ಕೆಎಸ್‌ಎಫ್‌ಎ ಫುಟ್ಬಾಲ್ ಕ್ರೀಡಾಂಗಣದಲ್ಲಿ ಮಾರಕಾಸ್ತ್ರಗಳಿಂದ ರೌಡಿ ಶೀಟರ್‌ ಹತ್ಯೆ

ಬೆಂಗಳೂರು: ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಅರವಿಂದ್ (30) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭಾನುವಾರ ಕೊಲೆ ಮಾಡಿದ್ದಾರೆ.
ಠಾಣೆ ವ್ಯಾಪ್ತಿಯ ಕೆಎಸ್‌ಎಫ್‌ಎ ಫುಟ್ಬಾಲ್ ಕ್ರೀಡಾಂಗಣದ ಎದುರಿನ ಬಿಬಿಎಂಪಿ ಮೈದಾನದಲ್ಲಿ ಅರವಿಂದ್, ಸ್ನೇಹಿತರ ಜೊತೆ ಫುಟ್ಬಾಲ್ ಆಡುತ್ತಿದ್ದರು. ಮಧ್ಯಾಹ್ನ 4 ಗಂಟೆ ಸುಮಾರಿಗೆ ಸ್ಥಳಕ್ಕೆ ಬಂದಿದ್ದ ನಾಲ್ವರು ದುಷ್ಕರ್ಮಿಗಳು, ಅರವಿಂದ್ ಮೇಲೆ ಹಲ್ಲೆಗೆ ಯತ್ನಿಸಿದ್ದರು’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ಹಳೇ ವೈಷಮ್ಯದಿಂದಾಗಿ ಎದುರಾಳಿಗಳೇ ಕೃತ್ಯ ಎಸಗಿರುವ ಮಾಹಿತಿ ಇದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದ ಅರವಿಂದ್, ಸಮೀಪದಲ್ಲೇ ಇದ್ದ ಫುಟ್ಬಾಲ್ ಕ್ರೀಡಾಂಗಣದ ಒಳಗೆ ಹೋಗಿದ್ದರು. ಕೊಠಡಿಯೊಂದಕ್ಕೆ ತೆರಳಿ, ಬಾಗಿಲು ಒಳಗಿನಿಂದ ಲಾಕ್ ಮಾಡಿಕೊಂಡಿದ್ದ. ಆತನನ್ನು ಬೆನ್ನಟ್ಟಿದ್ದ ಆರೋಪಿಗಳು, ಮೈದಾನದೊಳಗೆ ಹೋಗಿ ಕೊಠಡಿ ಬಾಗಿಲು ಲಾಕ್ ಮುರಿದಿದ್ದರು. ನಂತರ, ಕೊಠಡಿಯಲ್ಲೇ ಆತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಂದು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ’ ಎನ್ನಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement