ಬೆಂಗಳೂರಿನ ಆಸ್ಪತ್ರೆಯಲ್ಲಿ 7 ವರ್ಷಗಳಿಂದ ದಾಖಲಾಗಿದ್ದ ಮಹಿಳೆ ಸಾವು

ಬೆಂಗಳೂರು: ಅಪರೂಪದ ಪ್ರಕರಣದಲ್ಲಿ, ಸುಮಾರು ಏಳು ವರ್ಷಗಳ ಕಾಲ ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದ 35 ವರ್ಷದ ಮಹಿಳೆ ನಿಧನರಾಗಿದ್ದಾರೆ. ಅಕ್ಟೋಬರ್ 2015 ರಲ್ಲಿ ಹೊಟ್ಟೆ ನೋವಿನಿಂದಾಗಿ ಪೂನಂ ರಾಣಾ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರಳವಾದ ಶಸ್ತ್ರಚಿಕಿತ್ಸೆಯ ಅಗತ್ಯವಿರುವ ಒಂದು ದಿನನಿತ್ಯದ ಪ್ರಕರಣವೆಂದು ಆರಂಭದಲ್ಲಿ ಭಾವಿಸಲಾಗಿತ್ತು, ನಂತರ ಇದು ಹಲವಾರು ತಿರುವುಗಳು ಮತ್ತು ಅಸಂಖ್ಯಾತ ತೊಡಕುಗಳನ್ನು … Continued

ನೀರು ಚಿಮ್ಮಿಸುವ ಮೂಲಕ ಪಕ್ಷಿಗೆ ಕೀಟಲೆ ಮಾಡಿದ ಮರಿಯಾನೆ- ಪ್ರತಿಯಾಗಿ ದಾಳಿ ಮಾಡಿ ಆನೆ ಕುಣಿಯುವಂತೆ ಮಾಡಿದ ಪಕ್ಷಿ | ವೀಕ್ಷಿಸಿ

ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋವೊಂದು ಹರಿದಾಡುತ್ತಿದ್ದು, ಇದು ಕೇವಲ ವೀಕ್ಷಿಸಲು ಮನರಂಜನೆ ನೀಡುವುದಲ್ಲದೆ ಎಲ್ಲರಿಗೂ ಒಳ್ಳೆಯ ಪಾಠವನ್ನೂ ನೀಡುವಂತಿದೆ. ಈ ವೀಡಿಯೋವನ್ನು ಐಪಿಎಸ್ ಅಧಿಕಾರಿ ದೀಪಾಂಶು ಕಬ್ರಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಯಾರನ್ನಾದರೂ ಚಿಕ್ಕವರೆಂದು ಪರಿಗಣಿಸಿ ಕೀಟಲೆ ಮಾಡುವುದು ಮೂರ್ಖತನ. ಏಕೆಂದರೆ ಸಣ್ಣ ಹಕ್ಕಿ ಕೂಡ ಆನೆ ನೃತ್ಯ ಮಾಡುವಂತೆ ಮಾಡುತ್ತದೆ ಎಂದು ಅವರು ಅದಕ್ಕೆ ಶೀರ್ಷಿಕೆ ಬರೆದಿದ್ದಾರೆ. … Continued

ವೇಶ್ಯಾವಾಟಿಕೆ ಕಾನೂನುಬದ್ಧ, ವಯಸ್ಕ- ಒಪ್ಪಿಗೆಯ ಲೈಂಗಿಕ ಕಾರ್ಯಕರ್ತರ ಮೇಲೆ ಪೊಲೀಸರು ಕ್ರಿಮಿನಲ್ ಕ್ರಮ ಕೈಗೊಳ್ಳುವಂತಿಲ್ಲ : ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಮಹತ್ವದ ಆದೇಶವೊಂದರಲ್ಲಿ, ಸುಪ್ರೀಂಕೋರ್ಟ್ ವೇಶ್ಯಾವೃತ್ತಿಯನ್ನು ಕಾನೂನುಬದ್ಧ ಎಂದು ಹೇಳಿದೆ. ಒಪ್ಪಿಗೆ ಮೇರೆಗೆ ಲೈಂಗಿಕ ವೃತ್ತಿ ನಡೆಸುತ್ತಿರುವವರ ಮೇಲೆ ಪೊಲೀಸರು ಅಪರಾಧ ಕ್ರಮ ಕೈಗೊಳ್ಳುವಂತಿಲ್ಲ ಹಾಗೂ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ವೇಶ್ಯಾವಾಟಿಕೆ ಒಂದು ವೃತ್ತಿ ಮತ್ತು ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ. … Continued

ನಾಳೆ ಭಾರತದ ಅತಿದೊಡ್ಡ ಡ್ರೋನ್‌ ಫೆಸ್ಟಿವಲ್‌ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ

ನವದೆಹಲಿ: ಭಾರತದ ಅತಿದೊಡ್ಡ ಡ್ರೋನ್ ಹಬ್ಬವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ, ಮೇ 27ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ರೈತ ಡ್ರೋನ್ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಲಿದ್ದು, ಡ್ರೋನ್‌ ಹಾರಾಟವನ್ನೂ ವೀಕ್ಷಿಸಲಿದ್ದಾರೆ. ಭಾರತ್‌ ಡ್ರೋನ್ ಮಹೋತ್ಸವ -2022 ಮೇ 27 ಮತ್ತು 28 ರಂದು ನಡೆಯಲಿದೆ. ಮೇ 27ರಂದು ನವದೆಹಲಿಯ ಪ್ರಗತಿ … Continued

ಜಮ್ಮು-ಕಾಶ್ಮೀರ : ಎನ್‌ಕೌಂಟರ್‌ನಲ್ಲಿ 3 ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದು, ಮೂವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರನ್ನು ಹತ್ಯೆ ಮಾಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಪ್ವಾರದ ಜುಮಗುಂಡ್ ಗ್ರಾಮದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನದ ಬಗ್ಗೆ ಪೊಲೀಸರು ಪಡೆದ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಸೇನೆ ಮತ್ತು ಪೊಲೀಸರು ಭಯೋತ್ಪಾದಕರನ್ನು ತಡೆದಿದ್ದಾರೆ” ಎಂದು … Continued

ಪಟಿಯಾಲ ಜೈಲಿನಲ್ಲಿ ಗುಮಾಸ್ತನಾಗಿ ನವಜೋತ್ ಸಿಧು ಕೆಲಸ, ದಿನಕ್ಕೆ 90 ರೂ. ಸಂಬಳ

ನವದೆಹಲಿ: 1988ರ ರಸ್ತೆ ಗಲಾಟೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಪಟಿಯಾಲ ಸೆಂಟ್ರಲ್ ಜೈಲಿನಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಾರೆ. ಸಿಧುಗೆ ಮೂರು ತಿಂಗಳ ಕಾಲ ತರಬೇತಿ ನೀಡಲಾಗುತ್ತದೆ ಮತ್ತು ಸುದೀರ್ಘ ನ್ಯಾಯಾಲಯದ ತೀರ್ಪುಗಳನ್ನು ಸಂಕ್ಷಿಪ್ತಗೊಳಿಸುವುದು ಮತ್ತು ಜೈಲು ದಾಖಲೆಗಳನ್ನು ಹೇಗೆ ಸಂಗ್ರಹಿಸುವುದು ಎಂಬುದನ್ನು ಕಲಿಸಲಾಗುತ್ತದೆ. ನವಜೋತ್‌ ಸಿಧು, … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ಅನಿಲ್ ಪರಬ್ ಮನೆ ಸೇರಿ ಏಳು ಸ್ಥಳಗಳ ಮೇಲೆ ಮೇಲೆ ಇಡಿ ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಸಾರಿಗೆ ಸಚಿವ ಮತ್ತು ಶಿವಸೇನೆ ನಾಯಕ ಅನಿಲ್ ಪರಬ್ ಅವರ ಏಳು ಸ್ಥಳಗಳ ಮೇಲೆ ಗುರುವಾರ, ಮೇ 26 ರಂದು ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ಇಡಿ ಅಧಿಕಾರಿಗಳು ಇಂದು, ಗುರುವಾರ ಬೆಳಿಗ್ಗೆ ಮುಂಬೈನಲ್ಲಿರುವ ಅನಿಲ್ ಪರಬ್ ಅವರ ಕುಟುಂಬ ಮತ್ತು ಅಧಿಕೃತ ನಿವಾಸಕ್ಕೆ ಆಗಮಿಸಿದ್ದಾರೆ. … Continued

ರಾಹುಲ್ ಗಾಂಧಿ ಬ್ರಿಟನ್ ಪ್ರವಾಸಕ್ಕೆ ಕ್ಲಿಯರೆನ್ಸ್ ಬೇಕಿತ್ತಾ? ಸರ್ಕಾರ ವರ್ಸಸ್‌ ಕಾಂಗ್ರೆಸ್

ನವದೆಹಲಿ: ರಾಹುಲ್ ಗಾಂಧಿ ಅವರು ಲಂಡನ್‌ಗೆ ಹೋಗುವ ಮೊದಲು ಸರ್ಕಾರದಿಂದ “ರಾಜಕೀಯ ಕ್ಲಿಯರೆನ್ಸ್” ತೆಗೆದುಕೊಂಡಿಲ್ಲ, ಇದನ್ನು ಎಲ್ಲ ಸಂಸದರು ಮಾಡಬೇಕಾಗಿದೆ ಎಂದು ಮೂಲಗಳು ಹೇಳಿವೆ. ಎಲ್ಲಾ ಸಂಸದರು ಯಾವುದೇ ವಿದೇಶಿ ಪ್ರವಾಸಕ್ಕೆ ಮೂರು ವಾರಗಳ ಮೊದಲು ವಿದೇಶಾಂಗ ಸಚಿವಾಲಯಕ್ಕೆ ತಿಳಿಸಬೇಕು ಮತ್ತು ರಾಜಕೀಯ ಅನುಮತಿ ಪಡೆಯಬೇಕು ಎಂದು ಸರ್ಕಾರದ ಮೂಲಗಳು ತಿಳಿಸಿವೆ, ಅವರು ವಿದೇಶಾಂಗ ಸಚಿವಾಲಯದ … Continued

ಭಾರತೀಯ ಸೇನೆಯ ಮೊದಲ ಮಹಿಳಾ ಯುದ್ಧ ವಿಮಾನ ಚಾಲಕಿ ಕ್ಯಾಪ್ಟನ್ ಅಭಿಲಾಶಾ ಬರಾಕ್

ನವದೆಹಲಿ: ಕ್ಯಾಪ್ಟನ್ ಅಭಿಲಾಶಾ ಬರಾಕ್ ಅವರು ಯುದ್ಧ ಸೇನಾ ಏವಿಯೇಷನ್ ಕೋರ್ಸ್ ಮುಗಿಸಿದ ನಂತರ ಆರ್ಮಿ ಏವಿಯೇಷನ್ ಕಾರ್ಪ್ಸ್‌ಗೆ ಯುದ್ಧ ವಿಮಾನ ಚಾಲಕರಾಗಿ ಸೇರಿದ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ. ನಾಸಿಕ್‌ನ ಯುದ್ಧ ಸೇನಾ ವಾಯುಯಾನ ತರಬೇತಿ ಶಾಲೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಆರ್ಮಿ ಏವಿಯೇಷನ್‌ನ ಡೈರೆಕ್ಟರ್-ಜನರಲ್ ಮತ್ತು ಕರ್ನಲ್ ಕಮಾಂಡೆಂಟ್ ಅಭಿಲಾಶಾ ಅವರು 36 ಇತರ … Continued

ಕಿರುತೆರೆ ನಟಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು, 10 ವರ್ಷದ ಸೋದರಳಿಯನಿಗೆ ಗಾಯ

ಕಾಶ್ಮೀರ: ಬುಧವಾರ (ಮೇ 25) ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರ ಗುಂಡಿಗೆ ಕಿರುತೆರೆ ನಟಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಅವರ ಸೋದರಳಿಯ ಕೂಡ ಗಾಯಗೊಂಡಿದ್ದಾನೆ. ಹಿಸ್ರೂ ಚದೂರದಲ್ಲಿರುವ ಅವರ ನಿವಾಸದ ಹೊರಗೆ ಭಯೋತ್ಪಾದಕರು ನಟಿ ಅಮ್ರೀನ್ ಭಟ್ ಮತ್ತು ಅವರ 10 ವರ್ಷದ ಸೋದರಳಿಯನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು … Continued