ಸೈದಾಪುರ; ಅಗ್ನಿ ದುರಂತ, ದಂಪತಿ ಸಜೀವ ದಹನ

ಯಾದಗಿರಿ: ವಿದ್ಯುತ್‌ ಅವಘಡದಿಂದ ಬಟ್ಟೆ ಅಂಗಡಿಯೊಂದು ಹೊತ್ತಿ ಉರಿದು ದಂಪತಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದ ವರದಿಯಾಗಿದೆ.
ಇಂದು, ಸೋಮವಾರ ತಡರಾತ್ರಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ರಾಗಯ್ಯ (39) ಹಾಗೂ ಅವರ ಪತ್ನಿ ಶಿಲ್ಪ (35) ಮೃತಪಟ್ಟಿದ್ದಾರೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಎರಡು ಅಂಗಡಿಯಲ್ಲಿ ಬಟ್ಟೆ ಅಂಗಡಿಯಿತ್ತು. ಮತ್ತೊಂದರಲ್ಲಿ ದಂಪತಿ ಹಾಗೂ ಕುಟುಂಬ ವಾಸವಿತ್ತು. ವ್ಯವಹಾರ ಮುಗಿಸಿಕೊಂಡು ಮಲಗಿದ್ದಾಗ ರಾತ್ರಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಳಿಗ್ಗೆ 5 ಗಂಟೆಗ ಸುಮಾರಿಗೆ ಅಕ್ಕಪಕ್ಕದವರು ಗಮನಿಸಿ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಘಟನೆಯ ಸಮಯದಲ್ಲಿ ಮನೆಯಲ್ಲಿದ್ದ ರಾಗಯ್ಯ ಅವರ ತಂದೆತಾಯಿ ಮತ್ತು ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ದುರಂತ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಕೆಳಗಿನ ಎರಡು ಮಹಡಿಗಳಲ್ಲಿ ಬಟ್ಟೆಗಳು ಇದ್ದರಿಂದ ಬೆಂಕಿ ಅವಘಡ ಸಂಭವಿಸಿದಾಗ ದಟ್ಟವಾದ ಹೊಗೆ ಆವರಿಸಿತ್ತು. ಇದರಿಂದ ಮನೆಯಲ್ಲಿದ್ದ ದಂಪತಿಗೆ ಹೊರಬರಲು ಸಾಧ್ಯವಾಗಲಿಲ್ಲ. ಸ್ಥಳೀಯರು ಮತ್ತು ಅಗ್ನಿಶಾಮಕ, ಪೊಲೀಸ್‌ ಸಿಬ್ಬಂದಿ ನೆರವಿನಿಂದ ಮನೆಯಲ್ಲಿದ್ದ ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: 11 ಕಡೆ ಎನ್‌ಐಎ ದಾಳಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement