ಬೆಂಗಳೂರು : ವಿಮಾನ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗಗೊಂಡ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ಪ್ರಜ್ವಲ್ ರೇವಣ್ಣ ಅವರು ವೀಡಿಯೊ ಬಿಡುಗಡೆ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ಅಲ್ಲದೆ ಲುಫ್ತಾನ್ಸ ವಿಮಾನದಲ್ಲಿ ಮೇ 30ರಂದು ವಿಮಾನ ಬುಕ್ ಸಹ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೇವಣ್ಣ ಬರುವಿಕೆಗಾಗಿ ಕಾಯುತ್ತಿದ್ದರು.
ಲುಫ್ತಾನ್ಸ ಎಲ್ಎಚ್ 764 ವಿಮಾನದಲ್ಲಿ ಬೆಂಗಳೂರಿಗೆ ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಆಗಮಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಕ್ ನಗರದಿಂದ ಗುರುವಾರ ಅಪರಾಹ್ನ 3.30ಕ್ಕೆ ಬೆಂಗಳೂರಿಗೆ ಲುಫ್ತಾನ್ಸಾ ಏರ್‌ವೇಸ್‌ನ ವಿಮಾನದಲ್ಲಿ ಹೊರಟರು. ಈ ವಿಮಾನ ನಿನ್ನೆ ತಡರಾತ್ರಿ (ಮೇ 31) ನಸುಕಿನ 12.50ರ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದಲ್ಲಿ ಬಂದಿಳಿಯಿತು. ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ಎಸ್‌ಐಟಿಯಿಂದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲು ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದ ಮಹಿಳಾ ಪೊಲೀಸರ ತಂಡವನ್ನು ಕಳುಹಿಸಲಾಗಿತ್ತು. ಐವರು ಮಹಿಳಾ ಪೊಲೀಸ್ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಟರ್ಮಿನಲ್ ಎರಡರಲ್ಲಿ‌ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಅಲರ್ಟ್ ಆಗಿದ್ದ ಎಸ್.ಐ.ಟಿ ತಂಡ ಇಮಿಗ್ರೇಷನ್ ಇಲಾಖೆ ಅಧಿಕಾರಿಗಳು ಪ್ರೋಸಸ್​ ಮುಗಿಸುತ್ತಿದ್ದಂತೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.. ವಿಮಾನದಿಂದ ಇಳಿದ ಬಳಿಕೆ ಪ್ರಜ್ವಲ್​ರನ್ನ ಇಮಿಗ್ರೇಷನ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಅವರ ಮೇಲೆ ಬ್ಲೂ ಕಾರ್ನರ್, ಲುಕ್ ಔಟ್ ಹಾಗೂ ವಾರೆಂಟ್ ಇದ್ದಿದ್ದರಿಂದ ವಿಚಾರಣೆ ನಡೆಸಿ ಯಾವ ಉದ್ದೇಶಕ್ಕಾಗಿ ವಿದೇಶಕ್ಕೆ ಹೋಗಿದ್ದು ಎಂಬಿತ್ಯಾದಿ ಮಾಹಿತಿ ಸಂಗ್ರಹ ಮಾಡಿದ್ದಾರೆ ಎನ್ನಲಾಗಿದೆ. ಜೊತೆಗೆ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್, ವೀಸಾ ಹಾಗೂ ಟಿಕೆಟ್ ಸೇರಿದಂತೆ ಹಲವು ದಾಖಲೆಗಳ ಪರಿಶೀಲನೆ ಮಾಡಿದ ನಂತರ ನಂತರ ಎಸ್​ಐಟಿ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ. ಪ್ರಜ್ವಲ್‌ ಅವರು ರಾಜತಾಂತ್ರಿಕ ಪಾಸ್ ಪೋರ್ಟ್ ಹೊಂದಿದ್ದ ಕಾರಣ ಲೋಕಸಭಾ ಸ್ಪೀಕರ್ ಗೆ ಮಾಹಿತಿ ನೀಡಿದ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕಚೇರಿಗೆ ಕರೆದೊಯ್ದಿದ್ದಾರೆ.
ಪ್ರಜ್ವಲ್‌ ಆಗಮನಕ್ಕಾಗಿ ಕಾಯುತ್ತಿದ್ದ ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ಎಸ್ ಐಟಿ ಕಚೇರಿಯಲ್ಲೂ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಹೆಚ್ಚುವರಿ ಪೊಲೀಸರನ್ನೂ ನಿಯೋಜಿಸಲಾಗಿತ್ತು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement