ಹಿಜಾಬ್‌ ವಿವಾದ: ಬೆಳಗಾವಿಯಲ್ಲಿ ಹೈಡ್ರಾಮಾ, ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಆರು ಯುವಕರು ವಶಕ್ಕೆ

ಬೆಳಗಾವಿ: ಹಿಜಾಬ್ ಧರಿಸಲು ಅನುಮತಿ ನೀಡದ್ದಕ್ಕೆ ಕೆಲ ಯುವಕರು ಸದಾಶಿವನಗರದ ಲಕ್ಷ್ಮಿ ಕಾಂಪ್ಲೆಕ್ಸ್ ಸಮೀಪದ ವಿಜಯ ಪ್ಯಾರಾಮೆಡಿಕಲ್ ಆಪ್ ಸೈನ್ಸ್ ಕಾಲೇಜು ಬಳಿ ಗುರುವಾರ ಹೈಡ್ರಾಮಾ ನಡೆಸಿ ಅಲ್ಲಾಹು ಅಕ್ಬರ್ ಅಂತಾ ಘೋಷಣೆ ಕೂಗಿದ ಆರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ  ಎಂದು ವರದಿಯಾಗಿದೆ.

ಕಾಲೇಜಿನ ತರಗತಿಯೊಳಗೆ ಹಿಜಾಬ್ ಗೆ ಅವಕಾಶ ಇಲ್ಲ ಎಂದು ಕಾಲೇಜು ಸಿಬ್ಬಂದಿ ಹೇಳುತ್ತಿದ್ದಂತೆ ವಿದ್ಯಾರ್ಥಿನಿಯರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸುಮಾರು 20 ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಾಬ್‍ಗೆ ಅವಕಾಶ ನೀಡುವಂತೆ ಪಟ್ಟುಹಿಡಿದ್ದಾರೆ. ಆದರೆ ಕಾಲೇಜು ಆಡಳಿತ ಮಂಡಳಿ ಕೋರ್ಟ್ ಆದೇಶ ಪಾಲನೆ ಮಾಡುವಂತೆ ಅವರಿಗೆ ಸೂಚಿಸಿದೆ. ಆಗ ವಿದ್ಯಾರ್ಥಿನಿಯರು ಕ್ಲಾಸ್‍ಗೆ ಬಹಿಷ್ಕಾರ ಹಾಕಿ ಹೊರ ಹೋಗುತ್ತಿದ್ದರು. ನಂತರ ಕೆಲ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದರು.

ನಂತರ ಕಾಲೇಜಿನತ್ತ ಯುವಕರ ಗುಂಪು ಆಗಮಿಸಿದೆ. ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದೆ. ಅಲ್ಲದೆ, ಪ್ರಾಂಶುಪಾಲರ ವಿರುದ್ಧ ಯುವಕರು ಆಕ್ರೋಶ ವ್ಯಕ್ತಪಡಿಸಿದರು. ಕೆಲ ಯುವಕರು ಸ್ಥಳಕ್ಕೆ ಬಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಡಿಸಿಪಿ ರವೀಂದ್ರ ಗಡಾದಿ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು. ಈ ವೇಳೆ ಕೆಲ ಯುವಕರು ಅಲ್ಲಾಹು ಅಕ್ಬರ್ ಅಂತಾ ಘೋಷಣೆ ಕೂಗಿ ಗೊಂದಲ ಸೃಷ್ಟಿಸಿದರು. ನಂತರ ಆರು ಜನ ಯುವಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement