ಗುಂಡ್ಯ ಸಮೀಪ ಆನೆ ಮರಿ ಶವ ಪತ್ತೆ, ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿರುವ ಶಂಕೆ

ಮಂಗಳೂರು : ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದ ಹತ್ತಿರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವ ಪತ್ತೆಯಾಗಿದೆ.
ಸಕಲೇಶಪುರ ವಲಯ ಅರಣ್ಯ ಅರಣ್ಯ ವ್ಯಾಪ್ತಿಯ ಮಾರನಹಳ್ಳಿ ಶಾಖೆ ಕೆಂಪುಹೊಳೆ ಮೀಸಲು ಅರಣ್ಯ ಪ್ರದೇಶದಲ್ಲಿ ಆನೆಮರಿ ಶವ ಪತ್ತೆಯಾಗಿದ್ದು, ಆನೆ ಮರಿಗೆ ಸುಮಾರು 5 ತಿಂಗಳು ವಯಸ್ಸಾಗಿರಬಹುದು ಎಂದು ಊಹಿಸಲಾಗಿದೆ.
ಆನೆ ಮರಿಯು ತಾಯಿ ಆನೆಯೊಂದಿಗೆ ಆಹಾರ ಹುಡುಕುತ್ತ ಬಂದ ವೇಳೆ ಗುಡ್ಡದಿಂದ ಜಾರಿ ಬಿದ್ದು ಮೃತಪಟ್ಟಿರಬಹುದು ಅಥವಾ ಹೊಳೆ ದಾಟುವಾಗ ನೀರಿನೊಂದಿಗೆ ಕೊಚ್ಚಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮಾರನಹಳ್ಳಿ ಉಪವಲಯ ಅರಣ್ಯ ಅಧಿಕಾರಿ , ಉಪ್ಪಿನಂಗಡಿ ಅರಣ್ಯ ವಲಯ ವ್ಯಾಪ್ತಿಯ ಶಿರಾಡಿ ಅರಣ್ಯಾಧಿಕಾರಿಭೇಟಿ ನೀಡಿ ಪರಿಶೀಲಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ನಿಮ್ಮ ಕಾಮೆಂಟ್ ಬರೆಯಿರಿ

advertisement