ನವದೆಹಲಿ : 2024 ನೇ ಸಾಲಿನ ಯುಪಿಎಸ್ಇ ಪರೀಕ್ಷೆ ನಿನ್ನೆ (ಜೂನ್ 16) ರಂದು ನಡೆದಿದ್ದು, ಅದೆಷ್ಟೋ ಅಭ್ಯರ್ಥಿಗಳು ಸಾವಿರಾರು ಕನಸುಗಳನ್ನು ಹೊತ್ತು ಪರೀಕ್ಷೆ ಬರೆದಿದ್ದಾರೆ. ಆದರೆ ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದ ಕಾರಣಕ್ಕೆ ಆಕೆಗೆ ಪರೀಕ್ಷೆ ಬರೆಯಲು ನಿರಾಕರಿಸಲಾಗಿದ್ದು, ಮಗಳ ಕನಸು ನುಚ್ಚು ನೂರಾಯಿತೆಂದು ಆಕೆಯ ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಹೆತ್ತವರ ಗೋಳಾಟದ ಈ ಮನಕಲಕುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕಳೆದೊಂದು ವರ್ಷದಿಂದ ಕಠಿಣ ಅಭ್ಯಾಸ ಮಾಡಿ ಪ್ರಿಲಿಮ್ಸ್ ಪರೀಕ್ಷೆ ಹಾಜರಾದ ಅಭ್ಯರ್ಥಿಗೆ ತಡವಾಗಿ ಅಭ್ಯರ್ಥಿಯೊಬ್ಬಳು ಆಗಮಿಸಿದ್ದಾಳೆ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸದ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಪರಿಪರಿಯಾಗಿ ಬೇಡಿದರೂ ಪರೀಕ್ಷೆ ಬರೆಯಲು ಅವಕಾಶ ನೀಡಲಿಲ್ಲ. ಪ್ರವೇಶ ನಿರಾಕರಿಸಿದ ಬೆನ್ನಲ್ಲೇ ಯವತಿ ತಾಯಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಂದೆ ಜರ್ಝರಿತರಾಗಿ ಅತ್ತು ಕರೆದಿದ್ದಾರೆ.
ಮೂಲಗಳ ಪ್ರಕಾರ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ಮಾಡಿಕೊಂಡು ಬಂದ ಯುವತಿ 9 ಗಂಟೆ ಪರೀಕ್ಷಾ ಕೇಂದ್ರದ ಗೇಟಿನ ಮುಂದೆ ಹಾಜರಾಗಿದ್ದಾರೆ. 9:30ಕ್ಕೆ ಪರೀಕ್ಷೆ ಆರಂಭಗೊಳ್ಳುತ್ತಿದೆ. 9 ಗಂಟೆಗೆ ಆಗಮಿಸಿದರೂ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಪರಿಪರಿಯಾಗಿ ಬೇಡಿಕೊಂಡರು ಪರೀಕ್ಷೆ ಬರೆಯಲು ಯುವತಿಗೆ ಪ್ರವೇಶ ನಿರಾಕರಿಸಲಾಗಿದೆ.
ಈ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ ಎನ್ನಲಾಗಿದ್ದು, ಭಾನುವಾರ (ಜೂನ್ 16) ಇಲ್ಲಿನ ಆದರ್ಶ ವಿದ್ಯಾಲಯದಲ್ಲಿ ಯು.ಪಿ.ಎಸ್.ಸಿ ಪ್ರಿಲಿಮ್ಸ್ ಪರೀಕ್ಷೆ ನಡೆದಿದ್ದು, ತಡವಾಗಿ ಬಂದ ಕಾರಣ ಈ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. ಪರೀಕ್ಷೆ 9:30 ಕ್ಕೆ ಆರಂಭದರೂ 9 ಗಂಟೆಯ ಒಳಗಾಗಿ ಅಭ್ಯರ್ಥಿಗಳೆಲ್ಲರೂ ಪರೀಕ್ಷಾ ಕೊಠಡಿಯಲ್ಲಿರಬೇಕು ಎಂಬ ನಿಯಮ ಇದೆ. ಆದರೆ ಈ ಅಭ್ಯರ್ಥಿ 9 ಗಂಟೆಗೆ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದು, ಆಕೆಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಿಲ್ಲ. ಇದರಿಂದ ಆಘಾತಕ್ಕೊಳಗಾದ ಆಕೆಯ ಹೆತ್ತವರು ದಯವಿಟ್ಟು ನನ್ನ ಮಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡಿ ಎಂದು ಪರೀಕ್ಷಾ ಕೇಂದ್ರದ ಗೇಟ್ ಬಳಿ ನಿಂದತು ಗೋಳಾಡಿದ್ದಾರೆ. ಈ ಮನಕಲಕುವ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಗಳಿಗೆ ಪ್ರವೇಶ ನಿರಾಕರಣೆ ಮಾಡಿದ ನಂತರ ತಾಯಿ ಪ್ರಜ್ಞೆ ತಪ್ಪಿದ್ದಾರೆ. ತಂದೆಗೆ ಏನು ಮಾಡಬೇಕೆಂದು ತೋಚದೆ ಅಳುತ್ತಾ, ಮಗಳ ಭವಿಷ್ಯ ಹಾಳಾಗುತ್ತಿದೆ, ಒಂದು ಅವಕಾಶ ಮಾಡಿಕೊಡಿ ಎಂದು ಗೋಳಾಡಿದ ವೀಡಿಯೊ ವೈರಲ್ ಆಗಿದೆ. ಆದರೆ ಯುವತಿ ತಂದೆಯನ್ನು ಸಮಾಧಾನಿಸುತ್ತಾ ತಾಯಿಯ ಆರೈಕೆ ಮಾಡಿದ್ದಾಳೆ. ಅಪ್ಪ ತಾಳ್ಮೆ ಕಳೆದುಕೊಳ್ಳಬೇಡಿ. ನೀರು ಕುಡಿಯಿರಿ. ಯಾಕೆ ಕೂಗಾಡುತ್ತಿದ್ದೀರಿ. ಮುಂದಿನ ವರ್ಷ ಬರೆಯುತ್ತೇನೆ, ಸಮಸ್ಯೆ ಇಲ್ಲ ಎಂದು ಯುವತಿ ತಂದೆಗೆ ಹೇಳಿದ್ದಾಳೆ.
ಒಂದು ವರ್ಷ ಹೋಯಿತಲ್ಲ ಮಗಳೇ ಎಂದು ತಂದೆ ದುಃಖ ವ್ಯಕ್ತಪಡಿಸಿದರೆ ಮಗಳು, ನನಗೆ ವಯಸ್ಸಾಗಿಲ್ಲ. ಮುಂದಿನ ವರ್ಷ ಬರೆಯುತ್ತೇನೆ. ಸಮಾಧಾನ ಮಾಡಿಕೊಳ್ಳಿ ಎಂದು ತಂದೆಯನ್ನು ಸಮಾಧಾನ ಪಡಿಸಿದ್ದಾಳೆ. ಅಲ್ಲದೆ, ಅಸ್ವಸ್ಥರಾದ ತಾಯಿಗೆ ನೀರು ಕುಡಿಸುವ ಪ್ರಯತ್ನ ಮಾಡಿದ್ದಾಳೆ. ಅಭ್ಯರ್ಥಿ ಹಾಗೂ ಆಕೆಯ ಪೋಷಕರು ಅದೆಷ್ಟೇ ಅತ್ತರೂ ಪರೀಕ್ಷೆಗೆ ಪ್ರವೇಶ ನಿರಾಕರಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ