ಮುರುಘಾ ಶರಣದ ವಿರುದ್ಧ ಪಿತೂರಿ ಆರೋಪ: ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್‌ ಗೆ ಹೈಕೋರ್ಟ್‌ ಜಾಮೀನು

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಸುಳ್ಳು ಕೇಸು ದಾಖಲಿಸಲು ಕ್ರಿಮಿನಲ್ ಸಂಚು ರೂಪಿಸಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್ ಕೆ ಬಸವರಾಜನ್ ಅವರಿಗೆ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.
ಬಸವರಾಜನ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ರಾಚಯ್ಯ ಅವರ ನೇತೃತ್ವದ ರಜಾಕಾಲೀನ ಏಕಸದಸ್ಯ ಪೀಠವು ಜಾಮೀನು ನೀಡಿದೆ.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಹಷ್ಮತ್ ಪಾಷ ಅವರು “ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 120-ಬಿ (ಅಪರಾಧಿಕ ಪಿತೂರಿ), 384 (ಸುಲಿಗೆ), 420 (ವಂಚನೆ) ಮತ್ತು 366-ಎ (ಅಪ್ರಾಪ್ತ ಬಾಲಕಿಯನ್ನು ದುರುದ್ದೇಶ ಸಾಧನೆಗೆ ಬಳಸಿಕೊಂಡ ಆರೋಪ) ಅಡಿಯಲ್ಲಿ ಆರೋಪ ಮಾಡಲಾಗಿದೆ. ಇದೇ ಆರೋಪ ಸಂಬಂಧ ಈ ಹಿಂದೆ ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ತದನಂತರ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ. ಒಂದೇ ಪ್ರಕರಣದ ಸಂಬಂಧ ಎರಡೆರಡು ಎಫ್‌ಐಆರ್ ದಾಖಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ವಾದಿಸಿದರು.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

ರಾಜಕೀಯ ದುರುದ್ದೇಶದಿಂದ ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅರ್ಜಿದಾರರ ವಿರುದ್ಧ ಮಠದ ಹಾಲಿ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಅವರು ಪ್ರತಿದೂರು ದಾಖಲಿಸಿದ್ದಾರೆ. ಅಪರಾಧವೇ ನಡೆದಿಲ್ಲದಿರುವಾಗ ಅರ್ಜಿದಾರರನ್ನು ನ್ಯಾಯಾಂಗ ಬಂಧನದಲ್ಲಿಡುವುದು ಕಾನೂನು ಬಾಹಿರ. ಇನ್ನೂ ಈ ಪ್ರಕರಣದಲ್ಲಿ ಸುಲಿಗೆ ಆರೋಪ ಉದ್ಭವಿಸುವ ಪ್ರಶ್ನೆಯೇ ಇಲ್ಲ. ಆದ್ದರಿಂದ, ಜಾಮೀನು ನೀಡಬೇಕು ಎಂದು ಕೋರಿದರು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಸರ್ಕಾರಿ ಅಭಿಯೋಜಕರಾದ ಶಂಕರ ಅವರು “ಅರ್ಜಿದಾರರ ವಿರುದ್ಧ ಗಂಭೀರ ಸ್ವರೂಪದ ಆರೋಪಗಳಿವೆ. ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಜಾಮೀನು ನೀಡಬಾರದು” ಎಂದು ವಾದಿಸಿದರು.

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement