ರೈತರ ಪ್ರತಿಭಟನೆಗೆ ಮಣಿದ ಕೇಂದ್ರ: ಅಕ್ಟೋಬರ್‌ 3ರಿಂದಲೇ ಭತ್ತ ಖರೀದಿಗೆ ಗ್ರೀನ್ ಸಿಗ್ನಲ್..

ನವದೆಹಲಿ : ಪಂಜಾಬ್​, ಹರಿಯಾಣ ರೈತರ ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ ನಾಳೆಯಿಂದಲೇ ಭತ್ತ (Paddy) ಖರೀದಿಗೆ ಗ್ರೀನ್​ ಸಿಗ್ನಲ್ ನೀಡಿದೆ. ಭತ್ತ ಹಾಗೂ ರಾಗಿ ಖರೀದಿಗೆ ಅಕ್ಟೋಬರ್​ 11ರಿಂದ ಚಾಲನೆ ನೀಡಲಾಗುತ್ತದೆ ಎಂದು ಈ ಹಿಂದೆ ಕೇಂದ್ರ ಸರ್ಕಾರ ತಿಳಿಸಿತ್ತು. ಹೀಗಾಗಿ, ಪಂಜಾಬ್​ ಹಾಗೂ ಹರಿಯಾಣದಲ್ಲಿ ಕಳೆದ ಕೆಲ ದಿನಗಳಿಂದ ರೈತರು ಪ್ರತಿಭಟನೆಗೆ … Continued

ಆಗಸ್ಟ್‌ ತಿಂಗಳಲ್ಲೇ ಭಾರತದ 20 ಲಕ್ಷ ವಾಟ್ಸಪ್ ಖಾತೆಗಳು ನಿಷೇಧಿಸಿದ ವಾಟ್ಸಾಪ್‌..!

ನವದೆಹಲಿ: ‌ಹೊಸ ಐಟಿ ನಿಯಮ ಜಾರಿಯಾದ ಬೆನ್ನಲ್ಲೇ ಭಾರತೀಯರ 20 ಲಕ್ಷ ಫೋನ್ ನಂಬರ್ ಗಳನ್ನು ವಾಟ್ಸಾಪ್‌ ನಿಷೇಧಿಸಿದೆ. ಸುಳ್ಳು ಸುದ್ದಿ, ನಕಲಿ ವಿಡಿಯೋ ಗಳನ್ನು ಹರಿಬಿಟ್ಟಿ ಹಿನ್ನೆಲೆಯಲ್ಲಿ ಈ ಕ್ರಮಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಮೇ 26 ರಂದು ಹೊಸ ಐಟಿ ನಿಯಮಗಳು ಜಾರಿಗೊಳಿಸಲಾಗಿದೆ. ಆ ಬಳಿಕ ದೇಶದಲ್ಲಿರುವ 50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು … Continued

ಸಂಬಂಧ ಸಾಬೀತಿಗೆ ಇತರೆ ಸಾಕ್ಷ್ಯಗಳಿದ್ದರೆ ನ್ಯಾಯಾಲಯಗಳು ಡಿಎನ್ಎ ಪರೀಕ್ಷೆಗೆ ಆದೇಶಿಸುವಂತಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ನ್ಯಾಯಾಲಯಗಳು ಯಾವುದೇ ವ್ಯಕ್ತಿಯನ್ನು ಡಿಎನ್‌ಎ ಪರೀಕ್ಷೆಗೆ ಯಾಂತ್ರಿಕವಾಗಿ ಆದೇಶಿಸಬಾರದು. ಮಹತ್ವವಿರುವ ಅರ್ಹ ಪ್ರಕರಣಗಳಲ್ಲಿ ಮಾತ್ರವೇ ಡಿಎನ್‌ಎ ಪರೀಕ್ಷೆಗೆ ಅದೇಶಿಸಬೇಕು ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ತೀರ್ಪು ನೀಡಿದೆ. ಉಭಯ ಪಕ್ಷಕಾರರ ಹಿತಾಸಕ್ತಿಯಲ್ಲಿ ಸಮತೋಲನ ಸಾಧಿಸಿದ ನಂತರವಷ್ಟೇ ನ್ಯಾಯಾಲಯಗಳು ಈ ನಿಟ್ಟಿನಲ್ಲಿ ತಮ್ಮ ವಿವೇಚನೆಯನ್ನು ಬಳಸಬೇಕು ಹಾಗೂ ನ್ಯಾಯಯುತ ನಿರ್ಧಾರಕ್ಕಾಗಿ ಡಿಎನ್‌ಎ ಪರೀಕ್ಷೆಯ ಅಗತ್ಯವಿದೆಯೇ ಎಂದು … Continued

ಉಪಚುನಾವಣೆಗೆ ಮೊದಲು ಲೋಕ ಜನಶಕ್ತಿ ಪಕ್ಷದ ಚಿಹ್ನೆ ಸ್ಥಗಿತಗೊಳಿಸಿದ ಚುನಾವಣಾ ಆಯೋಗ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಲೋಕಜನ ಶಕ್ತಿ ಪಕ್ಷದ ಸಂಸ್ಥಾಪಕ ರಾಮವಿಲಾಸ ಪಾಸ್ವಾನ್‌ ಪುತ್ರ ಚಿರಾಗ್ ಪಾಸ್ವಾನ್ ಹಾಗೂ ಅವರ ಚಿಕ್ಕಪ್ಪ, ಕೇಂದ್ರ ಸಚಿವ ಪಶುಪತಿ ಪರಾಸ್ ನಡುವಿನ ರಾಜಕೀಯ ದ್ವೇಷದಿಂದಾಗಿ ಈ ತಿಂಗಳ ಕೊನೆಯಲ್ಲಿ ಬಿಹಾರದ ಎರಡು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಮೊದಲು ಚುನಾವಣಾ ಆಯೋಗವು ಲೋಕ ಜನಶಕ್ತಿ ಪಕ್ಷದ ಹೆಸರು ಮತ್ತು … Continued

ಗೋಡ್ಸೆ ಜಿಂದಾಬಾದ್ ಎಂದು ಟ್ವೀಟ್ ಮಾಡುವವರಿಂದ ಭಾರತಕ್ಕೆ ಅವಮಾನ : ಬಿಜೆಪಿ ಸಂಸದ ವರುಣ್ ಗಾಂಧಿ

ನವದೆಹಲಿ: ರಾಷ್ಟ್ರಪಿತನ ಜನ್ಮ ದಿನಾಚರಣೆಯಂದು ಸಾಮಾಜಿಕ ಮಾಧ್ಯಮದಲ್ಲಿ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ವೈಭವೀಕರಿಸಿದವರ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಥವರು ಬೇಜವಾಬ್ದಾರಿಯಿಂದ ಇಡೀ ದೇಶ ನಾಚಿಕೆಪಡುವಂತೆ ಮಾಡುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತವು ಯಾವಾಗಲೂ ಆಧ್ಯಾತ್ಮಿಕ ಮಹಾಶಕ್ತಿಯಾಗಿದೆ. ಆದರೆ ಮಹಾತ್ಮ ಗಾಂಧಿ ತಮ್ಮ ಅಸ್ತಿತ್ವದ ಮೂಲಕ … Continued

ಮದುವೆಯಾದ 4 ವರ್ಷಗಳ ವಿಚ್ಛೇದನ ಘೋಷಿಸಿದ ಟಾಲಿವುಡ್ ಸ್ಟಾರ್​ ಜೋಡಿ ಸಮಂತಾ-ನಾಗ ಚೈತನ್ಯ ಅಕ್ಕಿನೇನಿ…!

ಸಾಕಷ್ಟು ಊಹಾಪೋಹಗಳ ನಂತರ ಟಾಲಿವುಡ್​ನ ಸ್ಟಾರ್​ ದಂಪತಿ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇವರಿಬ್ಬರು ವಿಚ್ಛೇದನ ಪಡೆದು ಬೇರೆಯಾಗಲು ನಿರ್ಧರಿಸಿದ್ದಾರೆ. ನಟಿ ಸಮಂತಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ಇವರಿಬ್ಬರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಎಂಬವದಂತಿಗಳು ಹಲವು ದಿನಗಳಿಂದಲೂ ಕೇಳಿಬರುತ್ತಲೇ ಇತ್ತು. ಆದರೆ … Continued

ಗಾಂಧಿ ಜಯಂತಿಯಂದು ಜಲ ಜೀವನ ಮಿಷನ್ ಆಪ್ ಬಿಡುಗಡೆ, ಈ ಮಿಷನ್ ಜಾರಿಯಿಂದ 5 ಕೋಟಿ ಮನೆಗಳಿಗೆ ನೀರು-ಮೋದಿ

ನವದೆಹಲಿ: ಮಹಾತ್ಮ ಗಾಂಧಿಯವರ 152 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಜಲ ಜೀವನ ಮಿಷನ್ ಆಪ್ ಬಿಡುಗಡೆ ಮಾಡಿದರು. ಹಾಗೂ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳೊಂದಿಗೆ (ವಿಡಬ್ಲ್ಯೂಎಸ್ಸಿ) ಸಂವಾದ ನಡೆಸಿದರು. ಜನರಲ್ಲಿ ಅರಿವು ಹೆಚ್ಚಿಸಲು ಮತ್ತು ಹೆಚ್ಚಿನ ಪಾರದರ್ಶಕತೆ ಮತ್ತು ಮಿಷನ್ … Continued

ರೈಲ್ವೆ ಹಳಿಗಳ ಮೇಲೆ ಪ್ರತಿಭಟನೆ ನಡೆಸಿದ ರೈತರ ವಿರುದ್ಧದ ಪ್ರಕರಣ ಹಿಂಪಡೆಯಲು ಪಂಜಾಬ್ ಸಿಎಂ ಆದೇಶ

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ರೈಲ್ವೇ ಹಳಿಗಳ ಮೇಲೆ ಧರಣಿ ಕುಳಿತಿದ್ದ ರೈತರ ಸಂಘಟನೆಗಳ ಸದಸ್ಯರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಸೂಚಿಸಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್‌ಗೆ) ಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಚನ್ನಿ ಆರ್‌ಪಿಎಫ್ ಅಧ್ಯಕ್ಷರಿಗೆ ಆದೇಶವನ್ನು ತಕ್ಷಣ ಪಾಲಿಸುವಂತೆ ಮತ್ತು ಪ್ರತಿಭಟನಾ ನಿರತ ರೈತರ ಮೇಲಿನ ಪೊಲೀಸ್ ಪ್ರಕರಣಗಳನ್ನು … Continued

ವಿಚಿತ್ರ ವದಂತಿಯಿಂದ ಬಿಹಾರದಲ್ಲಿ ದಿಢೀರ್‌ ಭಾರೀ ಹೆಚ್ಚಳ ಕಂಡ ಪಾರ್ಲೆ-ಜಿ ಬಿಸ್ಕತ್ ಮಾರಾಟ:ಅಂಗಡಿಗಳ ಮುಂದೆ ಕ್ಯೂ, ಕಾಳಸಂತೆಯಲ್ಲೂ ಮಾರಾಟ..!

ಪಾಟ್ನಾ: ಬಿಹಾರದಲ್ಲಿ ವದಂತಿಗಳು ಯಾವಾಗಲೂ ಕಾಳ್ಗಿಚ್ಚಿನಂತೆ ಹರಡುತ್ತವೆ. ಇತ್ತೀಚಿನ ವದಂತಿಯು ಜ್ಯೂತಿಯಾ ಹಬ್ಬಕ್ಕೆ (Jeutiya festival) ಸಂಬಂಧಿಸಿದೆ. ಇದರಲ್ಲಿ ಮಕ್ಕಳು (ಪುರುಷರು) ಜ್ಯೂತಿಯಾದ ಪಾರ್ಲೆ-ಜಿ ಬಿಸ್ಕತ್ತುಗಳನ್ನು ತಿನ್ನದಿದ್ದರೆ, ಭವಿಷ್ಯದಲ್ಲಿ ಅವರು ಅಹಿತಕರ ಘಟನೆಗಳನ್ನು ಎದುರಿಸಬೇಕಾಗಬಹುದು ಎಂಬ ವದಂತಿ ಹರಡಿದೆ. ಬಾಯಿಂದ ಬಾಯಿಗೆ ಹಬ್ಬಿದ ಈ ವದಂತಿ ಬಿಹಾರದಲ್ಲಿ ‘ಪಾರ್ಲೆ-ಜಿ ಬಿಸ್ಕೆಟ್‌ ಎಷ್ಟು ಹೆಚ್ಚಿಸಿದೆಯೆಂದರೆ ಈಗ ಈ … Continued

ಲಸಿಕೆ ಪ್ರಮಾಣೀಕರಣದಲ್ಲಿ ಭಾರತದೊಂದಿಗೆ ತೊಡಗಿಸಿಕೊಳ್ಳುತ್ತೇವೆ: ಭಾರತದ ತಿರುಗೇಟಿನ ಕ್ರಮಕ್ಕೆ ಬ್ರಿಟನ್‌ ಪ್ರತಿಕ್ರಿಯೆ

ನವದೆಹಲಿ: ಬ್ರಿಟನ್ನಿನ “ತಾರತಮ್ಯ” ಅಂತಾರಾಷ್ಟ್ರೀಯ ಪ್ರಯಾಣ ನಿಯಮಗಳಿಗೆ ಪ್ರತಿಕ್ರಿಯೆಯಾಗಿ ಭಾರತವು ಕ್ರಮಗಳನ್ನು ಹೇರಿದ ನಂತರ, ಬ್ರಿಟಿಷ್ ಹೈ ಕಮಿಷನ್ ಕೋವಿಡ್ -19 ಲಸಿಕೆ ಪ್ರಮಾಣೀಕರಣದ ಮಾನ್ಯತೆಯನ್ನು ವಿಸ್ತರಿಸಲು ದೇಶವು ನವದೆಹಲಿಯೊಂದಿಗೆ “ತೊಡಗಿಸಿಕೊಳ್ಳುವುದನ್ನು ಮುಂದುವರಿಸುತ್ತಿದ್ದೇವೆ ಎಂದು ತಿಳಿಸಿದೆ. ಭಾರತದಲ್ಲಿ ಸಂಬಂಧಿತ ಸಾರ್ವಜನಿಕ ಆರೋಗ್ಯ ಸಂಸ್ಥೆಯಿಂದ ಲಸಿಕೆ ಪಡೆದ ಜನರಿಗೆ ಲಸಿಕೆ ಪ್ರಮಾಣೀಕರಣದ ಬ್ರಿಟನ್ನಿನ ಮಾನ್ಯತೆ ವಿಸ್ತರಿಸಲು ನಾವು … Continued