ಇಂದು ಪ್ರಧಾನಿಯಿಂದ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ : ಮೋದಿಗೆ ಬಿದರಿ ಕಲೆಯ ಸ್ವಾಮಿ ವಿವೇಕಾನಂದರ ಮೂರ್ತಿ, ಗರಗ-ಬೆಂಗೇರಿಯಲ್ಲಿ ತಯಾರಾದ ರಾಷ್ಟ್ರಧ್ವಜದ ಸ್ಮರಣಿಕೆ ಸಮರ್ಪಣೆ

ಧಾರವಾಡ: ಅವಳಿ ನಗರದಲ್ಲಿ ಬುಧವಾರದಿಂದ ಜನವರಿ 16 ರ ವರೆಗೆ ನಡೆಯಲಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ.
ಹುಬ್ಬಳ್ಳಿಯಲ್ಲಿ ಸಂಜೆ 4 ಗಂಟೆಗೆ ಯುವ ಜನೋತ್ಸವವನ್ನು ಉದ್ಘಾಟಿಸಲಿರುವ ಗೌರವಾನ್ವಿತ ಪ್ರಧಾನಮಂತ್ರಿ ಅವರನ್ನು ಜಿಲ್ಲಾಡಳಿತದಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಗುತ್ತಿದೆ. ಜನವರಿ 12, ಸ್ವಾಮಿ ವಿವೇಕಾನಂದರ ಜನ್ಮ ದಿನವೂ ಸಹ ಆಗಿರುವುದರಿಂದ ಅವರ ಸ್ಮರಣಾರ್ಥ ಬೀದರ ಜಿಲ್ಲೆಯ ಖ್ಯಾತಿಯನ್ನು ಜಗತ್ಪ್ರಸಿದ್ಧವಾಗಿಸಿದ ಬಿದರಿ ಕಲೆಯಲ್ಲಿ ನಿರ್ಮಿಸಿದ ಸುಂದರ ಮೂರ್ತಿಯನ್ನು ನೀಡಲಾಗುತ್ತಿದೆ. ಹಾವೇರಿಯಲ್ಲಿ ವಿಶೇಷವಾಗಿ ಏಲಕ್ಕಿ ಹಾರವನ್ನು ಸಿದ್ಧಪಡಿಸಲಾಗಿದೆ. ಏಲಕ್ಕಿ ಪೇಟ ಹೊಂದಿರುವ ಇದು ಏಲಕ್ಕಿಯ ಸುವಾಸನೆ ಬೀರುತ್ತದೆ.
ಧಾರವಾಡದಲ್ಲಿ ಪ್ರಧಾನಿ ಅವರಿಗೆ ಹೊದಿಸಲೆಂದೇ ವಿಶೇಷವಾಗಿ ನೇಯಲಾದ ಕಸೂತಿ ಕಲೆ ಹೊಂದಿರುವ ಹಾಂಡ್ ಲೂಮ್ ಶಾಲು ಮತ್ತು ಧಾರವಾಡ ಜಿಲ್ಲೆಯ ಗರಗ ಹಾಗೂ ಹುಬ್ಬಳ್ಳಿಯ ಬೆಂಗೇರಿಯಲ್ಲಿ ತಯಾರಿಸಲಾದ ರಾಷ್ಟ್ರ ಧ್ವಜವನ್ನು ಟೀಕ್ ವುಡ್ ನಲ್ಲಿ ಧ್ವಜಕ್ಕೆ ಚೌಕಟ್ಟು ಹಾಕಿರುವ ಫ್ರೇಮ್ ಅನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಗುತ್ತಿದೆ.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement