ಭಾರತದಲ್ಲಿ 8,822 ಹೊಸ ಕೊರೊನಾ ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 33.8% ಹೆಚ್ಚು

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 8,822 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ಹಿಂದಿನ ದಿನಕ್ಕಿಂತ 33.8% ಹೆಚ್ಚಾಗಿದೆ. ಇದು ಒಟ್ಟು ಪ್ರಕರಣವನ್ನು 4,32,45,517 ಕ್ಕೆ ಒಯ್ದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಭಾರತದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆ 50,548ರಿಂದ 53,637 ಕ್ಕೆ ಏರಿದೆ.ಅದೇ ಅವಧಿಯಲ್ಲಿ … Continued

ಕೋವಿಡ್‌ನಿಂದಾಗಿ ಸ್ಮರಣಶಕ್ತಿ ಹೋಗಿ ಯಾವುದೂ ನೆನಪಾಗುತ್ತಿಲ್ಲ : ಇಡಿ ವಿಚಾರಣೆ ವೇಳೆ ಎಎಪಿ ನಾಯಕ ಸತ್ಯೇಂದ್ರ ಜೈನ್ ಉತ್ತರ..!

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿರುದ್ಧ ದೆಹಲಿ ನ್ಯಾಯಾಲಯವು ಮಂಗಳವಾರ (ಜೂನ್ 14, 2022) ತನ್ನ ಆದೇಶವನ್ನು ಕಾಯ್ದಿರಿಸಿದೆ. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಜೈನ್ ಮತ್ತು ಇಡಿ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಂದೂ ಹಾಜರಾಗುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಸತತ ಎರಡನೇ ದಿನವೂ ಎಂಟು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು ಮತ್ತು ವಿರೋಧ ಪಕ್ಷವು ತನ್ನ ಪ್ರತಿಭಟನೆಯನ್ನು ಮುಂದುವರೆಸಿದ ನಂತರವೂ ಬುಧವಾರ ಮತ್ತೆ ಹಾಜರಾಗುವಂತೆ ಸಮನ್ಸ್ ನೀಡಿದೆ. ದಿನಕ್ಕೆ 10 ಗಂಟೆಗಳಿಗೂ ಹೆಚ್ಚು ಕಾಲ … Continued

ರಾಷ್ಟ್ರಪತಿ ಸ್ಪರ್ಧೆಯಿಂದ ಹಿಂದೆ ಸರಿದ ಶರದ್ ಪವಾರ್, ಮಮತಾ ಬ್ಯಾನರ್ಜಿ ಪ್ರಸ್ತಾಪ ತಿರಸ್ಕಾರ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿಯಾದರು. ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ಶರದ್ ಪವಾರ್ ಅವರನ್ನು ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷದ ಅಭ್ಯರ್ಥಿಯಾಗುವಂತೆ ಕೇಳಿಕೊಂಡರು. ಆದಾಗ್ಯೂ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಈ ಪ್ರಸ್ತಾಪವನ್ನು ನಿರಾಕರಿಸಿದರು ಹಾಗೂ … Continued

ಇಡಿ ವಿಚಾರಣೆಯಿಂದ ಹೊರಬರುತ್ತಿದ್ದಂತೆ ಮಹಾ ಜುಮ್ಲಾಗಳ ಸರ್ಕಾರ ಎಂದು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ರಾಹುಲ್‌ ಗಾಂಧಿ

ನವದೆಹಲಿ: ಎರಡನೇ ದಿನದ ಜಾರಿ ನಿರ್ದೇನಾಲಯ(ಇಡಿ)ದ ವಿಚಾರಣೆ ಮುಗಿಸಿ ಹೊರಬರುತ್ತಿದ್ದಂತೆಯೇ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ ಕನಿಷ್ಠ 10 ಲಕ್ಷ ಯುವಜನರಿಗೆ ಉದ್ಯೋಗವನ್ನು ಒದಗಿಸುತ್ತೇವೆ ಎಂಬ ಕೇಂದ್ರ ಸರ್ಕಾರದ ಭರವಸೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, … Continued

ಸಿನೆಮಾ ಶೂಟಿಂಗ್‌ ವೇಳೆ ಖ್ಯಾತ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು

ಹೈದರಾಬಾದ್‌: ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರಿಗೆ ಚಲನಚಿತ್ರದ ಶೂಟಿಂಗ್‌ ಸೆಟ್‌ನಲ್ಲಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೈದರಾಬಾದ್‌ನಲ್ಲಿ ಬಿಗ್ ಬಿ ಮತ್ತು ಪ್ರಭಾಸ್ ನಟನೆಯ `ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. ಈಗವರು ಚೇತರಿಸಿಕೊಂಡಿದ್ದು ಅವರನ್ನು ಡಿಸ್ಚಾರ್ಜ್‌ ಮಾಡಲಾಗಿದೆ  ಹಾಗೂ ಸೆಟ್‌ಗೆ ಮರಳಿದ್ದಾರೆ ಎಂದು ವರದಿಗಳು ತಿಳಿಸಿವೆ. ದೀಪಿಕಾ … Continued

ಪ್ರವಾದಿ ವಿವಾದದ ಮಧ್ಯೆ ಕುವೈತ್‌ಗೆ 192 ಮೆಟ್ರಿಕ್‌ ದೇಸೀ ಹಸುವಿನ ಸಗಣಿ ರಫ್ತು ಮಾಡಲಿರುವ ಭಾರತ…!

ಜೈಪುರ: ಜೈಪುರ ಮೂಲದ ಸಂಸ್ಥೆಯು ಕುವೈತ್‌ಗೆ ಹಸುವಿನ ಸಗಣಿ ರಫ್ತು ಮಾಡಲು ಸಿದ್ಧವಾಗಿದೆ, ಇದು ಉಭಯ ದೇಶಗಳ ನಡುವಿನ ಈ ತರಹದ ಮೊದಲ ಒಪ್ಪಂದವಾಗಿದೆ ಎಂದು ಹೇಳಲಾಗುತ್ತದೆ. ಕುವೈತ್ ಮೂಲದ ಲಾಮರ್ 192 ಮೆಟ್ರಿಕ್ ಟನ್ ದೇಶಿ ಹಸುವಿನ ಸಗಣಿ ಆಮದು ಮಾಡಿಕೊಳ್ಳಲು ಆರ್ಡರ್ ಮಾಡಿದೆ. ಜೈಪುರ ಮೂಲದ ಕಂಪನಿ ಸನ್‌ರೈಸ್ ಅಗ್ರಿಲ್ಯಾಂಡ್ ಮತ್ತು ಡೆವಲಪ್‌ಮೆಂಟ್ … Continued

ಚಲಿಸುತ್ತಿದ್ದ ರಥ ಉರುಳಿ ಬಿದ್ದು ಇಬ್ಬರ ಸಾವು….ದೃಶ್ಯ ಸಿಸಿಟಿವಿಯಲ್ಲಿ ಸೆರೆ

ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಸೋಮವಾರ ಸಂಜೆ ದೇವಸ್ಥಾನದ ರಥವೊಂದು ಕುಸಿದು ಬಿದ್ದ ಪರಿಣಾಮ  ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸೋಮವಾರ ಸಂಜೆ ಪಾಪರಪಟ್ಟಿಯ ಮದೇಹಳ್ಳಿಯ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಕಾಸಿ ಹಬ್ಬದ ಅಂಗವಾಗಿ ಸಂಜೆ 6:30ರ ಸುಮಾರಿಗೆ ಕಾಳಿಯಮ್ಮನ ದೇವಸ್ಥಾನದ 30 ಅಡಿಯ ರಥವನ್ನು ಬೀದಿಗಳಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಾಗ … Continued

ಎಂದೂ ಕೇಳಿಲ್ಲ…: ಶರದ್ ಪವಾರ್ ವಿರುದ್ಧ ಟ್ವೀಟ್ ಮಾಡಿದ ವಿದ್ಯಾರ್ಥಿಯ ಬಂಧನಕ್ಕೆ ಬಾಂಬೆ ಹೈಕೋರ್ಟ್ ತೀವ್ರ ಅಸಮಾಧಾನ

ಮುಂಬೈ: ಎನ್‌ಸಿಪಿ ನಾಯಕ ಶರದ್ ಪವಾರ್ ವಿರುದ್ಧ ಟ್ವೀಟ್ ಮಾಡಿದ 21 ವರ್ಷದ ವಿದ್ಯಾರ್ಥಿ ನಿಖಿಲ್ ಭಾಮ್ರೆಯನ್ನು ಬಂಧಿಸಿದ್ದಕ್ಕಾಗಿ ಬಾಂಬೆ ಹೈಕೋರ್ಟ್ ಸೋಮವಾರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹಿರಿಯ ರಾಜಕಾರಣಿಯನ್ನು ಗುರಿಯಾಗಿಸಿಕೊಂಡು ತನ್ನ ಖಾತೆಯಿಂದ ಟ್ವೀಟ್‌ಗಳನ್ನು ಪೋಸ್ಟ್ ಮಾಡಿದ ನಂತರ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಭಾಮ್ರೆ ಸಲ್ಲಿಸಿದ … Continued

ಸೇನಾ ನೇಮಕಾತಿಯಲ್ಲಿ ಮಹತ್ತರ ಬದಲಾವಣೆ: ನಾಲ್ಕು ವರ್ಷಗಳ ಮಿಲಿಟರಿ ಸೇವಾವಧಿಯ ಅಗ್ನಿಪಥ್ ಯೋಜನೆಗೆ ಕೇಂದ್ರ ಅನುಮೋದನೆ

ನವದೆಹಲಿ: ಭಾರತೀಯ ಯುವಕರು ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅನುಕೂಲವಾಗುವಂತೆ ಹೊಸ ಅಲ್ಪಾವಧಿ ನೇಮಕಾತಿ ನೀತಿಯನ್ನು ಕೇಂದ್ರವು ಮಂಗಳವಾರ ಅನಾವರಣಗೊಳಿಸಿದೆ. ಅಗ್ನಿಪಥ್ ಎಂದು ಕರೆಯಲ್ಪಡುವ ಈ ಯೋಜನೆಯು 17.5 ರಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಮೂರು ಸೇವೆಗಳಲ್ಲಿ ಯಾವುದಾದರೂ “ಅಗ್ನಿವೀರ್” ಆಗಿ ಸೇರಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಅಗ್ನಿಪಥ್ ಯೋಜನೆಯನ್ನು ಈ … Continued