ಮಧ್ಯಂತರ ನಿರೀಕ್ಷಣಾ ಜಾಮೀನು ಬೆನ್ನಲ್ಲೇ ಎಸ್ಐಟಿ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ…

ಬೆಂಗಳೂರು: ಸುಮಾರು ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಅವರು ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದ ವಿಚಾರಣೆಗಾಗಿ ಎಚ್ಐಟಿ ಮುಂದೆ ಹಾಜರಾಗಿದ್ದಾರೆ.
ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ಅವರಿಗೆ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ್ದು, ಇದರ ಬೆನ್ನಲ್ಲೇ ಅವರು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.
ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್, ಇಂದು, ಶುಕ್ರವಾರ ಮಧ್ಯಾಹ್ನ 1 ಗಂಟೆಯೊಳಗೆ ಎಸ್‌ಐಟಿ (SIT) ಮುಂದೆ ಹಾಜರಾಗಬೇಕು ಎಂದು ಸೂಚನೆ ನೀಡಿತ್ತು. ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ತನಿಖೆಗೆ ಹಾಜರಾಗಬೇಕು. ಒಂದು ಗಂಟೆಯಿಂದ ಐದು ಗಂಟೆಯವರೆಗೆ ತನಿಖೆ ನಡೆಸಬಹುದು. ಐದು ಗಂಟೆಯ ನಂತರ ಅವರನ್ನು ಎಸ್‌ಐಟಿ ಕಚೇರಿಯಲ್ಲಿ ಇಟ್ಟುಕೊಳ್ಳಬಾರದು ಎಂದು ಕೋರ್ಟ್‌ ಸೂಚನೆ ನೀಡಿದೆ.

ಅಲ್ಲದೆ, ಕೆ.ಆರ್‌ ನಗರ ತಾಲ್ಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಸೂಚಿಸಿದೆ.
ಹೀಗಾಗಿ ತಮ್ಮ ವಕೀಲರ ಜೊತೆ ಸಿಐಡಿಯಲ್ಲಿರುವ ಎಸ್ಐಟಿ ಕಚೇರಿಗೆ ಆಗಮಿಸಿದ ಭವಾನಿ ರೇವಣ್ಣ‌ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಲು ಮುಂದಾಗಿದ್ದಾರೆ.
ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು 11 ಕಾರಣಗಳಿವೆ ಎಂದು ಭವಾನಿ ಪರ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದರು. ಈ ವಾದಗಳನ್ನು ಕೋರ್ಟ್‌ ಮಾನ್ಯ ಮಾಡಿತು. ಆದರೆ ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಈ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement