ಧನುಷ್-ಐಶ್ವರ್ಯಾ ನಡುವೆ ವಿಚ್ಛೇದನವಾಗಿಲ್ಲ.. ಇದು ಕೇವಲ ಕುಟುಂಬ ಕಲಹ: ಧನುಷ್ ತಂದೆ ಕಸ್ತೂರಿರಾಜ

ಮಹತ್ವದ ಬೆಳವಣಿಗೆಯೊಂದರಲ್ಲಿ ನಟ ಧನುಷ್ ಅವರ ತಂದೆ ಕಸ್ತೂರಿರಾಜ ಸಂದರ್ಶನವೊಂದರಲ್ಲಿ ಧನುಷ್ ಮತ್ತು ಐಶ್ವರ್ಯಾ ನಡುವೆ ಯಾವುದೇ ವಿಚ್ಛೇದನದ ಮಾತುಕತೆ ಇಲ್ಲ ಎಂದು ತಿಳಿಸಿದ್ದಾರೆ.
ಸ್ನೇಹಿತರಾಗಿ, ದಂಪತಿ, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ 18 ವರ್ಷಗಳ ಕಾಲ ನಾನು ಮತ್ತು ಪತ್ನಿ ಐಶ್ವರ್ಯ ಜೀವನ ಮಾಡಿದೆವು. ಇಂದು ನಾವು ನಮ್ಮ ಮಾರ್ಗಗಳು ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ. ಐಶ್ವರ್ಯ ಮತ್ತು ನಾನು ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ನಟ ಧನುಷ್ ಕಳೆದ ಸೋಮವಾರ ಟ್ವಿಟ್ಟರ್‌ನಲ್ಲಿ ಹೇಳಿದ್ದರು.
ಆದರೆ ಧನುಷ್ ಅವರ ತಂದೆ ಕಸ್ತೂರಿರಾಜ ಮಾತ್ರ ಸಂದರ್ಶನವೊಂದರಲ್ಲಿ ಧನುಷ್ ಮತ್ತು ಐಶ್ವರ್ಯಾ ನಡುವೆ ಯಾವುದೇ ವಿಚ್ಛೇದನದ ಮಾತುಕತೆ ಇಲ್ಲ ಎಂದು ತಿಳಿಸಿದ್ದಾರೆ.
ಅವರು ಕುಟುಂಬ ಕಲಹಗಳನ್ನು( ಮನಸ್ಥಾಪಗಳನ್ನು) ಹೊಂದಿದ್ದಾರೆ, ಇದು ವಿವಾಹಿತರಲ್ಲಿ ಸಾಮಾನ್ಯ. ಸದ್ಯ ಅವರು ಚೆನ್ನೈನಲ್ಲಿ ಇಲ್ಲ, ಹೈದರಾಬಾದ್‌ನಲ್ಲಿದ್ದಾರೆ. ಅವರಿಗೆ ದೂರವಾಣಿ ಕರೆ ಮಾಡಿ ಸಲಹೆಯನ್ನೂ ನೀಡಿದ್ದೇನೆ ಎಂದು ಕಸ್ತೂರಿರಾಜ ತಿಳಿಸಿದ್ದಾರೆ.
ಧನುಷ್ ಅವರು ಸೂಪರ್ ಸ್ಟಾರ್ ರಜನಿಕಾಂತ್ ಅವರ ಹಿರಿಯ ಮಗಳು ಐಶ್ವರ್ಯ ಅವರನ್ನು 18 ನವೆಂಬರ್ 2004 ರಂದು ವಿವಾಹವಾಗಿದ್ದರು. 2004ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನುಷ್ ಮತ್ತು ಐಶ್ವರ್ಯ ಅವರು ತಮ್ಮ ಪ್ರತ್ಯೇಕತೆ ಬಗ್ಗೆ ಸೋಮವಾರದಂದು ಟ್ವಿಟರ್​ನಲ್ಲಿ ತಿಳಿಸಿದ್ದರು.

ಪ್ರಮುಖ ಸುದ್ದಿ :-   ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement