ಇರಿತದ ಗಾಯಗಳೊಂದಿಗೆ ಒಂದೇ ಕುಟುಂಬದ 4 ಮಂದಿ ಶವವಾಗಿ ಪತ್ತೆ

ಅಹಮದಾಬಾದ್: ಗುಜರಾತಿನ ಅಹಮದಾಬಾದ್‌ನ ವಿರಾಟ್‌ನಗರದ ಮನೆಯೊಂದರಲ್ಲಿ ಮಂಗಳವಾರ ಸಂಜೆ ಒಂದೇ ಕುಟುಂಬದ ನಾಲ್ವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಮಹಿಳೆ ಸೋನಾಲ್ ಮರಾಠಿ (37), ಅವರ ಮಕ್ಕಳಾದ ಪ್ರಗತಿ (15) ಮತ್ತು ಗಣೇಶ್ (17) ಮತ್ತು ಸೋನಾಲ್ ಅವರ ಅತ್ತೆ ಸುಭದ್ರಾ (75) ಎಂದು ಗುರುತಿಸಲಾಗಿದೆ. ಇರಿತ ಮತ್ತು ಗಾಯಗಳನ್ನು ಹೊಂದಿರುವ ದೇಹಗಳು ಕೊಳೆತ ಸ್ಥಿತಿಯಲ್ಲಿ … Continued

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ..: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್ ಅನುಮೋದನೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಈ ಹಿಂದೆ ಇದ್ದ ಶೇ.31ರಿಂದ ಶೇ.34ಕ್ಕೆ ಶೇ.3ರಷ್ಟು ಹೆಚ್ಚಿಸುವ ಪ್ರಸ್ತಾವನೆಯನ್ನು ಜನವರಿ 1, 2022ರಿಂದ ಜಾರಿಗೆ ತರಲು ಸಂಪುಟ ಅನುಮೋದನೆ ನೀಡಿದೆ. 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಅಂಗೀಕೃತ ಸೂತ್ರದ ಪ್ರಕಾರ ಡಿಎ ಹೆಚ್ಚಳವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ … Continued

ಶ್ರೀನಗರದ ಸೋಪೋರ್‌ನಲ್ಲಿನ ಸಿಆರ್‌ಪಿಎಫ್ ಶಿಬಿರದ ಮೇಲೆ ಬಾಂಬ್ ಎಸೆದ ಬುರ್ಖಾ ಧರಿಸಿದ ಮಹಿಳೆ.. ಕೃತ್ಯ ಸಿಸಿಟಿಯಲ್ಲಿ ಸೆರೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಭದ್ರತಾ ಶಿಬಿರದ ಮೇಲೆ ನಿನ್ನೆ ಬುರ್ಖಾಧಾರಿ ಮಹಿಳೆಯೊಬ್ಬರು ಬಾಂಬ್ ಎಸೆಯುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವೀಡಿಯೊದಲ್ಲಿ, ಮಹಿಳೆ ರಸ್ತೆಯ ಮಧ್ಯದಲ್ಲಿ ನಿಂತು ತನ್ನ ಬ್ಯಾಗ್‌ನಿಂದ ಬಾಂಬ್ ಅನ್ನು ಹೊರತೆಗೆದು ಸಿಆರ್‌ಪಿಎಫ್ ಬಂಕರ್‌ಗೆ ತರಾತುರಿಯಲ್ಲಿ ಎಸೆದಿದ್ದಾಳೆ. ರಸ್ತೆಯಲ್ಲಿ ಒಂದೆರಡು ಪಾದಚಾರಿಗಳು … Continued

ಭಾರತದಲ್ಲಿ ಇದೇ ಮೊದಲ ಬಾರಿಗೆ ಹೈಡ್ರೋಜನ್ ಚಾಲಿತ ಕಾರಿನಲ್ಲಿ ಸಂಸತ್ತಿಗೆ ಬಂದ ನಿತಿನ್ ಗಡ್ಕರಿ..!

ನವದೆಹಲಿ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಹಸಿರು ಹೈಡ್ರೋಜನ್ ಚಾಲಿತ (green hydrogen-powered) ಕಾರಿನಲ್ಲಿ ಸಂಸತ್ತಿಗೆ ಆಗಮಿಸಿದರು. ಈ ಕಾರಿನಲ್ಲಿ ಸಚಿವರು ತಮ್ಮ ನಿವಾಸದಿಂದ ಸಂಸತ್ತಿಗೆ ಪ್ರಯಾಣಿಸಿದರು. ಇದು ಭಾರತದಲ್ಲಿ ಮೊದಲನೆಯದು ಮತ್ತು ಗಡ್ಕರಿ ಇದು ಭಾರತದ ಭವಿಷ್ಯ ಎಂದು ಶ್ಲಾಘಿಸಿದ್ದಾರೆ. ಹೈಡ್ರೋಜನ್ ಕಾರ್ ಭವಿಷ್ಯ ಎಂದು ನಿತಿನ್ ಗಡ್ಕರಿ ಹೇಳಿದರು, … Continued

ಆಶಿಶ್ ಮಿಶ್ರಾಗೆ ಜಾಮೀನು ರದ್ದು ಕೋರಿ ಸಲ್ಲಿಸಿರುವ ಎಸ್‌ಐಟಿ ವರದಿಗಳಿಗೆ ಉತ್ತರಿಸುವಂತೆ ಉತ್ತರ ಪ್ರದೇಶಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನವದೆಹಲಿ: ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದ ಎಸ್‌ಐಟಿ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ನಿವೃತ್ತ ನ್ಯಾಯಾಧೀಶರ ಎರಡು ವರದಿಗಳಿಗೆ ಏಪ್ರಿಲ್ 4 ರೊಳಗೆ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ, ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾ ಜಾಮೀನು ರದ್ದುಗೊಳಿಸುವಂತೆ … Continued

100ಕ್ಕೂ ಹೆಚ್ಚು ಬೀದಿನಾಯಿಗಳಿಗೆ ವಿಷಪ್ರಾಶನ ಮಾಡಿ ಹತ್ಯೆ: ದೂರು ದಾಖಲು

ತೆಲಂಗಾಣದ ಸಿದ್ದಿಪೇಟ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿನಾಯಿಗಳನ್ನು ಕೊಲ್ಲಲಾಗಿದೆ ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತ ಅದುಲಾಪುರಂ ಗೌತಮ್ ಹೇಳಿದ್ದಾರೆ. ಗ್ರಾಮದ ಸರಪಂಚ ಮತ್ತು ಗ್ರಾಮ ಪಂಚಾಯತ ಕಾರ್ಯದರ್ಶಿ ನಾಯಿಗಳನ್ನು ಕೊಂದಿದ್ದಾರೆ ಎಂದು ಆರೋಪಿಸಿ ಗೌತಮ್ ದೂರು ದಾಖಲಿಸಿದ್ದಾರೆ. ಗೌತಂ ಅವರು ಸ್ಟ್ರೇ ಅನಿಮಲ್ ಫೌಂಡೇಶನ್ ಆಫ್ ಇಂಡಿಯಾದ ಪ್ರಾಣಿ ಹಕ್ಕುಗಳ ಕಾರ್ಯಕರ್ತರಾಗಿದ್ದಾರೆ. ದೂರಿನ ಮೇರೆಗೆ ಪ್ರಕರಣ … Continued

ಇಂದೂ ಪೆಟ್ರೋಲ್‌-ಡೀಸೆಲ್‌ ಬೆಲೆಯಲ್ಲಿ ಹೆಚ್ಚಳ, 9 ದಿನದಲ್ಲಿ 5.60 ರೂ.ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬುಧವಾರ (ಮಾರ್ಚ್ 30)ವೂ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದ್ದು, ಕಳೆದ 9 ದಿನಗಳಲ್ಲಿ ಲೀಟರ್‌ಗೆ 5.60 ರೂ.ಗಳಷ್ಟು ಹೆಚ್ಚಾಗಿದೆ. . ಮಾರ್ಚ್ 22 ರಂದು ದರ ಪರಿಷ್ಕರಣೆಯಲ್ಲಿ ನಾಲ್ಕೂವರೆ ತಿಂಗಳ ಸುದೀರ್ಘ ವಿರಾಮಕ್ಕೆ … Continued

ಆಘಾತಕಾರಿ…ನಡು ರಸ್ತೆಯಲ್ಲೇ ಸ್ಕೂಟಿಯಲ್ಲಿದ್ದ ವಿಕಲಚೇತನನಿಗೆ ದೊಣ್ಣೆಯಿಂದ ಥಳಿಸಿದ ದಂಪತಿ…ದೃಶ್ಯ ವೀಡಿಯೊದಲ್ಲಿ ಸೆರೆ

ನವದೆಹಲಿ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಝೆವಾರ್ ಪ್ರದೇಶದಲ್ಲಿ ವಿಕಲಚೇತನ ವ್ಯಕ್ತಿಯನ್ನು ಪುರುಷ ಮತ್ತು ಮಹಿಳೆ ಅಮಾನುಷವಾಗಿ ಥಳಿಸಿದ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮಾರ್ಚ್ 27 ರಂದು ಈ ಘಟನೆ ನಡೆದಿದ್ದು, ದುಷ್ಕರ್ಮಿಗಳಾದ ಜುಗೇಂದ್ರ ಮತ್ತು … Continued

ಮನೆಯಲ್ಲಿದ್ದ ಪ್ರಧಾನಿ ಮೋದಿ ಫೋಟೋ ತೆಗೆಯದಿದ್ದರೆ ಹೊರಹಾಕುವ ಬೆದರಿಕೆ : ಜಮೀನುದಾರನ ವಿರುದ್ಧ ಪೊಲೀಸರ ಮೊರೆ ಹೋದ ವ್ಯಕ್ತಿ..!

ಮಧ್ಯಪ್ರದೇಶದ ಇಂದೋರ್‌ನ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ತೆಗೆಯದಿದ್ದರೆ ಮನೆಯಿಂದ ಹೊರಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕ ವಿಚಾರಣೆ ಅಹವಾಲು ವೇದಿಕೆಯನ್ನು ಸಂಪರ್ಕಿಸಿದ್ದಾರೆ. ಇಂದೋರ್‌ನ ಪಿರ್ ಗಲಿ ನಿವಾಸಿ ಯೂಸುಫ್ ಅವರು ಮಂಗಳವಾರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಆಘಾತಕಾರಿ ದೂರು ನೀಡಿದ್ದಾರೆ. ಪ್ರಧಾನಿ ಮೋದಿಯವರ ಸಿದ್ಧಾಂತದಿಂದ ಪ್ರೇರಿತರಾದ ಯೂಸುಫ್ ಅವರು … Continued

ಹೈದರಾಬಾದ್ ಶಾಕರ್..: ಬ್ಯಾಂಕ್​ ಸಿಬ್ಬಂದಿ ನಿರ್ಲಕ್ಷ್ಯದಿಂದ 18 ತಾಸು ಕಾಲ ಬ್ಯಾಂಕ್‌ ಲಾಕರ್​​ ಕೋಣೆಯಲ್ಲಿ ಕಳೆದ ಮಧುಮೇಹ ಕಾಯಿಲೆಯ 89ರ ವೃದ್ಧ..!

ಹೈದರಾಬಾದ್‌: ಬ್ಯಾಂಕ್ ಸಿಬ್ಬಂದಿಯ ನಿರ್ಲಕ್ಷ್ಯದಿಂದ 89 ವರ್ಷದ ವ್ಯಕ್ತಿಯೊಬ್ಬರು ಹೈದರಾಬಾದ್‌ನಲ್ಲಿ ಬ್ಯಾಂಕ್‌ನ ಲಾಕರ್ ಕೋಣೆಯಲ್ಲಿ ರಾತ್ರಿ ಕಳೆಯಬೇಕಾಯಿತು. ಸೋಮವಾರ, ಮಾರ್ಚ್ 28 ರಂದು ಸಿಬ್ಬಂದಿ ಆವರಣಕ್ಕೆ ಬೀಗ ಹಾಕಿ ಹೊರಟುಹೋದ ನಂತರ ವ್ಯಕ್ತಿ 18 ಗಂಟೆಗಳ ಕಾಲ ಬ್ಯಾಂಕ್‌ನಲ್ಲಿ ಕಳೆಯಬೇಕಾಯಿತು. ಈ ಆಘಾತಕಾರಿ ಘಟನೆಯು ಐಷಾರಾಮಿ ಜುಬಿಲಿ ಹಿಲ್ಸ್ ಪ್ರದೇಶದಲ್ಲಿನ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ … Continued