ಕಾಂಗ್ರೆಸ್​ನಲ್ಲಿ 10 ಮಂದಿ ಸಿಎಂ ರೇಸ್ ನಲ್ಲಿದ್ದಾರೆ, ಅವರಲ್ಲಿ ನಾನೂ ಒಬ್ಬ: ಡಾ ಜಿ ಪರಮೇಶ್ವರ

ತುಮಕೂರು: ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ, ಈ ರೇಸ್​ಗೆ ಈಗ ಡಾ ಜಿ ಪರಮೇಶ್ವರ ಅವರು ಸೇರ್ಪಡೆಯಾಗಿದ್ದಾರೆ.
ತುಮಕೂರು ‌ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿ ಡಾ.ಪರಮೇಶ್ವರ ಅವರು ಕಾಂಗ್ರೆಸ್​ನಲ್ಲಿ 10 ಮಂದಿ ಮುಖ್ಯಮಂತ್ರಿಗಳಾಗುವ ಅಪೇಕ್ಷೆ ಇದ್ದವರಿದ್ದಾರೆ. ಆ ಹತ್ತು ಮಂದಿಯಲ್ಲಿ ನಾನೂ ಒಬ್ಬ ಎಂದು ಹೇಳಿದ್ದು, ಆ ಮೂಲಕ ಮುಖ್ಯಮಂತ್ರಿ ಸ್ಥಾನಕ್ಕೆ ತಾನೂ ಪ್ರಬಲ ಆಕಾಂಕ್ಷಿ ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಕಾಂಗ್ರೆಸ್‌ನಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಮಾಡುವುದಿಲ್ಲ. ಯಾರು ಸಮರ್ಥರು ಹಾಗೂ ಅವರ ಹಿರಿತನ ಎಲ್ಲವನ್ನೂ ಪರಿಗಣಿಸಿ ಮುಖ್ಯಮಂತ್ರಿಗಳ ಹುದ್ದೆಗೆ ಆಯ್ಕೆ ಮಾಡುತ್ತಾರೆ. ನಾನು ರಾಜಕಾರಣ ಮಾಡುವುದೂ ಅಧಿಕಾರಕ್ಕೆ ಬರಬೇಕು ಎಂಬ ಕಾರಣಕ್ಕೆ ಎಂದು ಹೇಳಿದ ಅವರು, ಮುಖ್ಯಮಂತ್ರಿ ಆಗಬೇಕು ಎನ್ನುವ ಬಹುತೇಕ ಎಲ್ಲರಿಗೂ ಇರುತ್ತದೆ. ಆದರೆ ಅಧಿಕಾರಕ್ಕೆ ಬಂದ ಮೇಲೆ ಹೈಕಮಾಂಡ್ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ನಮ್ಮ ಮೊದಲು ಗುರಿ ಹಾಗೂ ಆದ್ಯತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು. ಬಹುಮತ ಪಡೆದ ನಂತರ ಮುಖ್ಯಮಂತ್ರಿ ಯಾರಾಗುತ್ತಾರೆ ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದರು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement