ಹುಬ್ಬಳ್ಳಿ-ಧಾರವಾಡ ಉತ್ತುಂಗಕ್ಕೆ ಒಯ್ಯುವೆ ಎಂದು ಭರವಸೆ, ಶೆಟ್ಟರ ಜೊತೆ ಮಾತನಾಡುವೆ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಸ್ಥಳ. ನನ್ನ ಎಲ್ಲ ಶಿಕ್ಷಣ ಮುಗಿದಿದ್ದು ಇಲ್ಲಿಯೇ. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ ಎಂದು ಕರ್ನಾಟಕದ ನೂತನ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಹುಬ್ಬಳ್ಳಿಯನ್ನು ಹೀಗೆ ನೆನಪಿಸಿಕೊಂಡರು.
ಕರ್ನಾಟಕದ ನೂತನ ಮುಖ್ಯಮಂತ್ರಿಯಾದ ನಂತರ ಹುಬ್ಬಳ್ಳಿಗೆ ಪ್ರಪ್ರಥಮವಾಗಿ ಆಗಮಿಸಿದ ನಂತರ ಅವರು ಗುರುವಾರ ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ರಾಜ್ಯದ ಎರಡನೇ ಅತಿದೊಡ್ಡ ನಗರ. ಹುಬ್ಬಳ್ಳಿ -ಧಾರವಾಡವನ್ನ ರಾಜ್ಯದಲ್ಲಿ ಉತ್ತುಂಗಕ್ಕೆ‌ ಕೊಂಡೊಯ್ಯುವೆ ಎಂದು ಭರವಸೆ ನೀಡಿದರು.
ಜಗದೀಶ್ ಶೆಟ್ಟರ್ ಸಂಪುಟ ಸೇರುವುದಿಲ್ಲ ಎಂಬ ಹೇಳಿಕೆ‌ ವಿಚಾರವಾಗಿ ಮಾತನಾಡಿದ ಅವರು, ಈ ಕುರಿತು ಜಗದೀಶ ಶೆಟ್ಟರ ಅವರ ಜೊತೆ ಪೋನ್ ನಲ್ಲಿ ಮಾತನಾಡಿದ್ದೇನೆ. ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅವರನ್ನು ಖುದ್ದಾಗಿ ಭೇಟಿಯಾಗಿ ಮತ್ತೊಮ್ಮೆ ಮಾತನಾಡುವೆ ಎಂದು ತಿಳಿಸಿದರು.
ಜಗದೀಶ್ ಶೆಟ್ಟರ ಹಾಗೂ ನಾನು ಆತ್ಮೀಯ ಸ್ನೇಹಿತರು, ಬೇರೆ ಪಕ್ಷದಲ್ಲಿ ಇದ್ದಾಗಲೂ ನಮ್ಮ ನಡುವೆ ಉತ್ತಮ ಬಾಂಧವ್ಯ ಇದೆ.
ನಾವು ಇನ್ನೂ ರಾಜಕೀಯಕ್ಕೆ ಬಂದಿರಲಿಲ್ಲ, ಆಗಿನಿಂದಲೂ ನಾವಿಬ್ಬರು ಒಳ್ಳೆಯ ಸ್ನೇಹಿತರು ಎಂದು ಬೊಮ್ಮಾಯಿ ಹೇಳಿದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement