ಆಗ್ರಾ/ನವದೆಹಲಿ: ಬಾಂಬ್ ಇರುವುದಾಗಿ ಕರೆ ಬಂದ ಬೆನ್ನಲ್ಲೇ ತಾಜ್ ಮಹಲ್ ಆವರಣದಲ್ಲಿದ್ದ ಪ್ರವಾಸಿಗರನ್ನು ಖಾಲಿ ಮಾಡಿಸಲಾಗಿದೆ. ಸುಮಾರು ಸಾವಿರ ಪ್ರವಾಸಿಗರನ್ನು ಸ್ಥಳದಿಂದ ಕಳುಹಿಸಿ, ಬಾಂಬ್ ಪತ್ತೆಗಾಗಿ ಹುಡುಕಾಟ ನಡೆಸಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಅನಾಮಧೇಯ ವ್ಯಕ್ತಿ ತಾಜ್ ಮಹಲ್ನಲ್ಲಿ ಬಾಂಬ್ ಇರುವುದಾಗಿ ಉತ್ತರ ಪ್ರದೇಶ ಪೊಲೀಸರ 112 ತುರ್ತು ಸ್ಪಂದಿಸುವ ಸಂಖ್ಯೆಗೆ ಬೆಳಿಗ್ಗೆ 9ಕ್ಕೆ ಕರೆ ಮಾಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಸಿಬ್ಬಂದಿ ತಾಜ್ ಮಹಲ್ ಭದ್ರತೆ ವಹಿಸಿದ್ದು, ಪೊಲೀಸರು ಕೂಡಲೇ ಸಿಐಎಸ್ಎಫ್ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಪ್ರವಾಸಿಗರನ್ನು ಹೊರಗೆ ಕಳುಹಿಸಿದ ಭದ್ರತಾ ಸಿಬ್ಬಂದಿ 9:15ಕ್ಕೆ ಬಾಂಬ್ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ.ಈಗ ಬಹುತೇಕ ಪರಿಶೀಲನೆ ಪೂರ್ಣಗೊಂಡಿದ್ದು, ಯಾವುದೇ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿಲ್ಲ’ ಎಂದು ತಿಳಿಸಲಾಗಿದೆ.ಉತ್ತರ ಪ್ರದೇಶದ ಫಿರೋಜಾಬಾದ್ನಿಂದ ಸುಳ್ಳು ಬೆದರಿಕೆ ಕರೆ ಬಂದಿರುವುದಾಗಿ ಪತ್ತೆ ಮಾಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ