ಸಚಿವರ ಮಂಪರು ಪರೀಕ್ಷೆಗೆ ಒಳಪಡಿಸಲು ಕೋರಿ ಶೀಘ್ರವೇ ಅರ್ಜಿ

ಬೆಂಗಳೂರು: ಸಿಡಿ ವಿಚಾರವಾಗಿ ಸಚಿವರುಗಳಿಗೆ ಮಂಪರು ಪರೀಕ್ಷೆ ಮಾಡಬೇಕು ಮತ್ತು ಅವರು ಸಲ್ಲಿಸಿರುವ ನಿರೀಕ್ಷಣಾ ನಿರ್ಬಂಧ ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ರಮೇಶ್ ಜಾರಕಿಹೊಳಿ ಮಿತ್ರಮಂಡಳಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು.
ಸಚಿವರಾದ ಡಾ.ಕೆ.ಸುಧಾಕರ್, ನಾರಾಯಣಗೌಡ, ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ , ಬಿ.ಸಿ.ಪಾಟೀಲ್, ಶಿವರಾಮ ಹೆಬ್ಬಾರ್ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವುದನ್ನು ನೋಡಿದರೆ ಇವರು ತಕ್ಷಣವೇ ಮಂತ್ರಿಗಿರಿಗೆ ರಾಜೀನಾಮೆ ನೀಡಬೇಕಾದ ಪರಿಸ್ಥಿಯಿದೆ ಎಂದು ಗೊತ್ತಾಗುತ್ತದೆ ಎಂದ ಅವರು ಈ ಸಚಿವರನ್ನು ಮಂಪರು ಪರೀಕ್ಷೆ ಒಳಪಡಿಸಬೇಕು ಎಂದು ಸಚಿನ್ ಮಿಗಾ ಒತ್ತಾಯಿಸಿದ್ದು, ಈ ಬಗ್ಗೆ ಕೋರ್ಟಿಗೆ ಅರ್ಜಿ ಸಲ್ಲಿಸುವುದಾಗಿಯೂ ಹೇಳಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement