ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು, ಭಾನುವಾರ ಬೆಳಗ್ಗೆ ಪೊಲೀಸರು ಎನ್ಕೌಂಟರ್ನಲ್ಲಿ ಏಳು ಮಾವೋವಾದಿಗಳು (Naxal Encounter). ಹೊಡೆದುರುಳಿಸಿದ್ದಾರೆ.
ಪೊಲೀಸ್ ಮಾಹಿತಿ ನೀಡುತ್ತಿದ್ದರು ಎಂಬ ಅನುಮಾನದ ಮೇಲೆ ಇಬ್ಬರು ಬುಡಕಟ್ಟು ಜನರನ್ನು ಮಾವೋವಾದಿಗಳು ಬರ್ಬರವಾಗಿ ಕೊಂದ ನಂತರ ನಕ್ಸಲ್ ವಿರೋಧಿ ಕಾರ್ಯಾಚರಣೆ ಚುರುಕುಗೊಂಡಿತ್ತು
ಚಲ್ಬಾಕ್ ಅರಣ್ಯ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದು. ಈ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಇಂದು ಬೆಳಗ್ಗೆ ಏಳು ಮಾವೋವಾದಿಗಳು ಹತರಾಗಿದ್ದಾರೆ.
ಎನ್ಕೌಂಟರ್ನಲ್ಲಿ ಸಾವಿಗೀಡಾದವರಲ್ಲಿ ಯೆಲ್ಲಾಂಡು-ನರಸಂಪೇಟೆ ಪ್ರದೇಶ ಸಮಿತಿಯ ಕಮಾಂಡರ್ ಭದ್ರು (35) ಸೇರಿದ್ದಾರೆ. ಅಲ್ಲದೆ, ಏಗೋಳಪು ಮಲ್ಲಯ್ಯ̈ (43, ಮುಸ್ಸಕಿ ದೇವಳ್ (22), ಮುಸ್ಸಕಿ ಜಮುನಾ (23), ಜೈಸಿಂಗ್ (25), ಕಿಶೋರ (22), ಮತ್ತು ಕಾಮೇಶ (23) ಎಂದು ಗುರುತಿಸಲಾಗಿದೆ. ಅವರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಕಳೆದ ತಿಂಗಳು ಛತ್ತೀಸ್ಗಡದಲ್ಲಿ ನಡೆದ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಬರೋಬ್ಬರಿ 10 ನಕ್ಸಲರನ್ನು ಹೊಡೆದುರುಳಿಸಲಾಗಿತ್ತು. ಸುಕ್ಮಾ ಜಿಲ್ಲೆಯಲ್ಲಿ ಈ ಎನ್ಕೌಂಟರ್ ನಡೆದಿದ್ದು, ಹತ ನಕ್ಸಲರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ