ಪತ್ನಿ ಸಾವಿನಿಂದ ಮನನೊಂದು ಪತಿ, ಇಬ್ಬರು ಹೆಣ್ಣುಮಕ್ಕಳು ಆತ್ಮಹತ್ಯೆ

ಬೆಳಗಾವಿ: ಹೆಂಡತಿಯ ಸಾವಿನಿಂದ ಮನನೊಂದ ಗಂಡ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
ವಾರದ ಹಿಂದೆ ಚೆನ್ನವ್ವ ರಂಗಾಪುರೆ ಮೃತಪಟ್ಟಿದ್ದರು. ಪತ್ನಿಯ ಅಗಲಿಕೆಯಿಂದ ಮನನೊಂದ ಪತಿ ಕಾಡಪ್ಪ ತನ್ನ ಇಬ್ಬರು ಹೆಣ್ಣುಮಕ್ಕಳು ಜೊತೆ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಕಾಡಪ್ಪ (48) ಹಾಗೂ ಮಕ್ಕಳಾದ ಕೀರ್ತಿ (20) ಸ್ಫೂರ್ತಿ (18) ಎಂದು ಗುರುತಿಸಲಾಗಿದೆ.
ಎಂಟು ದಿನಗಳ ಹಿಂದೆ ಚೆನ್ನವ್ವ(40) ಹೃದಯಾಘಾತದಿಂದ ಮೃತಪಟ್ಟಿದ್ದರು ಎನ್ನಲಾಗಿದೆ. ಅದಕ್ಕಾಗಿ ಮನನೊಂದ ಕಾಡಪ್ಪಾ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳು ಕೀರ್ತಿ ಹಾಗೂ ಸ್ಫೂರ್ತಿ ಭಾನುವಾರ ಬೆಳಿಗಿನ ೪ರ ಸುಮಾರಿಗೆ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement