ನವ ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆಗೆ ವಿವಿಧ ರಾಜ್ಯಗಳು ಸಲ್ಲಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ, ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ಗೆ ರಾಷ್ಟ್ರೀಯ ಮಕ್ಕಳ ಆಯೋಗ ಮಾಹಿತಿ ನೀಡಿದೆ.
ಕೊರೊನಾದಿಂದಾಗಿ ಒಟ್ಟು, 26,176 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದರೆ 3,621 ಮಕ್ಕಳು ಅನಾಥರಾಗಿದ್ದಾರೆ ಮತ್ತು 274 ಮಕ್ಕಳನ್ನು ಮನೆಯಿಂದ ಹೊರದಬ್ಬಲಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
2020ರ ಏಪ್ರಿಲ್ 1 ರಿಂದ 2021 ರ ಜೂನ್ 5 ರ ವರೆಗೆ ತಾಯಿ ಅಥವಾ ತಂದೆಯನ್ನು ಕಳೆದುಕೊಂಡಿರುವುದು, ಮತ್ತು ಇಬ್ಬರೂ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಬಗ್ಗೆ ರಾಜ್ಯವಾರು ಮಾಹಿತಿ ದೊರೆತಿದೆ ಎಂದು ಆಯೋಗವು ತಿಳಿಸಿದೆ. ಈ ಪೋಷಕರ ಸಾವಿಗೆ ಕೊರೊನಾ ಮಾತ್ರವಲ್ಲ ಬೇರೆ ಕಾರಣಗಳು ಇವೆ ಎಂದು ಮಾಹಿತಿ ನೀಡಿದೆ.
ಮಹಾರಾಷ್ಟ್ರ ಕೊರೊನಾದಿಂದ ಹೆಚ್ಚು ತೊಂದರೆಗೆ ಒಳಗಾಗಿದ್ದು, ಕಳೆದ ವರ್ಷ ಏಪ್ರಿಲ್ 1 ರಿಂದ 7,084 ಮಕ್ಕಳು ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡಿದ್ದಾರೆ. ಉತ್ತರ ಪ್ರದೇಶ (3,172), ರಾಜಸ್ಥಾನ (2,482), ಹರಿಯಾಣ (2,438), ಮಧ್ಯಪ್ರದೇಶ (2,243), ಆಂಧ್ರ ಪ್ರದೇಶ (2,089), ಕೇರಳ (2,002), ಬಿಹಾರ (1,634) ಮತ್ತು ಒಡಿಶಾ (1,073) ಮಕ್ಕಳು ಅನಾಥರಾಗಿದ್ದಾರೆ ಎಂದು ಎನ್ಸಿಪಿಸಿಆರ್ ಹೇಳಿದೆ.
ಮಹಾರಾಷ್ಟ್ರದಲ್ಲಿ ಒಟ್ಟು 7,084 ಮಕ್ಕಳಲ್ಲಿ 6,865 ಮಕ್ಕಳು ಒಬ್ಬ ಪೋಷಕರನ್ನು (ತಂದೆ ಅಥವಾ ತಾಯಿ) ಕಳೆದುಕೊಂಡಿದ್ದಾರೆ. 217 ಮಂದಿ ಅನಾಥರಾಗಿದ್ದಾರೆ ಮತ್ತು ಇಬ್ಬರು ಮಕ್ಕಳನ್ನು ಮನೆಯಿಂದ ಅವರನ್ನು ಹೊರದಬ್ಬಲಾಗಿದೆ. ಮಧ್ಯಪ್ರದೇಶದಲ್ಲಿ 226 ಮಕ್ಕಳನ್ನು ಮನೆಯಿಂದ ಹೊರದಬ್ಬಲಾಗಿದ್ದು, ದೇಶದಲ್ಲಿ ಅಗ್ರಸ್ಥಾನದಲ್ಲಿದೆ.
ಅನಾಥರಾಗಿರುವವರಲ್ಲಿ 15,620 ಮಂದಿ ಬಾಲಕರು, 14,447 ಮಂದಿ ಬಾಲಕಿಯರು ಮತ್ತು 4 ಮಂದಿ ಲೈಂಗಿಕ ಅಲ್ಪ ಸಂಖ್ಯಾತರು ಇದ್ದಾರೆ ಎಂದು ಎನ್ಸಿಪಿಸಿಆರ್ ತಿಳಿಸಿದೆ. ಇದರಲ್ಲಿ 11,815 ಮಂದಿ 8 ರಿಂದ 13 ವರ್ಷ ವಯಸ್ಸಿನವರಾಗಿದ್ದಾರೆ.2,902 ಮಂದಿ 3 ವರ್ಷದೊಳಗಿನ ಮಕ್ಕಳು, 4-7 ವರ್ಷ ವಯಸ್ಸಿನವರು 5,107 ಮತ್ತು 14 ರಿಂದ 15 ವರ್ಷ ವಯಸ್ಸಿನವರು 4,908 ಮಂದಿ ಇದ್ದರೆ, 16 ರಿಂದ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರು 5,339 ಮಂದಿಯಿದ್ದಾರೆ ಎಂದು ಮಾಹಿತಿ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ