ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಿಹಿಸುದ್ದಿ ನೀಡಿದ್ದಾರೆ. ಶೀಘ್ರವೇ 13 ಸಾವಿರ ಸಾರಿಗೆ ಸಿಬ್ಬಂದಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿ ಮುಂಭಾಗ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ನಿಗಮದಲ್ಲಿ ಸುಮಾರು 8 ವರ್ಷಗಳಿಂದ ನೇಮಕಾತಿಯೇ ಮಾಡಿಲ್ಲ. 2016 ರಲ್ಲಿ ಸಿಬ್ಬಂದಿ ನೇಮಕಾತಿ ಮಾಡಲಾಗಿತ್ತು. ಆದ್ದರಿಂದ ಸಿಬ್ಬಂದಿ ನೇಮಕಾತಿ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಇದಕ್ಕೆ ಅನುಮೋದನೆ ನೀಡದ ತಕ್ಷಣ ಚಾಲಕರು, ನಿರ್ವಾಹಕರು ಹಾಗೂ ಮೆಕೆನಿಕ್ ಗಳು ಸೇರಿದಂತೆ 13 ಸಾವಿರ ಸಾರಿಗೆ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಬಜೆಟ್ ನಲ್ಲಿ 5,000 ಕೋಟಿ ರೂ.ಮೀಸಲಿಡಲಾಗಿದೆ. ಒಂದು ವರ್ಷದಲ್ಲಿ ಬಿಎಂಟಿಸಿಗೆ 1 ಸಾವಿರ ಬಸ್ ಸೇರಿದಂತೆ ನಾಲ್ಕು ನಿಗಮಗಳಿಗೆ 5 ಸಾವಿರ ಹೊಸ ಬಸ್ ಗಳನ್ನು ಖರೀದಿ ಮಾಡಲಾಗುವುದು ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ