ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗ ನೀಡಿದ ದೂರಿನ ನಂತರ ವಕೀಲ ಜಗದೀಶ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ವಕೀಲ ಜಗದೀಶ ಕೋರ್ಟ್ ಆವರಣದಲ್ಲಿ ದುರ್ವರ್ತನೆ ತೋರಿದ್ದಾರೆ ಹಾಗೂ ಹೊರಗಿನವರನ್ನು ಕರೆತಂದು ಗೋಡಾ ವರ್ತನೆ ತೋರಿದ್ದಾರೆಂದು ಎಂದು ಆರೋಪಿಸಿ ವಕೀಲರ ಸಂಘದ ಅಧ್ಯಕ್ಷ ವಿವೇಕ ರೆಡ್ಡಿ ನೇತೃತ್ವದ ನಿಯೋಗವು ಶನಿವಾರ ಬೆಂಗಳೂರು ಪೊಲೀಸ್ ಆಯುಕ್ತ ಕಮಲ ಪಂತ ಅವರಗೆ ವಕೀಲ ಜಗದೀಶ ಅವರ ವಿರುದ್ಧ ದೂರು ನೀಡಿದ್ದರು.
ಈ ದೂರಿನ ಹಿನ್ನಲೆಯಲ್ಲಿ ಹಲಸೂರು ಗೇಟ್ ಪೊಲೀಸರು ವಕೀಲ ಜಗದೀಶ ಅವರನ್ನು ಬಂಧಿಸಿದ್ದಾರೆ. ಬಂಧಿತ ವಕೀಲ ಜಗದೀಶ ಅವರನ್ನು ಇಂದು ಸಂಜೆಯೊಳಗೆ ಕೋರಮಂಗಲ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಆದರೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಾಖಲೆಗಳನ್ನು ಸಲ್ಲಿಸಲು ಹೋದಾಗ ಕೋರ್ಟ್ ಆವರಣದಲ್ಲಿ ನನ್ನ ಹಾಗೂ ನನ್ನ ಮಗನ ಮೇಲೆ ಕೆಲ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ವಕೀಲ ಜಗದೀಶ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣದ ಲೈವ್ ನಲ್ಲಿ ಮಾತನಾಡಿದ್ದ ಅವರು, ಫೆಬ್ರವರಿ 11ಕ್ಕೆ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲ ಜಗದೀಶ್ ಮಗ ಮತ್ತು ಆಪ್ತರ ಮೇಲೆ ವಕೀಲರ ಗುಂಪೊಂದು ಹಲ್ಲೆ ಮಾಡಿದೆ ಎಂದು ವಕೀಲ ಜಗದೀಶ್ ಆರೋಪಿಸಿದ್ದರು. ಆದರೂ ಅಲ್ಲಿದ್ದ ಪೊಲೀಸರು ರಕ್ಷಣೆ ಮಾಡಿಲ್ಲ ಎಂದು ಆರೋಪಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರವೀಣ್ ಸೂದ್ ಹಾಗೂ ಕಮಲ್ ಪಂಧ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ