ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಮಾಜಿ ಸಚಿವ ಡಿ. ಸುಧಾಕರ

ಚಿತ್ರದುರ್ಗ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಹಗರಣದಲ್ಲಿ ನನ್ನ ಹೆಸರು ತಳಕು ಹಾಕಿಕೊಂಡಿದ್ದು, ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಮಾಜಿ ಸಚಿವ ಡಿ.ಸುಧಾಕರ ಹೇಳಿದ್ದಾರೆ.
ಸಿಡಿ ಪ್ರಕರಣದಲ್ಲಿರುವ ಮಹಿಳೆಗೆ ಹಣ ವರ್ಗಾವಣೆ ಮಾಡಿದ್ದೇನೆ ಎಂಬ ಅರೋಪ ಸತ್ಯಕ್ಕೆ ದೂರವಾಗಿದೆ. ನಾನು ಯಾರಿಗೂ ಹಣ ನೀಡಿಲ್ಲ. ಎಸ್‌ಐಟಿ ತನಿಖೆಗೆ ಕರೆದರೆ ಸಹಕರಿಸುತ್ತೇನೆ ಎಂದರು.
ನನಗೆ ಹಲವರು ಕರೆ ಮಾಡುತ್ತಿದ್ದಾರೆ. ನನಗೆ ಭಯ ಇದ್ದರೆ ಮೊದಲೇ ನ್ಯಾಯಾಲಯದ ಮೊರೆ ಹೋಗುತ್ತಿದ್ದೆ ಎಂದು ತಿಳಿಸಿದರು.

ನನಗೆ ಯಾವ ನರೇಶ್ ಆಗಲಿ, ಅವರ ಗ್ಯಾಂಗ್ ಆಗಲಿ ಯಾವುದೂ ಗೊತ್ತಿಲ್ಲ. ನನಗೆ ಯಾವ ಹನಿಟ್ರ್ಯಾಪ್, ಬ್ಲಾಕ್ ಮೇಲ್ ಕೂಡ ಮಾಡಿಲ್ಲ. ಸಿಡಿ ಯುವತಿ, ಈ ಪ್ರಕರಣ ಇದಾವುದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಅಂದಮೇಲೆ ಹಣದ ವ್ಯವಹಾರ ಎಲ್ಲಿಂದ ಬಂತು. ನಾನು ಯಾವುದೇ ರೀತಿಯ ಹಣವನ್ನೂ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement