ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada) ನಡೆದ ಸಾಲು ಸಾಲು ಹತ್ಯೆಗಳ ಬಳಿಕ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಅವರನ್ನು ಸರ್ಕಾರ ಏಕಕಾಲಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರಕುಮಾರ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ.ಕೆ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು ನಗರ ಹಾಗೂ ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ಸರಣಿ ಹತ್ಯೆಯ ಬಳಿಕ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಒಂದು ತಿಂಗಳೊಳಗೆ ಮೂರು ದ್ವೇಷದ ಹತ್ಯೆ ನಡೆದಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಮಂಗಳೂರು ನಗರ ಹಾಗೂ ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ಸರಣಿ ಹತ್ಯೆಯ ಬಳಿಕ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಒಂದು ತಿಂಗಳೊಳಗೆ ಮೂರು ದ್ವೇಷದ ಹತ್ಯೆ ನಡೆದಿವೆ. ಈ ಹಿನ್ನೆಲೆಯಲ್ಲಿ ಈ ಅಧಿಕಾರಿಗಳನ್ನು ಹತ್ಯೆ ಮಾಡಲಾಗಿದೆ.
ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳತ್ತಮಜಲು ಎಂಬಲ್ಲಿ ಮರಳು ಅನ್ಲೋಡ್ ಮಾಡುತ್ತಿದ್ದ ರಹೀಂ ಹಾಗೂ ಕಲಂದರ್ ಮೇಲೆ ದುಷ್ಕರ್ಮಿಗಳು ತಲ್ವಾರ್ನಿಂದ ದಾಳಿ ನಡೆಸಿದ್ದರು. ಈ ವೇಳೆ ರಹೀಂ ಸ್ಥಳದಲ್ಲೇ ಮೃತಪಟ್ಟಿದ್ದರು. ಇದಕ್ಕೂ ಕೆಲ ದಿನಗಳ ಮೊದಲು ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಎಂಬವರ ಹತ್ಯೆಯಾಗಿತ್ತು. ಸುಹಾಸ್ ಶೆಟ್ಟಿ ಬರುತ್ತಿದ್ದ ಇನ್ನೋವಾ ಕಾರನ್ನು ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರು ಹಿಂಬಾಲಿಸಿಕೊಂಡು ಬಂದಿತ್ತು. ನಂತರ ಮೀನಿನ ಟೆಂಪೋವನ್ನು ಸುಹಾಸ್ ಇದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆಸಲಾಗಿತ್ತು. ಬಳಿಕ ಸ್ವಿಫ್ಟ್ ಕಾರಿನಲ್ಲಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಸಾರ್ವಜನಿಕ ರಸ್ತೆಯಲ್ಲೇ ಸುಹಾಸ ಶೆಟ್ಟಿ ಬರ್ಬರವಾಗಿ ಹತ್ಯೆಗೈದು ಅಲ್ಲಿಂದ ಪರಾರಿಯಾಗಿದ್ದರು. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಹಲವಾರ ಅಹಿತಕರ ಘಟನೆಗಳು ನಡೆದಿದ್ದವು.
ನಿಮ್ಮ ಕಾಮೆಂಟ್ ಬರೆಯಿರಿ