ಯು ಪಿ ಎಸ್ ಸಿ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವ ದೇಶಕ್ಕೆ ಟಾಪರ್, ಟಾಪ್‌-20 ರ‍್ಯಾಂಕ್ ಪಡೆದವರ ಪಟ್ಟಿ

ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಕೇಂದ್ರ ಲೋಕಸೇವಾ ಆಯೋಗ (UPSC ) ನಡೆಸಿದ್ದ 2023ನೇ ಸಾಲಿನ ಅಂತಿಮ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಐಐಟಿ ಕಾನ್ಪುರ ಇಂಜಿನಿಯರ್ ಆದಿತ್ಯ ಶ್ರೀವಾಸ್ತವ ಅವರು ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಅನಿವೇಶ್ ಪ್ರಧಾನ ದ್ವಿತೀಯ ಹಾಗೂ ಡೋಣೂರು ಅನನ್ಯಾ ರೆಡ್ಡಿ ತೃತೀಯ ಸ್ಥಾನಗಳಿಸಿದ್ದಾರೆ. ಅಂತಿಮ ಫಲಿತಾಂಶವನ್ನು … Continued

ನೀವು ಅಮಾಯಕರಲ್ಲ : ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ಸುಪ್ರೀಂ ಕೋರ್ಟ್‌ ಮತ್ತೆ ತರಾಟೆ

ನವದೆಹಲಿ: ಆಧುನಿಕ ವೈದ್ಯ ಪದ್ಧತಿಯನ್ನು ಅವಹೇಳನ ಮಾಡಿ ದಾರಿ ತಪ್ಪಿಸುವಂತಹ ಜಾಹೀರಾತು ಪ್ರಸಾರ ಮಾಡಿದ್ದಕ್ಕಾಗಿ ಪತಂಜಲಿ ಆಯುರ್ವೇದ ಪ್ರವರ್ತಕರಾದ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ಯಾಚಿಸಿರುವ ಕ್ಷಮೆಯ ನೈಜತೆ ಗ್ಗೆ ತಿಳಿಯಲು ಸುಪ್ರೀಂ ಕೋರ್ಟ್‌ ಮಂಗಳವಾರ ಈ ಇಬ್ಬರೊಂದಿಗೆ ವೈಯಕ್ತಿಕ ಸಂವಹನ ನಡೆಸಿತು. ಈ ಹಂತದಲ್ಲಿ ಅವರಿಬ್ಬರೂ ಕ್ಷಮೆ ಯಾಚಿಸಿದರಾದರೂ ನ್ಯಾಯಮೂರ್ತಿಗಳಾದ ಹಿಮಾ … Continued

ಚುನಾವಣಾ ಬಾಂಡ್, ಉತ್ತರ ಭಾರತ-ದಕ್ಷಿಣ ಭಾರತ ಚರ್ಚೆ, ಸಿಬಿಐ – ಇ.ಡಿ. ದುರ್ಬಳಕೆ ಆರೋಪ, ಬಿಜೆಪಿ ಮಾಡೆಲ್-ಕಾಂಗ್ರೆಸ್‌ ಮಾಡೆಲ್‌ ಬಗ್ಗೆ ಮೋದಿ ಹೇಳಿದ್ದೇನು..?

2047ರ ವೇಳೆಗೆ ವಿಕಸಿತ ಭಾರತದ ಬಗೆಗಿನ ತಮ್ಮ ವಿಶಾಲವಾದ ದೃಷ್ಟಿಕೋನದಿಂದ ಹಿಡಿದು ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ತಮ್ಮ ಮಧ್ಯಸ್ಥಿಕೆಯವರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ನೀಡಿದ ಸಂದರ್ಶನದಲ್ಲಿ ಎಲ್ಲಾ ಪ್ರಮುಖ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ದಶಕದಲ್ಲಿ ರಾಷ್ಟ್ರದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣ ನಿಭಾಯಿಸುವಲ್ಲಿ ಜಾರಿ … Continued

ಧರ್ಮದ ಹೆಸರಿನಲ್ಲಿ ಮತ ಯಾಚನೆ: ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಏಪ್ರಿಲ್ 9 ರಂದು ಉತ್ತರ ಪ್ರದೇಶದ ಪಿಲಿಭಿಟ್‌ನಲ್ಲಿ ಭಾರತೀಯ ಜನತಾ ಪಕ್ಷದ … Continued

ಲೋಕಸಭೆ ಚುನಾವಣೆ 2024 : ‘ನ್ಯಾಯ’ ವಿಷಯದ ಹೊಸ ಪ್ರಚಾರ ಗೀತೆ ಬಿಡುಗಡೆ ಮಾಡಿದ ಕಾಂಗ್ರೆಸ್‌ | ವೀಡಿಯೊ ವೀಕ್ಷಿಸಿ

ನವದೆಹಲಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ತನ್ನ ಪ್ರಚಾರ ಕಾರ್ಯತಂತ್ರವನ್ನು ಅನಾವರಣಗೊಳಿಸಿದ್ದು, “ನ್ಯಾಯ”ದ ವಿಷಯವನ್ನು ಕೇಂದ್ರೀಕರಿಸಿದೆ. ಸೋಮವಾರ, ಪಕ್ಷವು ಹೆಚ್ಚು ಸಮಾನ ಮತ್ತು ನ್ಯಾಯಯುತ ಭಾರತಕ್ಕಾಗಿ ತನ್ನ ದೃಷ್ಟಿಕೋನವುಳ್ಳ ಪ್ರಚಾರ ಹಾಡನ್ನು ಬಿಡುಗಡೆ ಮಾಡಿದೆ. “ಹಮ್ ಸಾಥ್ ಹೈ ತೋ ಹಾಥ್ ಯೇ ಹಾಲತ್ ಬದಲ್ ದೇಗಾ” ಎಂಬ ಗೀತೆಯನ್ನು ಕಾಂಗ್ರೆಸ್ ಪ್ರಧಾನ … Continued

ಅದೃಷ್ಟ ಅಂದ್ರೆ ಇದೇ ಅಲ್ವಾ | ಕೇವಲ 2 ಮೀನುಗಳ ಮಾರಾಟದಿಂದ ಲಕ್ಷಾಧಿಪತಿಯಾದ ಮೀನುಗಾರ..! ಮೀನಿನ ಬೆಲೆ ಕೇಳಿದ್ರೆ ಹೌಹಾರಬೇಕು…!!

ಕೆಲವೊಮ್ಮೆ ಮೀನುಗಾರರು ಬಲೆ ಬೀಸಿದಾಗ ಅಪರೂಪದ ಮೀನುಗಳು ಸಿಗುತ್ತವೆ. ದೊಡ್ಡ ಮೀನುಗಳ ಜೊತೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿರುವ ಮೀನುಗಳು ಸಹ ಬಲೆಗೆ ಬೀಳುತ್ತವೆ. ಕೆಲವು ಅಪರೂಪದ ಜಾತಿಯ ಮೀನುಗಳು ಮೀನುಗಳು ಬಲೆಗೆ ಬಿದ್ದರೆ ಮೀನುಗಾರರ ಸುಗ್ಗಿಯೋ ಸುಗ್ಗಿ. ಯಾಕೆಂದರೆ ಅವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಇಂಥಹದ್ದೇ ಒಂದು ನಿದರ್ಶನದಲ್ಲಿ ಇತ್ತೀಚೆಗೆ ಕೃಷ್ಣಾ ಜಿಲ್ಲೆಯ ಅಂತರವೇದಿಯಲ್ಲಿ ಮೀನುಗಾರರೊಬ್ಬರು ಅಪರೂಪದ … Continued

ಇದು ಸಮಾಧಾನಕರ ಸುದ್ದಿ..: ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಅಧಿಕ ಪ್ರಮಾಣದಲ್ಲಿ ಕಂಡುಬರುತ್ತದೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. 2024ರಲ್ಲಿ ಮುಂಗಾರು ಸರಾಸರಿ 106 ಪ್ರತಿಶತದಷ್ಟು ( 87 ಸೆಂಟಿಮೀಟರ್‌ ) ಮಳೆ​ ಬರಲಿದೆ ಎಂದು ಹೇಳಿದೆ. ಎಲ್ ನಿನೋ ದುರ್ಬಲಗೊಳ್ಳುತ್ತಿದೆ. ಮಾನ್ಸೂನ್ ಪ್ರಾರಂಭವಾಗುವ ಜೂನ್‌ ವೇಳೆಗೆ ಇದು ತಟಸ್ಥವಾಗಲಿದೆ ಎಂದು ಐಎಂಡಿಯ … Continued

ಲೋಕಸಭೆ ಚುನಾವಣೆ 2024: ಮೊದಲ ಹಂತದ ಮತದಾನಕ್ಕೆ ಮುನ್ನವೇ 2019ರ ಚುನಾವಣೆಗಿಂತ ಹೆಚ್ಚು ಮೌಲ್ಯದ ಸ್ವತ್ತು ವಶಕ್ಕೆ ಪಡೆದ ಚುನಾವಣಾ ಆಯೋಗ; ಎಷ್ಟು ಗೊತ್ತಾ..?

ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ಈವರೆಗೆ ದೇಶಾದ್ಯಂತ ದಾಖಲೆ ಇಲ್ಲದೆ ಸಾಗುತ್ತಿದ್ದ 4,650 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ವಿವಿಧ ಭದ್ರತಾ ಏಜೆನ್ಸಿಗಳು ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಣ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ … Continued

ಸಂಪತ್ತಿನಿಂದ ತ್ಯಾಗ ಜೀವನಕ್ಕೆ : ಸನ್ಯಾಸಿಗಳಾಗಲು 200 ಕೋಟಿ ರೂಪಾಯಿ ಸಂಪತ್ತು ದಾನ ಮಾಡಿದ ದಂಪತಿ…!

ಗುಜರಾತ್‌ನ ಪ್ರಮುಖ ಉದ್ಯಮಿ ಕುಟುಂಬವು ತಮ್ಮ ಸಂಪೂರ್ಣ ಜೀವಮಾನದ ಗಳಿಕೆಯ 200 ಕೋಟಿ ರೂಪಾಯಿಗಳನ್ನು ದಾನ ಮಾಡುವ ಮೂಲಕ ಅನೇಕರನ್ನು ಬೆರಗುಗೊಳಿಸಿದೆ. ಗುಜರಾತಿನ ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದ ನಿವಾಸಿ ಭವೇಶ ಭಾಯ್ ಭಂಡಾರಿ ಅವರು ತಮ್ಮ ಪತ್ನಿಯೊಂದಿಗೆ ಸನ್ಯಾಸಿ ಜೀವನವನ್ನು ಸ್ವೀಕರಿಸಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಭೌತಿಕ ಸಂಪತ್ತಿನ ಐಷಾರಾಮಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಅವರ … Continued

ವೀಡಿಯೊ…| ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ : ಇಬ್ಬರು ಶಂಕಿತರ ಸಿಸಿಟಿವಿ ದೃಶ್ಯಾವಳಿ, ಚಿತ್ರ ಬಿಡುಗಡೆ

ಮುಂಬೈ: ಭಾನುವಾರ ಮುಂಜಾನೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಇಬ್ಬರು ಬೈಕ್ ಶೂಟರ್‌ಗಳ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇಬ್ಬರೂ ಟೋಪಿಗಳನ್ನು ಧರಿಸಿದ್ದಾರೆ ಮತ್ತು ಅವರ ಮೇಲೆ ಬ್ಯಾಗ್‌ ಇರುವುದು ಕಂಡುಬಂದಿದೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೂಟರ್‌ಗಳು ನಟ ಸಲ್ಮಾನ್‌ ಖಾನ್‌ ಮನೆಯ ಮೇಲೆ … Continued