ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ರಾಜಸ್ಥಾನ ಸಂಸದ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ, ರಾಜಸ್ಥಾನದಿಂದ ಎರಡು ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಚುರು ಸಂಸದ ರಾಹುಲ್ ಕಸ್ವಾನ್ ಸೋಮವಾರ (ಮಾರ್ಚ್ 11) ಬಿಜೆಪಿ ಪ್ರಾಥಮಿಕ ಸದಸ್ಯತ್ವ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಅವರು ನವದೆಹಲಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ.
ಬಿಜೆಪಿಯು ರಾಹುಲ್‌ ಕಸ್ವಾನ್ ಬದಲಿಗೆ, ಚುರು ಕ್ಷೇತ್ರದಲ್ಲಿ ಬಿಜೆಪಿಯು ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಬಾರಿ ಚಿನ್ನ ಮತ್ತು ಒಂದು ಬಾರಿ ಬೆಳ್ಳಿ ಗೆದ್ದಿರುವ ದೇವೇಂದ್ರ ಜಜಾರಿಯಾ ಅವರಿಗೆ ಟಿಕೆಟ್‌ ನೀಡಿದೆ.

ಚುರು ಸಂಸದ ರಾಹುಲ್‌ ಕಸ್ವಾನ್‌ ಅವರು ‘ರಾಜಕೀಯ ಕಾರಣಗಳನ್ನು’ ಉಲ್ಲೇಖಿಸಿ ಎಕ್ಸ್‌ನಲ್ಲಿ ರಾಜೀನಾಮೆ ಪ್ರಕಟಿಸಿದ್ದಾರೆ. 10 ವರ್ಷಗಳ ಕಾಲ ಚುರು ಕ್ಷೇತ್ರದ ಲೋಕಸಭೆ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಚುರು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ರಾಹುಲ್ ಕಸ್ವಾನ್ ಅವರು 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದಾರೆ. ಆದರೆ, ಈ ಬಾರಿ ಅವರನ್ನು ಕಣಕ್ಕಿಳಿಸದಿರಲು ಬಿಜೆಪಿ ನಿರ್ಧರಿಸಿದ್ದು, ಬದಲಿಗೆ ಚುರು ಕ್ಷೇತ್ರಕ್ಕೆ ಪ್ಯಾರಾ ಒಲಿಂಪಿಯನ್ ದೇವೇಂದ್ರ ಜಜಾರಿಯಾ ಅವರ ಹೆಸರನ್ನು ಸೂಚಿಸಿದೆ. ಈ ನಿರ್ಧಾರದಿಂದ ರಾಹುಲ್ ಕಸ್ವಾನ್ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ಟಿ20 ವಿಶ್ವಕಪ್ ಕ್ರಿಕೆಟ್‌ 2024 : 15 ಆಟಗಾರರ ಭಾರತದ ತಂಡ ಪ್ರಕಟ ; ಕೆಎಲ್ ರಾಹುಲ್ ಗೆ ಕೊಕ್

‘ನನ್ನ ಅಪರಾಧವೇನು…? ‘
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಕಡೆಗಣಿಸಲ್ಪಟ್ಟ ನಂತರ ಸ್ಪಷ್ಟ ನಂತರ ರಾಹುಲ್ ಕಸ್ವಾನ್ ಅವರು ಮೂರನೇ ಅವಧಿಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಪಕ್ಷದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಪಕ್ಷದಿಂದ ಟಿಕೆಟ್ ನಿರಾಕರಿಸಿದ ನಂತರ ಆಕ್ರೋಶ ವ್ಯಕ್ತಪಡಿಸಿದ ಅವರು, “ನನ್ನ ಅಪರಾಧ ಏನು?” ಎಂದು ಕೇಳಿದ್ದಾರೆ.
X ನಲ್ಲಿನ ಪೋಸ್ಟ್‌ನಲ್ಲಿ, ಕಸ್ವಾನ್, “ನನ್ನ ಅಪರಾಧವೇನು? ನಾನು ಪ್ರಾಮಾಣಿಕನಾಗಿರಲಿಲ್ಲವೇ? ನಾನು ಕಷ್ಟಪಟ್ಟು ಕೆಲಸ ಮಾಡಲಿಲ್ಲವೇ? ನನಗೆ ನಿಷ್ಠೆಯಲ್ಲವೇ? ನಾನು ಕಳಂಕಿತನಾಗಿದ್ದೇನೆಯೇ? ಎಂದು ಪ್ರಶ್ನಿಸಿದ್ದಾರೆ. ಪ್ರಧಾನಮಂತ್ರಿಗಳ ಎಲ್ಲಾ ಯೋಜನೆಗಳ ಅನುಷ್ಠಾನದಲ್ಲಿ ನಾನೇ ಮುಂಚೂಣಿಯಲ್ಲಿದ್ದೆ. ಇನ್ನೇನು ಬೇಕಿತ್ತು. ಈ ಪ್ರಶ್ನೆ ಕೇಳಿದಾಗಲೆಲ್ಲ ಎಲ್ಲರೂ ಮೂಕವಿಸ್ಮಿತರಾದರು.ಇದಕ್ಕೆ ಉತ್ತರ ನೀಡಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ ಎಂದರು.

ರಾಹುಲ್ ಕಸ್ವಾನ್ ಅವರ ತಂದೆ ರಾಮ ಸಿಂಗ್ ಅವರು ಬಿಜೆಪಿ ಸಂಸದರಾಗಿದ್ದರು ಮತ್ತು ಚುರು ಕ್ಷೇತ್ರದ ಶಾಸಕರಾಗಿದ್ದರು. ಅವರ ತಾಯಿ ಕಮಲಾ ಕಸ್ವಾನ್ ಸಾದುಲಪುರದಿಂದ ಬಿಜೆಪಿ ಶಾಸಕಿಯಾಗಿದ್ದರು.
ನಾಲ್ವರು ಕೇಂದ್ರ ಸಚಿವರು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಒಳಗೊಂಡ ರಾಜಸ್ಥಾನದ 25 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ ಬಿಜೆಪಿ ತನ್ನ ಲೋಕಸಭಾ ಚುನಾವಣಾ ಅಭ್ಯರ್ಥಿಗಳನ್ನು ಘೋಷಿಸಿದೆ.
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮನಿರ್ದೇಶನಗೊಳ್ಳದ ಹಾಲಿ ಸಂಸದರ ಪೈಕಿ ಚುರುದಿಂದ ರಾಹುಲ್ ಕಸ್ವಾನ್, ಭರತಪುರದಿಂದ ರಂಜಿತಾ ಕೋಲಿ, ಜಲೋರ್‌ನಿಂದ ದೇವಜಿ ಪಟೇಲ್, ಉದಯಪುರದಿಂದ ಅರ್ಜುನ ಲಾಲ ಮೀನಾ ಮತ್ತು ಬನ್ಸ್ವಾರಾದಿಂದ ಕನಕಮಲ ಕತಾರಾ ಸೇರಿದ್ದಾರೆ. ರಾಜ್ಯದಲ್ಲಿ ಉಳಿದ 10 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪಕ್ಷ ಇನ್ನೂ ಘೋಷಿಸಿಲ್ಲ.

ಪ್ರಮುಖ ಸುದ್ದಿ :-   ವೀಡಿಯೊ....| ವಿಚ್ಛೇದನ ಪಡೆದ ಮಗಳನ್ನು ವಾದ್ಯಗಳ ಸಮೇತ ಮನೆಗೆ ಕರೆತಂದ ತಂದೆ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement