ಸುಪ್ರೀಂ ಕೋರ್ಟಿನಲ್ಲಿ ಆರ್ಟಿಕಲ್ 370 ವಿರುದ್ಧ ಅರ್ಜಿ : ಯು-ಟರ್ನ್ ಹೊಡೆದ ಐಎಎಸ್‌ ಅಧಿಕಾರಿ- ಮಾಜಿ ವಿದ್ಯಾರ್ಥಿ ನಾಯಕಿ

ನವದೆಹಲಿ: ಐಎಎಸ್ ಅಧಿಕಾರಿ ಶಾ ಫೈಸಲ್ ಮತ್ತು ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಶೋರಾ ಅವರು 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಗಳನ್ನು ಹಿಂಪಡೆದಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಮಂಗಳವಾರ (ಜುಲೈ ೧೧) ಶಾ ಫೈಸಲ್ ಮತ್ತು ಶೆಹ್ಲಾ ರಶೀದ್ ಶೋರಾ ಅವರ ಅರ್ಜಿಗಳನ್ನು ಹಿಂಪಡೆಯಲು ಅವಕಾಶ ಮಾಡಿಕೊಟ್ಟಿತು ಮತ್ತು ಅರ್ಜಿದಾರರ ಪಟ್ಟಿಯಿಂದ ಅವರ ಹೆಸರನ್ನು ಅಳಿಸುವಂತೆ ಸೂಚಿಸಿದೆ.
ಫೈಸಲ್ ಅವರು 2009 ರಲ್ಲಿ ನಾಗರಿಕ ಸೇವೆಗಳ ಪ್ರವೇಶ ಪರೀಕ್ಷೆ (ಐಎಎಸ್‌)ಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಮೊದಲ ಬಾರಿಗೆ ಹೆಡ್‌ ಲೈನ್ಸ್‌ ಪಡೆದರು. ಹಾಗೆ ಮಾಡಿದ ಮೊದಲ ಕಾಶ್ಮೀರಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಹಲವಾರು ಸರ್ಕಾರಿ ಹುದ್ದೆಗಳ ನಂತರ, ಅವರು 2019 ರಲ್ಲಿ “ಕಾಶ್ಮೀರದಲ್ಲಿ ನಿರಂತರ ಹತ್ಯೆಗಳನ್ನು” ಪ್ರತಿಭಟಿಸಲು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಫೇಸ್‌ಬುಕ್ ಪೋಸ್ಟ್‌ನಲ್ಲಿ, ಕೇಂದ್ರವು ಭಾರತೀಯ ಮುಸ್ಲಿಮರನ್ನು ಅಂಚಿಗೆ ತಳ್ಳುತ್ತಿದೆ ಮತ್ತು ಸಾರ್ವಜನಿಕ ಸಂಸ್ಥೆಗಳನ್ನು ಬುಡಮೇಲು ಮಾಡುತ್ತಿದೆ ಎಂದು ಆರೋಪಿಸಿದ್ದರು. ನಂತರ ಅವರು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್ಮೆಂಟ್ ಎಂಬ ರಾಜಕೀಯ ಪಕ್ಷವನ್ನು ಪ್ರಾರಂಭಿಸಿದರು.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಶೆಹ್ಲಾ ರಶೀದ್, 2016 ರಲ್ಲಿ ದೇಶದ್ರೋಹದ ಆರೋಪದ ಮೇಲೆ ಬಂಧಿತರಾದ ಕನ್ಹಯ್ಯಕುಮಾರ ಮತ್ತು ಉಮರ್ ಖಾಲಿದ್ ಸೇರಿದಂತೆ ಹಲವಾರು ವಿದ್ಯಾರ್ಥಿ ನಾಯಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಆಂದೋಲನದ ಸಮಯದಲ್ಲಿ ಪ್ರಾಮುಖ್ಯತೆಯನ್ನು ಪಡೆದರು. ಕನ್ಹಯ್ಯಕುಮಾರ ಈಗ ಕಾಂಗ್ರೆಸ್ ನಾಯಕ. ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್ ಖಾಲಿದ್ ಜೈಲಿನಲ್ಲಿದ್ದಾರೆ. ಶೆಹ್ಲಾ ರಶೀದ್ ನಂತರ ಶಾ ಫೈಸಲ್ ಅವರ ಪಕ್ಷಕ್ಕೆ ಸೇರಿದರು.

ಕೇಂದ್ರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಬಂಧಿಸಲ್ಪಟ್ಟ ಕಾಶ್ಮೀರ ನಾಯಕರಲ್ಲಿ ಶಾ ಫೈಸಲ್ ಕೂಡ ಒಬ್ಬರು. ಆಗಸ್ಟ್ 2020 ರಲ್ಲಿ, ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್ಮೆಂಟ್ ಪಕ್ಷವು ಫೈಸಲ್ ಅವರ ಕೋರಿಕೆಯ ಮೇರೆಗೆ ಪಕ್ಷದ ಸದಸ್ಯ ಸ್ಥಾನದಿಂದ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಘೋಷಿಸಿತು. ಶೆಹ್ಲಾ ರಶೀದ್ ಕೂಡ ಪಕ್ಷ ತೊರೆದಿದ್ದಾರೆ.ಕಳೆದ ವರ್ಷ, ಅವರು ಸರ್ಕಾರಿ ಸೇವೆಯಲ್ಲಿ ಮರುಸೇರ್ಪಡೆಗೆ ಅರ್ಜಿ ಸಲ್ಲಿಸಿದರು ಮತ್ತು ರಾಜೀನಾಮೆಯನ್ನು ಹಿಂಪಡೆಯಲು ಮುಂದಾದರು. ಅವರ ಅರ್ಜಿಯನ್ನು ಸ್ವೀಕರಿಸಲಾಯಿತು.
ಇತ್ತೀಚಿನ ಟ್ವಿಟರ್ ಪೋಸ್ಟ್‌ನಲ್ಲಿ, ಫೈಸಲ್ ಅವರು ಆರ್ಟಿಕಲ್ 370 ಈಗ “ಹಿಂದಿನ ವಿಷಯ” ಎಂದು ಹೇಳಿದ್ದಾರೆ.
370, ನನ್ನಂತಹ ಅನೇಕ ಕಾಶ್ಮೀರಿಗಳಿಗೆ ಇದು ಹಿಂದಿನ ವಿಷಯವಾಗಿದೆ. ಜೀಲಂ ಮತ್ತು ಗಂಗಾ ನದಿ ಮಹಾನ್ ಹಿಂದೂ ಮಹಾಸಾಗರದಲ್ಲಿ ವಿಲೀನಗೊಂಡಿವೆ. ಹಿಂದೆ ಸರಿಯುವುದೇ ಇಲ್ಲ. ಮುಂದೆ ಸಾಗುವುದು ಮಾತ್ರ ಇದೆ ಎಂದು ಟ್ವೀಟ್‌ ನಲ್ಲಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

4.5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement