ತನ್ನ ಗರ್ಲ್‌ ಫ್ರೆಂಡ್ ಮೇಲೆಯೇ ಕಾರು ಹರಿಸಿ ಕೈ-ಕಾಲು ಮುರಿದ ಐಎಎಸ್‌ ಅಧಿಕಾರಿಯ ಪುತ್ರ : ದೂರು ದಾಖಲು

ಮುಂಬೈ : ತನ್ನ ಗೆಳತಿಯ ಮೇಲೆಯೇ ಆಕೆಯ ಬಾಯ್‌ಫ್ರೆಂಡ್‌ ಕಾರು ಹರಿಸಿ ಕೈ- ಕಾಲು ಮುರಿದಿರುವ ಅಮಾನುಷ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಪ್ರಿಯಾ ಸಿಂಗ್ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಿಯಾ ಸಿಂಗ್ ಅವರ ಮೇಲೆ ಕಾರು ಹರಿಸಿದ ವ್ಯಕ್ತಿಯನ್ನು ಅಶ್ವಜಿತ್ ಗಾಯಕವಾಡ್‌ ಎಂದು ಗುರುತಿಸಲಾಗಿದೆ. ಮುಂಬೈ ಥಾಣೆಯ ಕಾಸರವಾಡದ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಿಯಾ ಸಿಂಗ್ ದೂರು ದಾಖಲಿಸಿದ್ದಾರೆ.
ಸೋಷಿಯಲ್ ಮೀಡಿಯಾ ಇನ್‌ ಫ್ಲೂಯೆನ್ಸರ್‌ ಆಗಿರುವ ಪ್ರಿಯಾ ಸಿಂಗ್ ಪರಿಚಯ ಮಾಡಿಕೊಂಡಿದ್ದ ಅಶ್ವಜಿತ್ ಗಾಯಕವಾಡ್ ತಂದೆ ಅನಿಲ ಗಾಯಕವಾಡ್ ಐಎಎಸ್‌ (IAS) ಅಧಿಕಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಡಿಸೆಂಬರ್ 11ರಂದು ಹೋಟೆಲ್‌ ನಿಂದ ಹೊರಗೆ ಬಂದಾಗ ಅಶ್ವಜಿತ್ ಹಾಗೂ ಪ್ರಿಯಾ ಸಿಂಗ್ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪ್ರಿಯಾ ಸಿಂಗ್ ಮೇಲೆ ಅಶ್ವಜಿತ್ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಆರೋಪಿಯ ಕಾರಿನಿಂದ ಪ್ರಿಯಾ ಸಿಂಗ್‌ ತನ್ನ ಬ್ಯಾಗ್ ತರಲು ಹೋಗಿದ್ದಾರೆ. ಈ ವೇಳೆ ಪ್ರಿಯಾ ಸಿಂಗ್ ಮೇಲೆ ಅಶ್ವಜಿತ್ ಸ್ನೇಹಿತ ಕಾರ್ ಹರಿಸಿದ್ದು, ಅಶ್ವಜಿತ್ ಗಾಯಕ್‌ವಾಡ್ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ತನ್ನ ಮೇಲೆ ಕಾರು ಹರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಪ್ರಮುಖ ಸುದ್ದಿ :-   ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

ಈ ಘಟನೆಯಿಂದ ಪ್ರಿಯಾ ಅವರ ಹೊಟ್ಟೆ, ಕೈ, ಕಾಲುಗೆ ಗಂಭೀರ ಗಾಯಗಳಾಗಿದೆ. ಬಲಗಾಲು ಮುರಿದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾನು ಕಂಪ್ಲೇಂಟ್‌ ಕೊಟ್ಟರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಆದರೆ ಈ ಆರೋಪವನ್ನು ಅಶ್ವಜಿತ್ ಗಾಯಕವಾಡ್ ಅಲ್ಲಗಳೆದಿದ್ದಾರೆ. ಪ್ರಿಯಾ ಸಿಂಗ್ ನನ್ನ ಸ್ನೇಹಿತೆ ಅಷ್ಟೆ, ಆದರೆ, ಗರ್ಲ್ ಫ್ರೆಂಡ್ ಅಲ್ಲ. ಆಕೆಯೇ ನನ್ನೊಂದಿಗೆ ಬಲವಂತವಾಗಿ ಮಾತನಾಡಲು ಯತ್ನಿಸಿದ್ದಳು. ನನ್ನ ಸ್ನೇಹಿತರ ಮೇಲೆ ಆಕೆಯೇ ಹಲ್ಲೆ ಮಾಡಿದ್ದಾಳೆ. ಈ ಅಪಘಾತ ಆಕಸ್ಮಿಕವಾಗಿದ್ದು ಉದ್ದೇಶಪೂರ್ವಕವಲ್ಲ ಎಂದು ಹೇಳಿದ್ದಾರೆ. ಆದರೆ ದೂರು ದಾಖಲಿಸಿದರೂ ಪೊಲೀಸರು ಆರೋಪಿಗಳನ್ನು ಈವರೆಗೆ ಬಂಧಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement