ಟೋಕಿಯೊ ಪ್ಯಾರಾಲಿಂಪಿಕ್ಸ್: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಬ್ಯಾಡ್ಮಿಂಟನ್ ಸಿಂಗಲ್ಸ್ ಫೈನಲ್ ತಲುಪಿದ ಕನ್ನಡಿಗ, ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್

ಟೋಕಿಯೊ: ಪ್ಯಾರಾಲಿಂಪಿಕ್ಸ್‌ ಬ್ಯಾಡ್ಮಿಂಟನ್​​ನಲ್ಲಿ ಕನ್ನಡಿಗ ಸುಹಾಸ್ ಯತಿರಾಜ್ ಅವರು ಫೈನಲ್​ಗೆ ಪ್ರವೇಶಿಸಿದ್ದು, ಅವರಿಗೆ ಪದಕವಂತೂ ಖಚಿತವಾಗಿದೆ.
ಶನಿವಾರ ಪುರುಷರ ಬ್ಯಾಡ್ಮಿಂಟನ್ ಎಸ್‌ಎಲ್4 ವಿಭಾಗದಲ್ಲಿ ಸೆಮಿಫೈನಲ್ ಮುಖಾಮುಖಿಯಲ್ಲಿ ಯತಿರಾಜ್ ಅವರು ತಮ್ಮ ಎದುರಾಳಿ ಇಂಡೋನೇಷ್ಯಾದ ಫ್ರೆಡಿ ಸೆಟಿಯಾವನ್ ವಿರುದ್ಧ 21-9, 21-15ರ ಅಂತರದಲ್ಲಿ ಗೆಲುವು ದಾಖಲಿಸಿದರು. ಒಟ್ಟು 31 ನಿಮಿಷಗಳ ಕಾಲ ಈ ಪಂದ್ಯ ನಡೆಯಿತು.
ಭಾನುವಾರ ಫ್ರಾನ್ಸ್​ನ ಲೂಕಸ್ ಮಜೂರ್ ವಿರುದ್ಧ ಫೈನಲ್​ ಹಣಾಹಣಿ ನಡೆಯಲಿದೆ. ಸುಹಾಸ್ ಯತಿರಾಜ್ ಅವರು ಕರ್ನಾಟಕದ ಶಿವಮೊಗ್ಗ ಜಿಲ್ಲೆಯವರು. ಸದ್ಯ ಉತ್ತರಪ್ರದೇಶದ ನೋಯ್ಡಾ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

ನಿಮ್ಮ ಕಾಮೆಂಟ್ ಬರೆಯಿರಿ

advertisement