ಕೇರಳದಲ್ಲಿ 80 ಕ್ಕೂ ಹೆಚ್ಚು ಮಕ್ಕಳಿಗೆ ಟೊಮೆಟೊ ಜ್ವರದ ಸೋಂಕು..!

ನವದೆಹಲಿ: ಕೇರಳ ಮಕ್ಕಳಲ್ಲಿ ನಿಗೂಢವಾದ ಟೊಮೆಟೊ ಫ್ಲ್ಯೂ ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ. ಈವರೆಗೂ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ 82 ಪ್ರಕರಣಗಳು ವರದಿಯಾಗಿವೆ. ರಾಜ್ಯದ ದಕ್ಷಿಣ ಭಾಗವಾದ ಆರ್ಯಂಕಾವು, ಅಂಚಲ್ ಮತ್ತು ನೆಡುವತ್ತೂರ್ನಲ್ಲೂ ಪ್ರಕರಣಗಳು ವರದಿಯಾಗಿವೆ. ತಮಿಳುನಾಡು-ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಜ್ವರ, ದದ್ದುಗಳು ಮತ್ತು ಇತರ ಕಾಯಿಲೆಗಳೊಂದಿಗೆ ಕೊಯಮತ್ತೂರ ಪ್ರವೇಶಿಸುವವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅಂತಾರಾಜ್ಯ ಪ್ರಯಾಣದ … Continued

ದೇಶದ್ರೋಹ ಪ್ರಕರಣ: IPC ಸೆಕ್ಷನ್ 124A ತಡೆಹಿಡಿಯುವಂತೆ ಸುಪ್ರೀಂಕೋರ್ಟ್ ಆದೇಶ, ಹೊಸ ಪ್ರಕರಣ ದಾಖಲಿಸದಂತೆ ಕೇಂದ್ರ- ರಾಜ್ಯಗಳಿಗೆ ಸೂಚನೆ

ನವದೆಹಲಿ: ಕೇಂದ್ರ ಸರ್ಕಾರ ಕಾನೂನಿನ ಮರುಪರಿಶೀಲನಾ ಪ್ರಕ್ರಿಯೆ ಪೂರ್ಣವಾಗುವ ವರೆಗೆ ಸೆಕ್ಷನ್ 124ಎ ಬಳಕೆಯನ್ನು ತಡೆಹಿಡಿಯುವಂತೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್‌ ಹಾಗೂ ಹಿಮಾ ಕೊಹ್ಲಿ ಅವರಿದ್ದ ಪೀಠ ನಿರ್ದೇಶಿಸಿತು. ಜೊತೆಗೆ ಮರುಪರಿಶೀಲನಾ ಪ್ರಕ್ರಿಯೆ ಪೂರ್ಣವಾಗುವವರೆಗೆ ಈ ಕಾನೂನಿನಡಿ ಬಾಕಿ ಉಳಿದಿರುವ ಎಲ್ಲಾ ವಿಚಾರಣೆಗಳಿಗೆ ಸುಪ್ರೀಂ ಕೋರ್ಟ್‌ … Continued

ವೈವಾಹಿಕ ಅತ್ಯಾಚಾರ ಅಪರಾಧೀಕರಿಸಲು ಕೋರಿದ ಮನವಿ: ವಿಭಜಿತ ತೀರ್ಪು ನೀಡಿದ ದೆಹಲಿ ಹೈಕೋರ್ಟ್

ನವದೆಹಲಿ: ವೈವಾಹಿಕ ಅತ್ಯಾಚಾರ ಪ್ರಕರಣದ ತೀರ್ಪಿನಲ್ಲಿ ಐಪಿಸಿ ಸೆಕ್ಷನ್‌ 375 ಬಿಯ ಸಿಂಧುತ್ವ ಕುರಿತಂತೆ ದೆಹಲಿ ಹೈಕೋರ್ಟ್‌ ವಿಭಾಗೀಯ ಪೀಠ ಬುಧವಾರ ಭಿನ್ನ ತೀರ್ಪು ನೀಡಿದೆ. ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ರಾಜೀವ್ ಶಕ್ಧರ್ ಮತ್ತು ಸಿ ಹರಿ ಶಂಕರ್ ಅವರು ತಮ್ಮ ತೀರ್ಪಿನಲ್ಲಿ ಭಿನ್ನ ನಿಲುವು ವ್ಯಕ್ತಪಡಿಸಿದರು. ವೈವಾಹಿಕ ಅತ್ಯಾಚಾರ ಸಂವಿಧಾನದ ಉಲ್ಲಂಘನೆ ಎಂದು ನ್ಯಾ. … Continued

ಅಸನಿ ಚಂಡಮಾರುತ: ಆಂಧ್ರ ಪ್ರದೇಶದ ಸಮುದ್ರ ತೀರಕ್ಕೆ ತೇಲಿ ಬಂದ ನಿಗೂಢ ಚಿನ್ನದ ಬಣ್ಣದ ರಥ….! ವೀಕ್ಷಿಸಿ

ಶ್ರೀಕಾಕುಳಂ(ಆಂಧ್ರಪ್ರದೇಶ) ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಸನಿ ಚಂಡಮಾರುತ ಈಗಾಗಲೇ ಆಂಧ್ರಪ್ರದೇಶಕ್ಕೆ ಲಗ್ಗೆ ಹಾಕಿದ್ದು, ತನ್ನ ಆರ್ಭಟ ಶುರು ಮಾಡಿದೆ. ಇದರ ಮಧ್ಯೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಚಿನ್ನದ ಬಣ್ಣ ಹೋಲಿಕೆಯ ರಥವೊಂದು ಸಮುದ್ರದಲ್ಲಿ ತೇಲಿ ಬಂದಿದೆ. ಯಾವುದೇ ಪೌರಾಣಿಕ ಕಥೆಯಂತೆ ತೋರುವಂತಹ ಸನ್ನಿವೇಶದಂತೆ ನಿಗೂಢ ಚಿನ್ನದ ಬಣ್ಣದ ರಥವೊಂದು ಮಂಗಳವಾರ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಸುನ್ನಪಲ್ಲಿ ಸಮುದ್ರ … Continued

ಗೋವಾ ಪ್ರವಾಸದ ವೇಳೆ ಅಮಿತ್ ಶಾಗೆ 850 ರೂ. ಮೌಲ್ಯದ ನೀರಿನ ಬಾಟಲಿ ನೀಡಲಾಗಿತ್ತು: ಗೋವಾ ಸಚಿವ

ಪಣಜಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೋವಾ ಪ್ರವಾಸದ ವೇಳೆ 850 ರೂಪಾಯಿ ಮೌಲ್ಯದ ಮಿನರಲ್ ವಾಟರ್ ಬಾಟಲಿಯನ್ನು ನೀಡಲಾಗಿದ್ದು, ಪಣಜಿಯಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಪಟ್ಟಣದಿಂದ ಅದನ್ನು ತರಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ಹೇಳಿದ್ದಾರೆ. ನಾಯ್ಕ್ ಅವರು ಗೋವಾದಲ್ಲಿ ಮಳೆನೀರು ಕೊಯ್ಲಿಗಾಗಿ ಬಲವಾದ ಪ್ರತಿಪಾದನೆ ಮಾಡುವಾಗ … Continued

87ನೇ ವಯಸ್ಸಿನಲ್ಲಿ 10ನೇ ತರಗತಿ ಪರೀಕ್ಷೆ ತೇರ್ಗಡೆಯಾದ ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲಾ..!

ಚಂಡೀಗಡ: ಕಲಿಕೆಗೆ ವಯಸ್ಸಿನ ಮಿತಿಯಿಲ್ಲ ಎಂಬ ಗಾದೆಯನ್ನು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಅವರು ಸಾಬೀತುಪಡಿಸಿದ್ದಾರೆ. ಅನುಭವಿ ರಾಜಕಾರಣಿ ತನ್ನ 87 ನೇ ವಯಸ್ಸಿನಲ್ಲಿ ತನ್ನ 10ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಉತ್ತೀರ್ಣರಾಗಿದ್ದಾರೆ ಮತ್ತು ಅದು ಕೂಡ ಮೊದಲ ಶ್ರೇಣಿಯಲ್ಲಿ…! ರಾಜ್ಯ ಶಿಕ್ಷಣ ಇಲಾಖೆಯು ಮಂಗಳವಾರ ಬೆಳಗ್ಗೆ ಮಾರ್ಕ್‌ಶೀಟ್ … Continued

ಭಾರತದಲ್ಲಿ ಆಲ್ಕೊಹಾಲ್ ಸೇವನೆ ಮಾಡುವ ಪುರುಷ ಸಂಖ್ಯೆ ಶೇ.7ರಷ್ಟು ಇಳಿಮುಖ : NFHS-5 ವರದಿ

ನವದೆಹಲಿ: 2015ರಿಂದ ಭಾರತದ ಪುರುಷರಲ್ಲಿ ಆಲ್ಕೊಹಾಲ್ ಸೇವನೆ ಪ್ರಮಾಣ ಶೇ.7 ರಷ್ಟು ಕಡಿಮೆಯಾಗಿದೆ ಎಂದು NFHS-5 ವರದಿ ತಿಳಿಸಿದೆ. ಪುರುಷರಲ್ಲಿ ಆಲ್ಕೋಹಾಲ್ ಸೇವನೆಯು ಯಾವಾಗಲೂ ಹೆಚ್ಚಾಗಿರುತ್ತದೆ ಎಂದು ತಿಳಿದಿದ್ದರೂ, 2019-2021 ಗಾಗಿ ಇತ್ತೀಚೆಗೆ ಬಿಡುಗಡೆಯಾದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ(NFHS-5)ಯು ದೇಶದಲ್ಲಿ ಪುರುಷರಲ್ಲಿ ಆಲ್ಕೊಹಾಲ್ ಸೇವನೆಯು 7%ರಷ್ಟು ಕಡಿಮೆಯಾಗಿದೆ ಎಂದು ತೋರಿಸಿದೆ. ದೇಶದಲ್ಲಿ ಶೇ.22ರಷ್ಟು ಪುರುಷರಿಗೆ … Continued

ವಿದೇಶಿ ದೇಣಿಗೆಗಾಗಿ ನಿಯಮಗಳ ಉಲ್ಲಂಘನೆ: ಮೈಸೂರು ಸೇರಿದಂತೆ 40 ಸ್ಥಳಗಳಲ್ಲಿ ಸಿಬಿಐ ದಾಳಿ, 14 ಮಂದಿಯ ಬಂಧನ

ನವದೆಹಲಿ: ಎಫ್‌ಸಿಆರ್‌ಎ ಉಲ್ಲಂಘಿಸಿ ವಿದೇಶಿ ದೇಣಿಗೆಯನ್ನು ತೆರವುಗೊಳಿಸಲು ಅನುಕೂಲ ಮಾಡಿಕೊಟ್ಟ ಆರೋಪದಲ್ಲಿ ಗೃಹ ಸಚಿವಾಲಯದ ಅಧಿಕಾರಿಗಳು, ಎನ್‌ಜಿಒ ಪ್ರತಿನಿಧಿಗಳು ಮತ್ತು ಮಧ್ಯವರ್ತಿಗಳು ಸೇರಿದಂತೆ ದೇಶದಾದ್ಯಂತ 40 ಸ್ಥಳಗಳಲ್ಲಿ ಸಿಬಿಐ ಕಾರ್ಯಾಚರಣೆ ನಡೆಸಿದ್ದು, ಸುಮಾರು 14 ಜನರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಸಿಬಿಐಗೆ ದೂರು ಬಂದ ಹಿನ್ನೆಲೆಯಲ್ಲಿ … Continued

ತಕ್ಷಣದಿಂದಲೇ ಜಾರಿಗೆ ಬರುವಂತೆ ಬೃಹತ್ ಠೇವಣಿಗಳ ಮೇಲಿನ ಬಡ್ಡಿದರ ಹೆಚ್ಚಿಸಿದ ಎಸ್‌ಬಿಐ

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್‌ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಬೃಹತ್ ಅವಧಿಯ ಠೇವಣಿಗಳ ( 2 ಕೋಟಿ ರೂ.ಗಳು ಮತ್ತು ಅದಕ್ಕಿಂತ ಹೆಚ್ಚಿನ) ಬಡ್ಡಿ ದರವನ್ನು ಮೇ 10 ರಿಂದ ಜಾರಿಗೆ ಬರುವಂತೆ 40-90 ಬೇಸಿಸ್ ಪಾಯಿಂಟ್‌ಗಳಿಂದ ಹೆಚ್ಚಿಸಿದೆ. ಬಜಾಜ್ ಫೈನಾನ್ಸ್, ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಯು ಸ್ಥಿರ ಠೇವಣಿ … Continued

ಗಂಡನ ಮನೆಯಲ್ಲಿ ಶೌಚಾಲಯ ಇಲ್ಲವೆಂದು ಮನನೊಂದು ಪತ್ನಿ ಆತ್ಮಹತ್ಯೆ

ಚೆನ್ನೈ: ತನ್ನ ಗಂಡನ ಮನೆಯಲ್ಲಿ ಶೌಚಾಲಯ ಇಲ್ಲದಿರುವುದಕ್ಕೆ ಮನನೊಂದ 27 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಡಲೂರು ಜಿಲ್ಲೆಯ ಅರಿಸಿಪೆರಿಯಂಕುಪ್ಪಂ ಗ್ರಾಮದ ರಮ್ಯಾ ಎಂಬವರು ಆತ್ಮಹತ್ಯೆ ಶರಣಾದ ಮಹಿಳೆ ಎಂದು ಹೇಳಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರಮ್ಯಾ ಏಪ್ರಿಲ್ 6 ರಂದು ಕಾರ್ತಿಕೇಯನ್ ಎಂಬವರನ್ನು ವಿವಾಹವಾಗಿದ್ದರು. … Continued