ್ರ ಟಿವಿ ಚರ್ಚೆಗಳಲ್ಲಿ … Continued

ಪ್ರವಾದಿ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ದೆಹಲಿ, ಮುಂಬೈ, ಯುಪಿ, ಗುಜರಾತ್‌ನಲ್ಲಿ ಆತ್ಮಹತ್ಯಾ ದಾಳಿಯ ಬೆದರಿಕೆ ಹಾಕಿದ ಅಲ್-ಖೈದಾ

ನವದೆಹಲಿ: ಜೂನ್ 6 ರಂದು ಕಳುಹಿಸಿದ ಬೆದರಿಕೆ ಪತ್ರದಲ್ಲಿ, ಭಯೋತ್ಪಾದಕ ಗುಂಪು ಅಲ್-ಖೈದಾ ಪ್ರವಾದಿಯ ಗೌರವಕ್ಕಾಗಿ ಹೋರಾಡಲು ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಆತ್ಮಾಹುತಿ ದಾಳಿಗಳನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ. ಕೆಲವು ಬಿಜೆಪಿ ನಾಯಕರು ಪ್ರವಾದಿ ಮುಹಮ್ಮದ್ ಕುರಿತು ಹೇಳಿಕೆ ನೀಡಿದ ನಂತರ ಭುಗಿಲೆದ್ದ ವಿವಾದದ ಹಿನ್ನೆಲೆಯಲ್ಲಿ ಇದು ಬೆಳಕಿಗೆ ಬಂದಿದೆ. ನಮ್ಮ … Continued

ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ನೇಮಕಕ್ಕೆ ನಿಯಮ ತಿದ್ದುಪಡಿ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಹುದ್ದೆಗೆ ಸಂಬಂಧಿಸಿದ ಮೂರು ಸಶಸ್ತ್ರ ಪಡೆಗಳ ನಿಯಮಾವಳಿಗಳನ್ನು ತಿದ್ದುಪಡಿ ಮಾಡಲು ರಕ್ಷಣಾ ಸಚಿವಾಲಯ ಮಂಗಳವಾರ ಅಧಿಸೂಚನೆಯನ್ನು ಹೊರಡಿಸಿದೆ. ಹೊಸ ಮಾರ್ಗಸೂಚಿಯ ಪ್ರಕಾರ, 62 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಸೇವೆಯಲ್ಲಿರುವ ಅಥವಾ ನಿವೃತ್ತ ತ್ರಿ-ಸ್ಟಾರ್ ಅಧಿಕಾರಿಯನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ. ವೈಸ್ ಅಡ್ಮಿರಲ್ ಮತ್ತು ಏರ್ ಮಾರ್ಷಲ್ ಶ್ರೇಣಿಯ … Continued