ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಭಾನುವಾರ ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗುಂಡಿನ ದಾಳಿಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ. ಪಂಜಾಬ್ ಸರ್ಕಾರ ಮೂಸೆವಾಲಾ ಸೇರಿದಂತೆ 424 ಜನರ ಭದ್ರತೆಯನ್ನು ಹಿಂಪಡೆದ ಒಂದು ದಿನದ ನಂತರ ಈ ಘಟನೆ ನಡೆದಿದೆ. ವಿಐಪಿ ಸಂಸ್ಕೃತಿಗೆ ಕಡಿವಾಣ ಹಾಕುವ ಭಗವಂತ್ ಮಾನ್ ಸರ್ಕಾರದ ಕಸರತ್ತಿನ ಭಾಗವಾಗಿ ಭದ್ರತೆಯನ್ನು ಹಿಂಪಡೆಯಲಾಗಿದೆ.
ಮೂಸೆವಾಲಾ ಮತ್ತು ಆತನ ಇಬ್ಬರು ಸ್ನೇಹಿತರು ಜೀಪಿನಲ್ಲಿ ಪಂಜಾಬ್ನ ಜವಾಹರ್ ಕೆ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ದಾಳಿ ನಡೆದಿದೆ.
ಮೂಸೆವಾಲಾ ಅವರ SUV ಗೆ ಬುಲೆಟ್ಗಳನ್ನು ಹಾರಿಸಲಾಯಿತು ಮತ್ತು ಅವರು ತಮ್ಮ ಆಸನದ ಮೇಲೆ ಕುಸಿದು ಬಿದ್ದಿದ್ದಾರೆ, ಭಾರೀ ರಕ್ತಸ್ರಾವ ಕಂಡುಬಂದಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.
ಗ್ಯಾಂಗ್ ವಾರ್ ನಿಂದಾಗಿ ಈ ದಾಳಿ ನಡೆದಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ. ಕೆನಡಾ ಮೂಲದ ದಾಳಿಕೋರರು ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಹತ್ಯೆಯಲ್ಲಿ ಭಾಗಿಯಾಗಿದೆ. ಗ್ಯಾಂಗ್ನ ಸದಸ್ಯ ಕೆನಡಾದಿಂದ ಈ ಕೊಲೆಯ ಜವಾಬ್ದಾರಿ ಹೊತ್ತುಕೊಂಡಿದ್ದಾನೆ ಎಂದು ಪಂಜಾಬ್ ಡಿಜಿಪಿ ವಿಕೆ ಭಾವ್ರಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೆನಡಾ ಮೂಲದ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಹಾಯಕ ಗೋಲ್ಡಿ ಬ್ರಾರ್ ಪಂಜಾಬ್ನಲ್ಲಿ ನಡೆದ ಸಿಧು ಮೂಸೆವಾಲಾ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾನೆ. ತನ್ನ ಖಾತೆಯಿಂದ ಫೇಸ್ಬುಕ್ ಪೋಸ್ಟ್ನಲ್ಲಿ, ವಿವಾದಾತ್ಮಕ ಗಾಯಕನ ಹತ್ಯೆಯ ಜವಾಬ್ದಾರಿಯನ್ನು ಬ್ರಾರ್ ಹೊತ್ತುಕೊಂಡಿದ್ದಾನೆ.
ತನ್ನ ಫೇಸ್ಬುಕ್ ಪೋಸ್ಟ್ನಲ್ಲಿ, ಬ್ರಾರ್ ತನ್ನ ಹಲವಾರು ಸಹಚರರ ಹತ್ಯೆಗೆ ಮೂಸ್ವಾಲಾ ಕಾರಣ ಎಂದು ಹೇಳಿದ್ದಾನೆ ಮತ್ತು ಪೊಲೀಸರು ಕ್ರಮ ಕೈಗೊಳ್ಳದ ಕಾರಣ, ತಾನು ಗಾಯಕ/ರಾಪರ್ ಅನ್ನು ಮಾಡಿ ಕೊಲೆ ಮಾಡಿರುವುದಾಗಿ ಹೇಳಿದ್ದಾನೆ. ಕುತೂಹಲಕಾರಿಯಾಗಿ, ಭಗವಂತ್ ಮಾನ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರವು ಹತ್ಯೆಯ ಒಂದು ದಿನದ ಮೊದಲು ಮೂಸ್ವಾಲಾ ಅವರ ಭದ್ರತೆ ಹಿಂಡೆದಿತ್ತು.
ಘಟನೆಯ ತನಿಖೆಗಾಗಿ ಪಂಜಾಬ್ ಪೊಲೀಸರು ವಿಶೇಷ ತನಿಖಾ ತಂಡವನ್ನು ಸಹ ರಚಿಸಿದ್ದಾರೆ.
ಶುಭದೀಪ್ ಸಿಂಗ್ ಸಿಧು ಅವರು ಸಿಧು ಮೂಸೆವಾಲಾ ಎಂದೇ ಜನಪ್ರಿಯರಾಗಿದ್ದರು. 28 ವರ್ಷದ ಅವರು ಮಾನ್ಸಾ ಬಳಿಯ ಮೂಸೆವಾಲಾ ಗ್ರಾಮಕ್ಕೆ ಸೇರಿದವರು ಮತ್ತು ಕಳೆದ ಕೆಲವು ವರ್ಷಗಳಲ್ಲಿ ಹಲವಾರು ಸೂಪರ್ಹಿಟ್ ಹಾಡುಗಳನ್ನು ನೀಡಿದ್ದರು.
ಗಾಯಕ ತನ್ನ ಹಾಡುಗಳಲ್ಲಿ ಗನ್ ಸಂಸ್ಕೃತಿಯನ್ನು ಉತ್ತೇಜಿಸಿದ್ದಕ್ಕಾಗಿ ಹಲವಾರು ಕಡೆಗಳಿಂದ ಟೀಕೆಗಳನ್ನು ಸಹ ಎದುರಿಸಿದ್ದರು. ”
ಸಂಜು” ಹಾಡಿನ ಮೂಲಕ ಹಿಂಸಾಚಾರವನ್ನು ಉತ್ತೇಜಿಸಿದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ಸಹ ದಾಖಲಾಗಿತ್ತು.
ಕೋವಿಡ್-19 ಲಾಕ್ಡೌನ್ ಸಮಯದಲ್ಲಿ ಫೈರಿಂಗ್ ರೇಂಜ್ನಲ್ಲಿ ಎಕೆ-47 ರೈಫಲ್ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ಛಾಯಾಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಬರ್ನಾಲಾದಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಕಳೆದ ವರ್ಷ ಡಿಸೆಂಬರ್ನಲ್ಲಿ ಗಾಯಕ ಕಾಂಗ್ರೆಸ್ಗೆ ಸೇರಿದ್ದರು. 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ,ಅವರು ಕಾಂಗ್ರೆಸ್ ಟಿಕೆಟ್ನಲ್ಲಿ ಮಾನ್ಸಾದಿಂದ ಸ್ಪರ್ಧಿಸಿದ್ದರು. ಅವರು ಆಮ್ ಆದ್ಮಿ ಪಕ್ಷದ ಡಾ.ವಿಜಯ್ ಸಿಂಗ್ಲಾ ವಿರುದ್ಧ ಭಾರೀ ಸೋಲು ಕಂಡಿದ್ದರು.
ಈ ಸುದ್ದಿಯಿಂದ ನನಗೆ ತೀವ್ರ ಆಘಾತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. “ಕಾಂಗ್ರೆಸ್ನ ಭರವಸೆಯ ನಾಯಕ ಮತ್ತು ಪ್ರತಿಭಾವಂತ ಕಲಾವಿದ ಸಿದ್ದು ಮೂಸೆವಾಲಾ ಅವರ ಹತ್ಯೆಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಪ್ರಪಂಚದಾದ್ಯಂತದ ಅವರ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ