ಬೆಂಗಳೂರು: ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ.
ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಉತ್ತಮ ಆಡಳಿತ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಯಡಿಯೂರಪ್ಪನವರ ಮಾರ್ಗದರ್ಶನ, ಸಹಕಾರದಿಂದ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಬಿಜೆಪಿಯು ಅವರ ಅನುಭವಗಳನ್ನು ಬಳಸಿಕೊಳ್ಳಲಿದೆ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲು, ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಸಭೆಯಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹೈಕಮಾಂಡ್ ಸೂಚನೆಯಂತೆ ನಿರ್ಧಾರದಂತೆ ಸಬೇ ಕರೆಯಲಾಗಿದೆ ಎಂದು ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ