ಧಾರವಾಡ: ಜೆಎಸ್‌ಎಸ್‌ ಮಂಜುನಾಥೇಶ್ವರ ಐಟಿಐ ಕಾಲೇಜಿಗೆ ಕರ್ಣಾಟಕ ಬ್ಯಾಂಕಿನಿಂದ ಬೊಲೆರೊ ವಾಹನ ಹಸ್ತಾಂತರ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಕರ್ಣಾಟಕ ಬ್ಯಾಂಕಿನವರು ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿಗೆ ನೀಡುತ್ತಿರುವ ಬೊಲೆರೋ ವಾಹನವನ್ನು ಕರ್ಣಾಟಕ ಬ್ಯಾಂಕಿನ ಎ.ಜಿ.ಎಂ ವಾದಿರಾಜ. ಕೆ. ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳದ ಹರ್ಷೇಂದ್ರಕುಮಾರ. ಜೆ.ಎಸ್.ಎಸ್ ಆಡಳಿತ ಮಂಡಳಿ ಸದಸ್ಯರಾದ ಎಂ.ಎನ್ ತಾವರಗೇರಿ, ಶ್ರೀಕಾಂತ ಕೆಮ್ತೂರ, ಕೇಶವ ದೇಸಾಯಿ, ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ, ಕರ್ನಾಟಕ ಬ್ಯಾಂಕನ ಮ್ಯಾನೇಜರ ಕಿರಣ ಬಿದರಿ, ಜೆ.ಎಸ್.ಎಸ್ ಐ.ಟಿ.ಐ ನ ಪ್ರಾಚಾರ್ಯರಾದ ಮಹಾವೀರ ಉಪಾದ್ಯೆ, ಸೂರಜ್ ಜೈನ್ ಉಪಸ್ಥಿತರಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement